ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗಾಗಿ ಅರ್ಜಿ ಆಹ್ವಾನ

ಕೃಷಿ ಇಲಾಖೆ ವತಿಯಿಂದ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಇನ್ನಷ್ಟು ಬಲಪಡಿಸಲು ಹೈಟೆಕ್ ಹಾರ್ವೆಸ್ಟರ್ ಹಬ್‌ಗಳನ್ನು ಸ್ಥಾಪಿಸಲು ಚಾಲ್ತಿಯಲ್ಲಿರುವ ಕೃಷಿ ಯಂತ್ರಧಾರೆ ಕೇಂದ್ರಗಳು/ಸೇವಾದಾರ ಸಂಸ್ಥೆಗಳು/ವೈಯಕ್ತಿಕ ಫಲಾನುಭವಿಗಳು (Individual) ಹಾಗೂ ನೊಂದಾಯಿತ ಸಂಘ-ಸಂಸ್ಥೆಗಳಿಂದ (FPO) ಅರ್ಜಿ ಆಹ್ವಾನಿಸಲಾಗಿದೆ.

ಸ್ಥಳೀಯವಾಗಿ ಹಾಗೂ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಕೃಷಿ ಯಂತ್ರಧಾರೆ ಕೇಂದ್ರಗಳ/ಕೃಷಿ ಯಂತ್ರೋಪಕರಣಗಳ ಬ್ಯಾಂಕ್ (farm machinery Bank FMB) ಗಳ ಸಂಸ್ಥೆಗಳಿಗೆ ಆದ್ಯತೆ ನೀಡಲಾಗುವುದು. ಸಾಮಾನ್ಯ ವರ್ಗದ ರೈತರಿಗೆ ಗರಿಷ್ಠ ಶೇ.50 ರಂತೆ ಪ.ಜಾ/ಪ.ಪಂ ವರ್ಗದ ರೈತರಿಗೆ ಗರಿಷ್ಠ ಶೇ.70 ರಂತೆ ಹಾಗೂ ಸಂಘ-ಸಂಸ್ಥೆಗಳಿಗೆ (ಚಾಲ್ತಿಯಲ್ಲಿರುವ ಕೃಷಿ ಯಂತ್ರಧಾರೆ ಕೇಂದ್ರಗಳ ಸೇವಾದಾರ ಸಂಸ್ಥೆ/ FPO ಗಳನ್ನೊಳಗೊಂಡಂತೆ) ಗರಿಷ್ಠ ಶೇ.70 ರಂತೆ ಸಹಾಯಧನವನ್ನು ನೀಡಲಾಗುವುದು.

ವಿವಿಧ ಹಾರ್ವೆಸ್ಟರ್ ಹಬ್‌ಗಳಿಗೆ ನಿಗಧಿಪಡಿಸಿದ ಗರಿಷ್ಠ ಸಹಾಯಧನದ ಮೊತ್ತಕ್ಕೆ ಸೀಮಿತಗೊಳಿಸಿ ಸ್ಥಳೀಯವಾಗಿ ಅಗತ್ಯವಿರುವ ಕೃಷಿ ಯಂತ್ರೋಪಕರಣಗಳನ್ನು ದಾಸ್ತಾನೀಕರಿಸಲು ಪ್ರತಿ ಒಂದು ಹೈಟೆಕ್ ಹಾರ್ವೆಸ್ಟರ್ ಹಬ್ ಘಟಕಕ್ಕೆ ಗರಿಷ್ಠ ಮೊತ್ತ ರೂ.100.00 ಲಕ್ಷಗಳು ಮೀರದಂತೆ (ರೂ.5.00 ಲಕ್ಷಗಳ ಆಡಳಿತಾತ್ಮಕ ವೆಚ್ಚ ಒಳಗೊಂಡಂತೆ) ಸಹಾಯಧನವನ್ನು ಒದಗಿಸಲಾಗುವುದು.

ಆಡಳಿತಾತ್ಮಕ ವೆಚ್ಚವನ್ನು ಒಂದು ಬಾರಿ ಮಾತ್ರ ನೀಡಲಾಗುವುದು. (ವೈಯಕ್ತಿಕ ಫಲಾನುಭವಿಗಳನ್ನು ಹೊರತುಪಡಿಸಿ) ಕೃಷಿ ಯಂತ್ರೋಪಕರಣಗಳ ನೈಜ ಬೆಲೆ ಆಧರಿಸಿ ಫಲಾನುಭವಿ ವರ್ಗವಾರು/ಸಂಘ-ಸಂಸ್ಥೆವಾರು(FPO ಗಳನ್ನೊಳಗೊಂಡಂತೆ) ನಿಗದಿಪಡಿಸಿದ ಗರಿಷ್ಠ ಸಹಾಯಧನವನ್ನು ಒದಗಿಸಲಾಗುವುದು. ಸಹಾಯಧನವನ್ನು Credit linked Back Ended Subsidy ಮುಖಾಂತರವೇ ನೀಡಲಾಗುವುದು.

ವಿವಿಧ ರೀತಿಯ ಹಾರ್ವೆಸ್ಟರ್ ಹಬ್‌ಗಳಿಗೆ ನಿಗದಿಪಡಿಸಿದ ಗರಿಷ್ಠ ಸಹಾಯಧನದ ಮೊತ್ತಕ್ಕೆ ಮಿತಿಗೊಳಿಸಿ ಸ್ಥಳೀಯವಾಗಿ ಬೆಳೆಗಳ ವಿಸ್ತೀರ್ಣದ ಆಧಾರದ ಮೇಲೆ ಅಗತ್ಯವಿರುವ ಯಂತ್ರೋಪಕರಣಗಳನ್ನು ದಾಸ್ತಾನೀಕರಿಸಬೇಕಾಗಿರುತ್ತದೆ.

ಕಂಬೈನ್ಡ್ ಹಾರ್ವೆಸ್ಟರ್ ಹಬ್ ನಲ್ಲಿ ಕಂಬೈನ್ಡ್ ಹಾರ್ವೆಸ್ಟರ್ ರೊಂದಿಗೆ Baler ದಾಸ್ತಾನೀಕರಿಸುವುದು ಕಡ್ಡಾಯವಾಗಿರುತ್ತದೆ. ಆಯ್ಕೆಯಾದ ಫಲಾನುಭವಿಗಳು/ ಸಂಘ-ಸಂಸ್ಥೆಗಳು ಕೃಷಿ ಮೂಲಭೂತ ಸೌಕರ್ಯ ನಿಧಿ(AIF-Agricultural Infrastructure Fund) ಸಾಲದ ನೆರವನ್ನು ಪಡೆಯಲು ಸಹ ಅವಕಾಶವಿರುತ್ತದೆ.

ಹೈಟೆಕ್ ಹಾರ್ವೆಸ್ಟರ್ ಹಬ್‌ಗಳಲ್ಲಿ ದಾಸ್ತಾನೀಕರಿಸುವ ಯಂತ್ರೋಪಕರಣಗಳನ್ನು ಬಾಡಿಗೆ ಆಧಾರದ ಮೇಲೆ Corridor ನಲ್ಲಿ ಬರುವ ರೈತರಿಗೆ ಒದಗಿಸಲಾಗುವುದು.

ಆಸಕ್ತ ರೈತರು, ಕೃಷಿ ಯಂತ್ರಧಾರೆ ಕೇಂದ್ರಗಳು/ಸೇವಾದಾರ ಸಂಸ್ಥೆಗಳು ಹಾಗೂ ನೊಂದಾಯಿತ ಸಂಘ-ಸಂಸ್ಥೆಗಳು (FPO ಗಳನ್ನೊಳಗೊಂಡಂತೆ) ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳು, ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಉಪ ಕೃಷಿ ನಿರ್ದೇಶಕರ ಕಛೇರಿ, ಬೆಂಗಳೂರು ಹಾಗೂ ಜಂಟಿ ಕೃಷಿ ನಿರ್ದೇಶಕರ ಕಛೇರಿ ಬೆಂಗಳೂರು ಜಿಲ್ಲೆ ಗಳನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

41 minutes ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

16 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

23 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago