ಹೇಮಂತ್ ಗೌಡ ಕೊಲೆ ಪ್ರಕರಣ: ಕೊಲೆ ಪ್ರಕರಣದ ಪ್ರಮುಖ ಆರೋಪಿ ಬಂಧನ

ಹೇಮಂತ್ ಗೌಡ ಕೊಲೆ ಪ್ರಕರಣದ ಪ್ರಮುಖ ಆರೋಪಿ ನರಸಿಂಹಮೂರ್ತಿ ಅಲಿಯಾಸ್ ಮಿಟ್ಟೆ ಮತ್ತು ಮತ್ತೊಬ್ಬ ಆರೋಪಿಯನ್ನ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಆರೋಪಿಗಳ ಪತ್ತೆಗಾಗಿ 10 ತಂಡಗಳನ್ನ ಪೊಲೀಸರು ನಿಯೋಜನೆ ಮಾಡಲಾಗಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮೇ 10 ರಂದು ದೊಡ್ಡಬಳ್ಳಾಪುರ ಹೊರವಲಯದ ಬಾಶೆಟ್ಟಿಹಳ್ಳಿಯ ಜೆಪಿ ಪ್ಯಾಲೇಸ್ ಬಳಿ ಯುವಕನ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದ್ದು, ಮುಂಜಾನೆ ವೇಳೆ ನವೋದಯ ಶಾಲೆ ಬಳಿ ಹಲ್ಲೆಗೊಳಗಾಗಿದ್ದ ಹೇಮಂತ್ ಗೌಡನ ಶವ ಪತ್ತೆಯಾಗಿತ್ತು, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಯುವಕನ ತಂದೆ ಶಶಿಕುಮಾರ್ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದು, ಮೇಡಹಳ್ಳಿಯ ನರಸಿಂಹಮೂರ್ತಿ ಅಲಿಯಾಸ್ ಮಿಟ್ಟೆ ಮತ್ತು ಆತನ ಜೊತೆಯಲ್ಲಿದ್ದ 9 ಜನರ ತಂಡ ತನ್ನ ಮಗನನ್ನು ಕೊಲೆ ಮಾಡಿದ್ದಾರೆಂದು ದೂರಿನಲ್ಲಿ ದಾಖಲಿಸಿದ್ದರು.

ಘಟನೆ ನಂತರ ಆರೋಪಿಗಳು ಪರಾರಿಯಾಗಿದ್ದರು, ಆರೋಪಿಗಳ ಪತ್ತೆಗಾಗಿ 10 ಪೊಲೀಸ್ ತಂಡಗಳ ರಚನೆ ಮಾಡಲಾಗಿದ್ದು, ಇಂದು ಕೋರ್ಟ್ ನಲ್ಲಿ ಶರಣಾಗುವುದಕ್ಕೆ ಆರೋಪಿಗಳು ಬರುತ್ತಿರುವ ಮಾಹಿತಿ ಪೊಲೀಸರಿಗೆ ಸಿಕ್ಕಿದ್ದು, ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಆರೋಪಿಗಳಾದ ನರಸಿಂಹಮೂರ್ತಿ ಮತ್ತು ಮತ್ತೊಬ್ಬನನ್ನು ಬಂಧಿಸಿರುವುದಾಗಿ ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿಗಳಾದ ಮಲ್ಲಿಕಾರ್ಜುನ ಬಾಲದಂಡಿಯವರು ತಿಳಿಸಿದ್ದಾರೆ.

‘ಎನ್ ಕೌಂಟರ್ ನಡೆದಿಲ್ಲ’, ‘ಸತ್ಯಕ್ಕೆ ದೂರವಾದ ಸುದ್ದಿ’

ಅದೇರೀತಿ, ಬಾಶೆಟ್ಟಿಹಳ್ಳಿಯ ನವೋದಯ ಶಾಲೆ ಸಮೀಪ ನಡೆದಿದ್ದ ಯುವಕನ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಇಂದು ಮಧ್ಯಾಹ್ನ ಎನ್ ಕೌಂಟರ್ ಮಾಡಲಾಗಿದೆ ಎಂಬ ಸುದ್ದಿಯನ್ನು ಪೊಲೀಸರು ತಳ್ಳಿಹಾಕಿದ್ದಾರೆ.

ಪ್ರಕರಣದ ಎ1 ಆರೋಪಿ ನರಸಿಂಹಮೂರ್ತಿ ಅಲಿಯಾಸ್‌ ಮಿಟ್ಟೆ ಎಂಬಾತನನ್ನು ಬಂಧಿಸುವ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದ. ಆಗ ಪೊಲೀಸರು ಆತ್ಮರಕ್ಷಣೆಗಾಗಿ ಎನ್ ಕೌಂಟರ್ ಮಾಡಿದ್ದಾರೆ ಎಂಬುದು ಮೂಲಗಳಿಂದ ತಿಳಿದು ಬಂದಿತ್ತು.

ಎನ್ ಕೌಂಟರ್ ಸುದ್ದಿ ಎಲ್ಲೆಡೆ ಕಾಳ್ಗಿಚ್ಚಿನಂತೆ ಹಬ್ಬಿತು.‌ ಈ ಕುರಿತ ಸುದ್ದಿಗೆ ಸ್ಪಷ್ಟೀಕರಣ ನೀಡಿದ ಗ್ರಾಮಾಂತರ ಠಾಣೆ ಇನ್ ಸ್ಪೆಕ್ಟರ್ ಸಾಧಿಕ್ ಪಾಷಾ ಅವರು, ಎನ್ ಕೌಂಟರ್ ಎಂಬುದು ಸತ್ಯಕ್ಕೆ ದೂರವಾದ ಸುದ್ದಿ.‌ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.

Ramesh Babu

Journalist

Recent Posts

ನಿನ್ನೆ ಪ್ರಧಾನಿ ನರೇಂದ್ರ ಮೋದಿ ಭಾಷಣ ಕೇಳಿದ ನಂತರ ಇದೆಲ್ಲಾ ನೆನಪಾದವು….

ರಾತ್ರಿ 8 - 30 ರ ಸಮಯ....... ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನಿನ್ನೆ ರಾತ್ರಿ 8.30 ರ…

6 hours ago

ಬೆಂ.ಗ್ರಾ ಜಿ.ಪಂ ನೂತನ ಸಿ.ಇ.ಒ ಡಾ.ವಸಂತಿ ಅಮರ್ ಬಿ.ವಿ ನೇಮಕ

ಬೆಂಗಳೂರು ಗ್ರಾಮಾಂತರ ಜಿ.ಪಂ ನೂತನ ಸಿ.ಇ.ಒ ಆಗಿ ಡಾ.ವಸಂತಿ ಅಮರ್ ಬಿ.ವಿ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.

18 hours ago

ನಾಳೆ( ಏ.19ಕ್ಕೆ) ತಾಲೂಕಿನ ಕೆಲ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ ನಗರದಲ್ಲಿ ಏ.19 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F02-Raghunathapura, F07-Locall, F14-Scoutcamp & F21-KVN…

20 hours ago

ಬಸವ ಜಯಂತಿ ಮತ್ತು ಅಕ್ಷಯ ತೃತೀಯ ಹಿನ್ನೆಲೆ: ಬಾಲ್ಯವಿವಾಹ ತಡೆಗೆ ಜಾಗೃತಿ ಅಗತ್ಯ- ಡಿಸಿ ಡಾ. ಕೆ.ಎನ್ ಅನುರಾಧ

ಏಪ್ರಿಲ್ 20 ರಂದು ಬಸವ ಜಯಂತಿ ಮತ್ತು ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಬಾಲ್ಯವಿವಾಹಗಳು ಆಗುವ ಸಾಧ್ಯತೆ ಇದ್ದು, ಬಾಲ್ಯ ವಿವಾಹಗಳನ್ನು…

20 hours ago

ಬಿಲ್ ಕಲೆಕ್ಟರ್ ಲೋಕಾ ಬಲೆಗೆ

ಬಿಲ್ ಕಲೆಕ್ಟರ್ ಲೋಕಾ ಬಲೆಗೆ ಬಿದ್ದಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.. ಲೋಕಾ ಬಲೆಗೆ ಬಿದ್ದ ಬಿಲ್ ಕಲೆಕ್ಟರ್ 'ಇ' ಖಾತೆ…

1 day ago

ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಕ್ಯಾಂಟರ್ ಡಿಕ್ಕಿ: ಟ್ರ್ಯಾಕ್ಟರ್ ಚಾಲಕ ಸಾವು

ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಚಾಲಕ ಸಾವನ್ನಪ್ಪಿರುವ ಘಟನೆ ದಾಬಸ್ ಪೇಟೆ - ಹೊಸಕೋಟೆ…

1 day ago