Categories: ಲೇಖನ

ಹೇಳುವುದು ಒಂದು ಮಾಡುವುದು ಇನ್ನೊಂದು ಏಕೋ ಕಾಣೆ…..

ಟಿ ವಿ ಧಾರಾವಾಹಿಗಳಲ್ಲಿ ಅತ್ತೆ ಸೊಸೆಗೆ ತೊಂದರೆ ಕೊಡುವುದನ್ನು ನೋಡಿ ಕಣ್ಣೀರಾಗುವಿರಿ,
ಆದರೆ ನಿಮ್ಮ ಮನೆಯ ಅದೇ ವಾತಾವರಣವನ್ನು ಮರೆಯುವಿರಿ…….

ಸಿನಿಮಾದಲ್ಲಿ ನಾಯಕ ಭ್ರಷ್ಟ ರಾಜಕಾರಣಿಗಳನ್ನು ಚಚ್ಚುವುದು ನೋಡಿ ಸಿಳ್ಳೆ ಹೊಡೆಯುವಿರಿ,
ಆದರೆ ನಿಜ ಜೀವನದಲ್ಲಿ ಅದೇ ರಾಜಕಾರಣಿಗಳ ಹಿಂಬಾಲಕರಾಗಿರುವಿರಿ…….

ಕಥೆಗಳಲ್ಲಿ ಇಡೀ ಬದುಕನ್ನೇ ಇತರರಿಗಾಗಿ ತ್ಯಾಗ ಮಾಡುವ ಪಾತ್ರಗಳಲ್ಲಿ ನಿಮ್ಮನ್ನೇ ಕಲ್ಪಿಸಿಕೊಳ್ಳುತ್ತೀರಿ,
ಆದರೆ ವಾಸ್ತವದಲ್ಲಿ ಎಲ್ಲವೂ ನನಗೇ ಇರಲಿ ಎಂದು ದುರಾಸೆ ಪಡುವಿರಿ.

ಪತ್ರಿಕೆ, ಟಿವಿಗಳಲ್ಲಿ ವೃದ್ದ ತಂದೆ ತಾಯಿಗಳನ್ನು ಅನಾಥಾಶ್ರಮಕ್ಕೆ ಸೇರಿಸಿದ ಮಕ್ಕಳ ವಿಷಯ ಕೇಳಿ ಶಾಪ ಹಾಕುವಿರಿ,
ಆದರೆ ನಿಮ್ಮ ಅಮ್ಮ ಅಪ್ಪನಿಗಾಗಿ ವೃದ್ದಾಶ್ರಮ ಹುಡುಕುವಿರಿ…….

ವರದಕ್ಷಿಣೆ ಸಾವುಗಳನ್ನುವ ನೋಡಿ ಆಕ್ರೋಶ ವ್ಯಕ್ತಪಡಿಸುವಿರಿ,
ನಿಮ್ಮ ಮಕ್ಕಳ ಮದುವೆಗೆ ಚಿನ್ನ, ಕಾರು ಮನೆ ಬೇಕೆಂದು ಆಸೆ ಪಡುವಿರಿ……

ಬೇರೆ ಶ್ರೀಮಂತ ಸಮಾರಂಭಗಳಲ್ಲಿ ವ್ಯರ್ಥವಾಗುವ ಆಹಾರ ನೋಡಿ ಬೇಸರದಿಂದ ಲೊಚಗುಟ್ಟುವಿರಿ,
ನಿಮ್ಮ ಮನೆಯ ಕಾರ್ಯಕ್ರಮಗಳಲ್ಲಿ ಅದನ್ನು ಮರೆಯುವಿರಿ…..

ಗುರುಹಿರಿಯರ ಅಮೂಲ್ಯ ಹಿತನುಡಿಗಳನ್ನು ಕೇಳಿ ಚಪ್ಪಾಳೆ ಹೊಡೆಯುವಿರಿ,
ನಿಜ ಜೀವನದಲ್ಲಿ ಅದಕ್ಕೆ ವಿರುದ್ಧವಾಗಿ ನಡೆದುಕೊಳ್ಳುವಿರಿ……

ಪೋಟೋಗಳಲ್ಲಿ ಸುಂದರ ಪರಿಸರ, ವಾತಾವರಣ ನೋಡಿ ಆನಂದಿಸುವಿರಿ,
ನಿಮ್ಮ ಸುತ್ತ ಮುತ್ತ ಕೆಟ್ಟ ವಾತಾವರಣ ಇಟ್ಟುಕೊಂಡಿರುತ್ತೀರಿ……

ಆಂತರ್ಯದಲ್ಲಿ ಸ್ವಾರ್ಥಿಗಳಾಗಿರುವ ನಾವು,
ಬಹಿರಂಗವಾಗಿ ತ್ಯಾಗ ಜೀವಿಗಳನ್ನು ಕೊಂಡಾಡುತ್ತೇವೆ……..

ಮಾತಿಗೂ, ಕೃತಿಗೂ ಅಂತರ ಹೆಚ್ಚಾದಾಗ ಈ ಆತ್ಮವಂಚಕತನ ಬೆಳೆಯುತ್ತದೆ,
ಇದಕ್ಕೆ ನಾವ್ಯಾರು ಹೊರತಲ್ಲ,
ಆದರೆ ಇದು ಅಪಾಯಕಾರಿ…….

ಇದನ್ನು ನಾವು ಗೆಲ್ಲುವ ನಿಟ್ಟಿನಲ್ಲಿ ಪ್ರಯತ್ನಿಸೋಣ.
ನಮ್ಮ ನಡೆಗೂ, ನುಡಿಗೂ ಅಂತರ ಕಡಿಮೆ ಇರಲಿ…….

ಸಾಧ್ಯವಾದಷ್ಟೂ ಹೇಳುವುದನ್ನು ಮಾಡೋಣ – ಮಾಡುವುದನ್ನು ಹೇಳೋಣ.
ನಮ್ಮ ಮಕ್ಕಳೂ ಅದನ್ನೇ ಮುಂದುವರಿಸುತ್ತಾರೆ.
ಈ ವಿಷಯದಲ್ಲಿ ಈಗಿನಿಂದಲೇ ಬದಲಾಗೋಣ….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

41 minutes ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

53 minutes ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

9 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

22 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

23 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

1 day ago