ತುಮಕೂರು ಜಿಲ್ಲೆ ಸುಂಕಾಪುರದ ಟಿ.ಬಿ. ಕೆನಾಲ್ 70 ನೇ ಕಿ.ಮೀ.ನಲ್ಲಿ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿಯನ್ನು ಡಿಸಿಎಂ ಡಿಕೆಶಿ ಅವರು ದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ, ಮಾಜಿ ಸಚಿವ ಟಿ.ಬಿ. ಜಯಚಂದ್ರ, ಶಾಸಕರಾದ ಗುಬ್ಬಿ ಶ್ರೀನಿವಾಸ್, ಡಾ. ರಂಗನಾಥ್ ಹಾಗೂ ಅಧಿಕಾರಿಗಳ ಜೊತೆ ಪರಿಶೀಲಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಕ್ಷೇತ್ರವೊಂದಕ್ಕೆ ಸೀಮಿತವಾಗದೆ, ನಾನು ಕರ್ನಾಟಕ ರಾಜ್ಯದ ನೀರಾವರಿ ಸಚಿವನಾಗಿ ತುಮಕೂರಿನ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದ್ದೇನೆ. ತುಮಕೂರು ನನಗೆ ಅತ್ಯಂತ ಹತ್ತಿರವಾದ ಜಿಲ್ಲೆ ಎಂದರು.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಸರ್ಕಾರದಲ್ಲಿ ನಾನು ನೀರಾವರಿ ಸಚಿವನಾಗಿದ್ದಾಗ ಈ ಯೋಜನೆಗೆ ಮಂಜೂರಾತಿ ನೀಡಲಾಗಿತ್ತು. ಆದರೆ, ನಂತರ ಅಧಿಕಾರಕ್ಕೆ ಬಂದ ಯಡಿಯೂರಪ್ಪ ಅವರ ಸರ್ಕಾರ ಈ ಯೋಜನೆಯನ್ನು ಸ್ಥಗಿತಗೊಳಿಸಿತ್ತು. ಆಗ ಕೇವಲ 600 ಕೋಟಿ ರೂ.ಗಳಲ್ಲಿ ಮುಗಿಯಬೇಕಿದ್ದ ಈ ಕಾಮಗಾರಿಯ ವೆಚ್ಚ ಈಗ 1000 ಕೋಟಿ ರೂ.ಗಳಿಗೆ ಏರಿಕೆಯಾಗಿದೆ ಎಂದು ತಿಳಿಸಿದರು.
ಈಗಾಗಲೇ ನಾವು ಈ ಯೋಜನೆಯ ಪೈಪ್ಗಳ ಖರೀದಿಗೆ 400 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದು, ನಾಲ್ಕೈದು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಬಹುದು. ಸಮುದ್ರಕ್ಕೆ ಹರಿದು ಹೋಗುವ ನೀರನ್ನು ರೈತರ ಉಪಯೋಗಕ್ಕೆ ಬಳಸಿಕೊಳ್ಳಲು ಚಾನಲ್ಗಳ ಮೂಲಕ ನೀರು ಹರಿಸುವ ಕೆಲಸ ನಡೆಯಬೇಕು ಎಂದರು.
ನಮ್ಮ ಈ ಯೋಜನೆ ಒಂದು ಅಭಿವೃದ್ಧಿ ಕೆಲಸವಾಗಿದ್ದು, ಇದರಲ್ಲಿ ರಾಜಕೀಯ ಬೆರೆಸಬಾರದು. ತುಮಕೂರು ಜಿಲ್ಲೆಯ ಅಭಿವೃದ್ಧಿಗಾಗಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ಯಾವುದೇ ರೈತರಿಗೆ ನೀರು ಹಂಚಿಕೆಯಲ್ಲಿ ಅನ್ಯಾಯವಾಗದಂತೆ ನಾವು ನೋಡಿಕೊಳ್ಳುತ್ತೇವೆ ಎಂದು ತಿಳಿಸಿದರು.
ಹೋರಾಟಗಾರರಿಗೆ ನನ್ನದೊಂದು ವಿನಂತಿ, ನಾವು ಬೇರೆ ರಾಜ್ಯಗಳ ಜೊತೆ ನೀರಿಗಾಗಿ ಹೋರಾಟ ಮಾಡುವ ಹಾಗೆ ನಮ್ಮಲ್ಲೇ ಹೋರಾಟ ಮಾಡುವುದು ಬೇಡ. ನಾವೆಲ್ಲರೂ ಒಂದೇ ರಾಜ್ಯದವರು, ರಕ್ತ ಮತ್ತು ಸಂಬಂಧಗಳನ್ನು ಹಂಚಿಕೊಂಡಿದ್ದೇವೆ. ಆದ್ದರಿಂದ ನಾವೆಲ್ಲರೂ ಒಟ್ಟಾಗಿ ಸೇರಿ ಕೆಲಸ ಮಾಡಬೇಕು ಎಂದು ಹೇಳಿದರು.
ಈ ಯೋಜನೆಯಲ್ಲಿ ಒಂದು ತಾಲ್ಲೂಕಿಗೆ ಎಷ್ಟು ನೀರು ಒದಗಿಸಲಾಗಿದೆಯೋ ಅಷ್ಟನ್ನೇ ಬಳಸಿಕೊಳ್ಳಲು ಅವಕಾಶವಿದೆ. ಯಾವುದೇ ಅನಧಿಕೃತ ಗೇಟ್ಗಳನ್ನು ಹಾಕಲು ಅವಕಾಶವಿಲ್ಲ. ‘ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು’ ಎಂಬ ತತ್ವದ ಮೇಲೆ ನಾವು ಈ ಯೋಜನೆಯನ್ನು ಜಾರಿಗೆ ತಂದಿದ್ದೇವೆ ಎಂದರು.
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…
ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…
ದೊಡ್ಡಬಳ್ಳಾಪುರ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಲಕ್ಕೇನಹಳ್ಳಿ ಬಳಿ ಡ್ಯಾಂ ನಿರ್ಮಿಸಲು ಉದ್ದೇಶಿಸಿರುವ ಕ್ರಮಕ್ಕೆ…