ಟಿ ವಿ ಧಾರಾವಾಹಿಗಳಲ್ಲಿ ಅತ್ತೆ ಸೊಸೆಗೆ ತೊಂದರೆ ಕೊಡುವುದನ್ನು ನೋಡಿ ಕಣ್ಣೀರಾಗುವಿರಿ,
ಆದರೆ ನಿಮ್ಮ ಮನೆಯ ಅದೇ ವಾತಾವರಣವನ್ನು ಮರೆಯುವಿರಿ…….
ಸಿನಿಮಾದಲ್ಲಿ ನಾಯಕ ಭ್ರಷ್ಟ ರಾಜಕಾರಣಿಗಳನ್ನು ಚಚ್ಚುವುದು ನೋಡಿ ಸಿಳ್ಳೆ ಹೊಡೆಯುವಿರಿ,
ಆದರೆ ನಿಜ ಜೀವನದಲ್ಲಿ ಅದೇ ರಾಜಕಾರಣಿಗಳ ಹಿಂಬಾಲಕರಾಗಿರುವಿರಿ…….
ಕಥೆಗಳಲ್ಲಿ ಇಡೀ ಬದುಕನ್ನೇ ಇತರರಿಗಾಗಿ ತ್ಯಾಗ ಮಾಡುವ ಪಾತ್ರಗಳಲ್ಲಿ ನಿಮ್ಮನ್ನೇ ಕಲ್ಪಿಸಿಕೊಳ್ಳುತ್ತೀರಿ,
ಆದರೆ ವಾಸ್ತವದಲ್ಲಿ ಎಲ್ಲವೂ ನನಗೇ ಇರಲಿ ಎಂದು ದುರಾಸೆ ಪಡುವಿರಿ.
ಪತ್ರಿಕೆ, ಟಿವಿಗಳಲ್ಲಿ ವೃದ್ದ ತಂದೆ ತಾಯಿಗಳನ್ನು ಅನಾಥಾಶ್ರಮಕ್ಕೆ ಸೇರಿಸಿದ ಮಕ್ಕಳ ವಿಷಯ ಕೇಳಿ ಶಾಪ ಹಾಕುವಿರಿ,
ಆದರೆ ನಿಮ್ಮ ಅಮ್ಮ ಅಪ್ಪನಿಗಾಗಿ ವೃದ್ದಾಶ್ರಮ ಹುಡುಕುವಿರಿ…….
ವರದಕ್ಷಿಣೆ ಸಾವುಗಳನ್ನುವ ನೋಡಿ ಆಕ್ರೋಶ ವ್ಯಕ್ತಪಡಿಸುವಿರಿ,
ನಿಮ್ಮ ಮಕ್ಕಳ ಮದುವೆಗೆ ಚಿನ್ನ, ಕಾರು ಮನೆ ಬೇಕೆಂದು ಆಸೆ ಪಡುವಿರಿ……
ಬೇರೆ ಶ್ರೀಮಂತ ಸಮಾರಂಭಗಳಲ್ಲಿ ವ್ಯರ್ಥವಾಗುವ ಆಹಾರ ನೋಡಿ ಬೇಸರದಿಂದ ಲೊಚಗುಟ್ಟುವಿರಿ,
ನಿಮ್ಮ ಮನೆಯ ಕಾರ್ಯಕ್ರಮಗಳಲ್ಲಿ ಅದನ್ನು ಮರೆಯುವಿರಿ…..
ಗುರುಹಿರಿಯರ ಅಮೂಲ್ಯ ಹಿತನುಡಿಗಳನ್ನು ಕೇಳಿ ಚಪ್ಪಾಳೆ ಹೊಡೆಯುವಿರಿ,
ನಿಜ ಜೀವನದಲ್ಲಿ ಅದಕ್ಕೆ ವಿರುದ್ಧವಾಗಿ ನಡೆದುಕೊಳ್ಳುವಿರಿ……
ಪೋಟೋಗಳಲ್ಲಿ ಸುಂದರ ಪರಿಸರ, ವಾತಾವರಣ ನೋಡಿ ಆನಂದಿಸುವಿರಿ,
ನಿಮ್ಮ ಸುತ್ತ ಮುತ್ತ ಕೆಟ್ಟ ವಾತಾವರಣ ಇಟ್ಟುಕೊಂಡಿರುತ್ತೀರಿ……
ಆಂತರ್ಯದಲ್ಲಿ ಸ್ವಾರ್ಥಿಗಳಾಗಿರುವ ನಾವು,
ಬಹಿರಂಗವಾಗಿ ತ್ಯಾಗ ಜೀವಿಗಳನ್ನು ಕೊಂಡಾಡುತ್ತೇವೆ……..
ಮಾತಿಗೂ, ಕೃತಿಗೂ ಅಂತರ ಹೆಚ್ಚಾದಾಗ ಈ ಆತ್ಮವಂಚಕತನ ಬೆಳೆಯುತ್ತದೆ,
ಇದಕ್ಕೆ ನಾವ್ಯಾರು ಹೊರತಲ್ಲ,
ಆದರೆ ಇದು ಅಪಾಯಕಾರಿ…….
ಇದನ್ನು ನಾವು ಗೆಲ್ಲುವ ನಿಟ್ಟಿನಲ್ಲಿ ಪ್ರಯತ್ನಿಸೋಣ.
ನಮ್ಮ ನಡೆಗೂ, ನುಡಿಗೂ ಅಂತರ ಕಡಿಮೆ ಇರಲಿ…….
ಸಾಧ್ಯವಾದಷ್ಟೂ ಹೇಳುವುದನ್ನು ಮಾಡೋಣ – ಮಾಡುವುದನ್ನು ಹೇಳೋಣ.
ನಮ್ಮ ಮಕ್ಕಳೂ ಅದನ್ನೇ ಮುಂದುವರಿಸುತ್ತಾರೆ.
ಈ ವಿಷಯದಲ್ಲಿ ಈಗಿನಿಂದಲೇ ಬದಲಾಗೋಣ….
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ
ಲೇಖಕ-ವಿವೇಕಾನಂದ. ಎಚ್. ಕೆ
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…