Categories: ತುಮಕೂರು

ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ಡಿಸಿಎಂ ಡಿಕೆಶಿ ಪರಿಶೀಲನೆ

ತುಮಕೂರು ಜಿಲ್ಲೆ ಸುಂಕಾಪುರದ ಟಿ.ಬಿ. ಕೆನಾಲ್ 70 ನೇ ಕಿ.ಮೀ.ನಲ್ಲಿ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿಯನ್ನು ಡಿಸಿಎಂ ಡಿಕೆಶಿ ಅವರು ದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ, ಮಾಜಿ ಸಚಿವ ಟಿ.ಬಿ. ಜಯಚಂದ್ರ, ಶಾಸಕರಾದ ಗುಬ್ಬಿ ಶ್ರೀನಿವಾಸ್, ಡಾ. ರಂಗನಾಥ್ ಹಾಗೂ ಅಧಿಕಾರಿಗಳ ಜೊತೆ ಪರಿಶೀಲಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕ್ಷೇತ್ರವೊಂದಕ್ಕೆ ಸೀಮಿತವಾಗದೆ, ನಾನು ಕರ್ನಾಟಕ ರಾಜ್ಯದ ನೀರಾವರಿ ಸಚಿವನಾಗಿ ತುಮಕೂರಿನ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದ್ದೇನೆ. ತುಮಕೂರು ನನಗೆ ಅತ್ಯಂತ ಹತ್ತಿರವಾದ ಜಿಲ್ಲೆ ಎಂದರು.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಸರ್ಕಾರದಲ್ಲಿ ನಾನು ನೀರಾವರಿ ಸಚಿವನಾಗಿದ್ದಾಗ ಈ ಯೋಜನೆಗೆ ಮಂಜೂರಾತಿ ನೀಡಲಾಗಿತ್ತು. ಆದರೆ, ನಂತರ ಅಧಿಕಾರಕ್ಕೆ ಬಂದ ಯಡಿಯೂರಪ್ಪ ಅವರ ಸರ್ಕಾರ ಈ ಯೋಜನೆಯನ್ನು ಸ್ಥಗಿತಗೊಳಿಸಿತ್ತು. ಆಗ ಕೇವಲ 600 ಕೋಟಿ ರೂ.ಗಳಲ್ಲಿ ಮುಗಿಯಬೇಕಿದ್ದ ಈ ಕಾಮಗಾರಿಯ ವೆಚ್ಚ ಈಗ 1000 ಕೋಟಿ ರೂ.ಗಳಿಗೆ ಏರಿಕೆಯಾಗಿದೆ ಎಂದು ತಿಳಿಸಿದರು.

ಈಗಾಗಲೇ ನಾವು ಈ ಯೋಜನೆಯ ಪೈಪ್‌ಗಳ ಖರೀದಿಗೆ 400 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದು, ನಾಲ್ಕೈದು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಬಹುದು. ಸಮುದ್ರಕ್ಕೆ ಹರಿದು ಹೋಗುವ ನೀರನ್ನು ರೈತರ ಉಪಯೋಗಕ್ಕೆ ಬಳಸಿಕೊಳ್ಳಲು ಚಾನಲ್‌ಗಳ ಮೂಲಕ ನೀರು ಹರಿಸುವ ಕೆಲಸ ನಡೆಯಬೇಕು ಎಂದರು.

ನಮ್ಮ ಈ ಯೋಜನೆ ಒಂದು ಅಭಿವೃದ್ಧಿ ಕೆಲಸವಾಗಿದ್ದು, ಇದರಲ್ಲಿ ರಾಜಕೀಯ ಬೆರೆಸಬಾರದು. ತುಮಕೂರು ಜಿಲ್ಲೆಯ ಅಭಿವೃದ್ಧಿಗಾಗಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ಯಾವುದೇ ರೈತರಿಗೆ ನೀರು ಹಂಚಿಕೆಯಲ್ಲಿ ಅನ್ಯಾಯವಾಗದಂತೆ ನಾವು ನೋಡಿಕೊಳ್ಳುತ್ತೇವೆ ಎಂದು ತಿಳಿಸಿದರು.

ಹೋರಾಟಗಾರರಿಗೆ ನನ್ನದೊಂದು ವಿನಂತಿ, ನಾವು ಬೇರೆ ರಾಜ್ಯಗಳ ಜೊತೆ ನೀರಿಗಾಗಿ ಹೋರಾಟ ಮಾಡುವ ಹಾಗೆ ನಮ್ಮಲ್ಲೇ ಹೋರಾಟ ಮಾಡುವುದು ಬೇಡ. ನಾವೆಲ್ಲರೂ ಒಂದೇ ರಾಜ್ಯದವರು, ರಕ್ತ ಮತ್ತು ಸಂಬಂಧಗಳನ್ನು ಹಂಚಿಕೊಂಡಿದ್ದೇವೆ. ಆದ್ದರಿಂದ ನಾವೆಲ್ಲರೂ ಒಟ್ಟಾಗಿ ಸೇರಿ ಕೆಲಸ ಮಾಡಬೇಕು ಎಂದು ಹೇಳಿದರು.

ಈ ಯೋಜನೆಯಲ್ಲಿ ಒಂದು ತಾಲ್ಲೂಕಿಗೆ ಎಷ್ಟು ನೀರು ಒದಗಿಸಲಾಗಿದೆಯೋ ಅಷ್ಟನ್ನೇ ಬಳಸಿಕೊಳ್ಳಲು ಅವಕಾಶವಿದೆ. ಯಾವುದೇ ಅನಧಿಕೃತ ಗೇಟ್‌ಗಳನ್ನು ಹಾಕಲು ಅವಕಾಶವಿಲ್ಲ. ‘ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು’ ಎಂಬ ತತ್ವದ ಮೇಲೆ ನಾವು ಈ ಯೋಜನೆಯನ್ನು ಜಾರಿಗೆ ತಂದಿದ್ದೇವೆ ಎಂದರು.

Ramesh Babu

Journalist

Recent Posts

ಬೈಕ್-ಟಿಪ್ಪರ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…

1 hour ago

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…

4 hours ago

ಮನರೇಗಾ ಉಳಿಸಲು ಗ್ರಾ.ಪಂ ಮಟ್ಟದಲ್ಲೂ ಹೋರಾಟ- ಜಿಲ್ಲಾ ಎಸ್.ಟಿ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ

ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…

6 hours ago

ಉಚಿತ ಆರೋಗ್ಯ ತಪಾಸಣಾ ಶಿಬಿರ

ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್‌ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…

6 hours ago

ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್-ಬಿಜೆಪಿ ಮಧ್ಯೆ ಘರ್ಷಣೆ ಜೋರು….ಮಾತು ತಪ್ಪಿದ ಶಾಸಕ ಎಂದ ಜೆಡಿಎಸ್ ನಾಯಕರು- ನಾನು ಮಾತು ತಪ್ಪಿಲ್ಲ, ಕೊಟ್ಟ ಮಾತಿನಂತೆ ನಡೆಯುತ್ತೇನೆ – ಶಾಸಕ ಧೀರಜ್ ಮುನಿರಾಜು

ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…

13 hours ago

ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು…..

ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…

14 hours ago