Categories: ತುಮಕೂರು

ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ಡಿಸಿಎಂ ಡಿಕೆಶಿ ಪರಿಶೀಲನೆ

ತುಮಕೂರು ಜಿಲ್ಲೆ ಸುಂಕಾಪುರದ ಟಿ.ಬಿ. ಕೆನಾಲ್ 70 ನೇ ಕಿ.ಮೀ.ನಲ್ಲಿ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿಯನ್ನು ಡಿಸಿಎಂ ಡಿಕೆಶಿ ಅವರು ದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ, ಮಾಜಿ ಸಚಿವ ಟಿ.ಬಿ. ಜಯಚಂದ್ರ, ಶಾಸಕರಾದ ಗುಬ್ಬಿ ಶ್ರೀನಿವಾಸ್, ಡಾ. ರಂಗನಾಥ್ ಹಾಗೂ ಅಧಿಕಾರಿಗಳ ಜೊತೆ ಪರಿಶೀಲಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕ್ಷೇತ್ರವೊಂದಕ್ಕೆ ಸೀಮಿತವಾಗದೆ, ನಾನು ಕರ್ನಾಟಕ ರಾಜ್ಯದ ನೀರಾವರಿ ಸಚಿವನಾಗಿ ತುಮಕೂರಿನ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದ್ದೇನೆ. ತುಮಕೂರು ನನಗೆ ಅತ್ಯಂತ ಹತ್ತಿರವಾದ ಜಿಲ್ಲೆ ಎಂದರು.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಸರ್ಕಾರದಲ್ಲಿ ನಾನು ನೀರಾವರಿ ಸಚಿವನಾಗಿದ್ದಾಗ ಈ ಯೋಜನೆಗೆ ಮಂಜೂರಾತಿ ನೀಡಲಾಗಿತ್ತು. ಆದರೆ, ನಂತರ ಅಧಿಕಾರಕ್ಕೆ ಬಂದ ಯಡಿಯೂರಪ್ಪ ಅವರ ಸರ್ಕಾರ ಈ ಯೋಜನೆಯನ್ನು ಸ್ಥಗಿತಗೊಳಿಸಿತ್ತು. ಆಗ ಕೇವಲ 600 ಕೋಟಿ ರೂ.ಗಳಲ್ಲಿ ಮುಗಿಯಬೇಕಿದ್ದ ಈ ಕಾಮಗಾರಿಯ ವೆಚ್ಚ ಈಗ 1000 ಕೋಟಿ ರೂ.ಗಳಿಗೆ ಏರಿಕೆಯಾಗಿದೆ ಎಂದು ತಿಳಿಸಿದರು.

ಈಗಾಗಲೇ ನಾವು ಈ ಯೋಜನೆಯ ಪೈಪ್‌ಗಳ ಖರೀದಿಗೆ 400 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದು, ನಾಲ್ಕೈದು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಬಹುದು. ಸಮುದ್ರಕ್ಕೆ ಹರಿದು ಹೋಗುವ ನೀರನ್ನು ರೈತರ ಉಪಯೋಗಕ್ಕೆ ಬಳಸಿಕೊಳ್ಳಲು ಚಾನಲ್‌ಗಳ ಮೂಲಕ ನೀರು ಹರಿಸುವ ಕೆಲಸ ನಡೆಯಬೇಕು ಎಂದರು.

ನಮ್ಮ ಈ ಯೋಜನೆ ಒಂದು ಅಭಿವೃದ್ಧಿ ಕೆಲಸವಾಗಿದ್ದು, ಇದರಲ್ಲಿ ರಾಜಕೀಯ ಬೆರೆಸಬಾರದು. ತುಮಕೂರು ಜಿಲ್ಲೆಯ ಅಭಿವೃದ್ಧಿಗಾಗಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ಯಾವುದೇ ರೈತರಿಗೆ ನೀರು ಹಂಚಿಕೆಯಲ್ಲಿ ಅನ್ಯಾಯವಾಗದಂತೆ ನಾವು ನೋಡಿಕೊಳ್ಳುತ್ತೇವೆ ಎಂದು ತಿಳಿಸಿದರು.

ಹೋರಾಟಗಾರರಿಗೆ ನನ್ನದೊಂದು ವಿನಂತಿ, ನಾವು ಬೇರೆ ರಾಜ್ಯಗಳ ಜೊತೆ ನೀರಿಗಾಗಿ ಹೋರಾಟ ಮಾಡುವ ಹಾಗೆ ನಮ್ಮಲ್ಲೇ ಹೋರಾಟ ಮಾಡುವುದು ಬೇಡ. ನಾವೆಲ್ಲರೂ ಒಂದೇ ರಾಜ್ಯದವರು, ರಕ್ತ ಮತ್ತು ಸಂಬಂಧಗಳನ್ನು ಹಂಚಿಕೊಂಡಿದ್ದೇವೆ. ಆದ್ದರಿಂದ ನಾವೆಲ್ಲರೂ ಒಟ್ಟಾಗಿ ಸೇರಿ ಕೆಲಸ ಮಾಡಬೇಕು ಎಂದು ಹೇಳಿದರು.

ಈ ಯೋಜನೆಯಲ್ಲಿ ಒಂದು ತಾಲ್ಲೂಕಿಗೆ ಎಷ್ಟು ನೀರು ಒದಗಿಸಲಾಗಿದೆಯೋ ಅಷ್ಟನ್ನೇ ಬಳಸಿಕೊಳ್ಳಲು ಅವಕಾಶವಿದೆ. ಯಾವುದೇ ಅನಧಿಕೃತ ಗೇಟ್‌ಗಳನ್ನು ಹಾಕಲು ಅವಕಾಶವಿಲ್ಲ. ‘ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು’ ಎಂಬ ತತ್ವದ ಮೇಲೆ ನಾವು ಈ ಯೋಜನೆಯನ್ನು ಜಾರಿಗೆ ತಂದಿದ್ದೇವೆ ಎಂದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಕಾರ್ಮಿಕ–ರೈತರ ಆಕ್ರೋಶ; ಎಸಿ ಕಚೇರಿಗೆ ಮುತ್ತಿಗೆ: ನಾಲ್ಕು ಕಾರ್ಮಿಕ ಸಂಹಿತೆ ರದ್ದು, ವಿದ್ಯುತ್ ಖಾಸಗೀಕರಣ ಕೈಬಿಡಲು ಆಗ್ರಹ

ದೊಡ್ಡಬಳ್ಳಾಪುರ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು ಹಾಗೂ ವಿದ್ಯುತ್ ಖಾಸಗೀಕರಣ ಕೈಬಿಡಬೇಕು ಸೇರಿದಂತೆ ವಿವಿಧ…

2 hours ago

ಕಾರು–ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರ ಸಾವು

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ದಾಬಸ್‌ಪೇಟೆ–ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿ 648ರಲ್ಲಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ…

2 hours ago

ಕೆಐಎಎಲ್ ಏರ್‌ಪೋರ್ಟ್ ಬಳಿಯ ಖಾಸಗಿ ಹೋಟೆಲ್‌ನಲ್ಲಿ ಬೆಚ್ಚಿಬೀಳಿಸುವ ಘಟನೆ:

ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಖಾಸಗಿ ಹೋಟೆಲ್‌ನಲ್ಲಿ ಇಬ್ಬರು ಬಾಲಕಿಯರು ಶಂಕಾಸ್ಪದವಾಗಿ ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ…

14 hours ago

ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಿಸಿ ಅರ್ಜುನ್ ವಿರಾಟ್ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಯುವ ಮೋರ್ಚಾ ನಗರ ಪ್ರಧಾನ ಕಾರ್ಯದರ್ಶಿ ಅರ್ಜುನ್ ವಿರಾಟ್ ಅವರ ಜನ್ಮದಿನದ ಹಿನ್ನೆಲೆ, ಅವರ ಸ್ನೇಹಿತರು ಹಾಗೂ ಒಡನಾಡಿಗಳು…

19 hours ago

ಸೈಕಲ್ ಗೋಡಾನ್ ಗೆ ಆಕಸ್ಮಿಕ ಬೆಂಕಿ; ಬೆಲೆಬಾಳುವ ಸೈಕಲ್‌ಗಳು ಸುಟ್ಟು ಕರಕಲು

ದೊಡ್ಡಬಳ್ಳಾಪುರ: ನಗರದ ಸೈಕಲ್ ಗೋಡೌನ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ, ಗೋಡೌನ್‌ನಲ್ಲಿದ್ದ ಅಪಾರ ಪ್ರಮಾಣದ ಬೆಲೆಬಾಳುವ ಸೈಕಲ್‌ಗಳು ಸುಟ್ಟು ಕರಕಲಾದ…

20 hours ago

ಲಾರಿ–ಕಾರು ನಡುವೆ ಅಪಘಾತ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಮಧುರೆ ಹೋಬಳಿಯ ಚೆನ್ನದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಬಳಿ ಲಾರಿ ಹಾಗೂ ಕಾರು ನಡುವೆ…

1 day ago