ಟಿ ವಿ ಧಾರಾವಾಹಿಗಳಲ್ಲಿ ಅತ್ತೆ ಸೊಸೆಗೆ ತೊಂದರೆ ಕೊಡುವುದನ್ನು ನೋಡಿ ಕಣ್ಣೀರಾಗುವಿರಿ,
ಆದರೆ ನಿಮ್ಮ ಮನೆಯ ಅದೇ ವಾತಾವರಣವನ್ನು ಮರೆಯುವಿರಿ…….
ಸಿನಿಮಾದಲ್ಲಿ ನಾಯಕ ಭ್ರಷ್ಟ ರಾಜಕಾರಣಿಗಳನ್ನು ಚಚ್ಚುವುದು ನೋಡಿ ಸಿಳ್ಳೆ ಹೊಡೆಯುವಿರಿ,
ಆದರೆ ನಿಜ ಜೀವನದಲ್ಲಿ ಅದೇ ರಾಜಕಾರಣಿಗಳ ಹಿಂಬಾಲಕರಾಗಿರುವಿರಿ…….
ಕಥೆಗಳಲ್ಲಿ ಇಡೀ ಬದುಕನ್ನೇ ಇತರರಿಗಾಗಿ ತ್ಯಾಗ ಮಾಡುವ ಪಾತ್ರಗಳಲ್ಲಿ ನಿಮ್ಮನ್ನೇ ಕಲ್ಪಿಸಿಕೊಳ್ಳುತ್ತೀರಿ,
ಆದರೆ ವಾಸ್ತವದಲ್ಲಿ ಎಲ್ಲವೂ ನನಗೇ ಇರಲಿ ಎಂದು ದುರಾಸೆ ಪಡುವಿರಿ.
ಪತ್ರಿಕೆ, ಟಿವಿಗಳಲ್ಲಿ ವೃದ್ದ ತಂದೆ ತಾಯಿಗಳನ್ನು ಅನಾಥಾಶ್ರಮಕ್ಕೆ ಸೇರಿಸಿದ ಮಕ್ಕಳ ವಿಷಯ ಕೇಳಿ ಶಾಪ ಹಾಕುವಿರಿ,
ಆದರೆ ನಿಮ್ಮ ಅಮ್ಮ ಅಪ್ಪನಿಗಾಗಿ ವೃದ್ದಾಶ್ರಮ ಹುಡುಕುವಿರಿ…….
ವರದಕ್ಷಿಣೆ ಸಾವುಗಳನ್ನುವ ನೋಡಿ ಆಕ್ರೋಶ ವ್ಯಕ್ತಪಡಿಸುವಿರಿ,
ನಿಮ್ಮ ಮಕ್ಕಳ ಮದುವೆಗೆ ಚಿನ್ನ, ಕಾರು ಮನೆ ಬೇಕೆಂದು ಆಸೆ ಪಡುವಿರಿ……
ಬೇರೆ ಶ್ರೀಮಂತ ಸಮಾರಂಭಗಳಲ್ಲಿ ವ್ಯರ್ಥವಾಗುವ ಆಹಾರ ನೋಡಿ ಬೇಸರದಿಂದ ಲೊಚಗುಟ್ಟುವಿರಿ,
ನಿಮ್ಮ ಮನೆಯ ಕಾರ್ಯಕ್ರಮಗಳಲ್ಲಿ ಅದನ್ನು ಮರೆಯುವಿರಿ…..
ಗುರುಹಿರಿಯರ ಅಮೂಲ್ಯ ಹಿತನುಡಿಗಳನ್ನು ಕೇಳಿ ಚಪ್ಪಾಳೆ ಹೊಡೆಯುವಿರಿ,
ನಿಜ ಜೀವನದಲ್ಲಿ ಅದಕ್ಕೆ ವಿರುದ್ಧವಾಗಿ ನಡೆದುಕೊಳ್ಳುವಿರಿ……
ಪೋಟೋಗಳಲ್ಲಿ ಸುಂದರ ಪರಿಸರ, ವಾತಾವರಣ ನೋಡಿ ಆನಂದಿಸುವಿರಿ,
ನಿಮ್ಮ ಸುತ್ತ ಮುತ್ತ ಕೆಟ್ಟ ವಾತಾವರಣ ಇಟ್ಟುಕೊಂಡಿರುತ್ತೀರಿ……
ಆಂತರ್ಯದಲ್ಲಿ ಸ್ವಾರ್ಥಿಗಳಾಗಿರುವ ನಾವು,
ಬಹಿರಂಗವಾಗಿ ತ್ಯಾಗ ಜೀವಿಗಳನ್ನು ಕೊಂಡಾಡುತ್ತೇವೆ……..
ಮಾತಿಗೂ, ಕೃತಿಗೂ ಅಂತರ ಹೆಚ್ಚಾದಾಗ ಈ ಆತ್ಮವಂಚಕತನ ಬೆಳೆಯುತ್ತದೆ,
ಇದಕ್ಕೆ ನಾವ್ಯಾರು ಹೊರತಲ್ಲ,
ಆದರೆ ಇದು ಅಪಾಯಕಾರಿ…….
ಇದನ್ನು ನಾವು ಗೆಲ್ಲುವ ನಿಟ್ಟಿನಲ್ಲಿ ಪ್ರಯತ್ನಿಸೋಣ.
ನಮ್ಮ ನಡೆಗೂ, ನುಡಿಗೂ ಅಂತರ ಕಡಿಮೆ ಇರಲಿ…….
ಸಾಧ್ಯವಾದಷ್ಟೂ ಹೇಳುವುದನ್ನು ಮಾಡೋಣ – ಮಾಡುವುದನ್ನು ಹೇಳೋಣ.
ನಮ್ಮ ಮಕ್ಕಳೂ ಅದನ್ನೇ ಮುಂದುವರಿಸುತ್ತಾರೆ.
ಈ ವಿಷಯದಲ್ಲಿ ಈಗಿನಿಂದಲೇ ಬದಲಾಗೋಣ….
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ
ಲೇಖಕ-ವಿವೇಕಾನಂದ. ಎಚ್. ಕೆ
ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…
ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…
ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…
ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…
ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…