ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗಾಗಿ ಅರ್ಜಿ ಆಹ್ವಾನ

ಕೃಷಿ ಇಲಾಖೆ ವತಿಯಿಂದ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಇನ್ನಷ್ಟು ಬಲಪಡಿಸಲು ಹೈಟೆಕ್ ಹಾರ್ವೆಸ್ಟರ್ ಹಬ್‌ಗಳನ್ನು ಸ್ಥಾಪಿಸಲು ಚಾಲ್ತಿಯಲ್ಲಿರುವ ಕೃಷಿ ಯಂತ್ರಧಾರೆ ಕೇಂದ್ರಗಳು/ಸೇವಾದಾರ ಸಂಸ್ಥೆಗಳು/ವೈಯಕ್ತಿಕ ಫಲಾನುಭವಿಗಳು (Individual) ಹಾಗೂ ನೊಂದಾಯಿತ ಸಂಘ-ಸಂಸ್ಥೆಗಳಿಂದ (FPO) ಅರ್ಜಿ ಆಹ್ವಾನಿಸಲಾಗಿದೆ.

ಸ್ಥಳೀಯವಾಗಿ ಹಾಗೂ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಕೃಷಿ ಯಂತ್ರಧಾರೆ ಕೇಂದ್ರಗಳ/ಕೃಷಿ ಯಂತ್ರೋಪಕರಣಗಳ ಬ್ಯಾಂಕ್ (farm machinery Bank FMB) ಗಳ ಸಂಸ್ಥೆಗಳಿಗೆ ಆದ್ಯತೆ ನೀಡಲಾಗುವುದು. ಸಾಮಾನ್ಯ ವರ್ಗದ ರೈತರಿಗೆ ಗರಿಷ್ಠ ಶೇ.50 ರಂತೆ ಪ.ಜಾ/ಪ.ಪಂ ವರ್ಗದ ರೈತರಿಗೆ ಗರಿಷ್ಠ ಶೇ.70 ರಂತೆ ಹಾಗೂ ಸಂಘ-ಸಂಸ್ಥೆಗಳಿಗೆ (ಚಾಲ್ತಿಯಲ್ಲಿರುವ ಕೃಷಿ ಯಂತ್ರಧಾರೆ ಕೇಂದ್ರಗಳ ಸೇವಾದಾರ ಸಂಸ್ಥೆ/ FPO ಗಳನ್ನೊಳಗೊಂಡಂತೆ) ಗರಿಷ್ಠ ಶೇ.70 ರಂತೆ ಸಹಾಯಧನವನ್ನು ನೀಡಲಾಗುವುದು.

ವಿವಿಧ ಹಾರ್ವೆಸ್ಟರ್ ಹಬ್‌ಗಳಿಗೆ ನಿಗಧಿಪಡಿಸಿದ ಗರಿಷ್ಠ ಸಹಾಯಧನದ ಮೊತ್ತಕ್ಕೆ ಸೀಮಿತಗೊಳಿಸಿ ಸ್ಥಳೀಯವಾಗಿ ಅಗತ್ಯವಿರುವ ಕೃಷಿ ಯಂತ್ರೋಪಕರಣಗಳನ್ನು ದಾಸ್ತಾನೀಕರಿಸಲು ಪ್ರತಿ ಒಂದು ಹೈಟೆಕ್ ಹಾರ್ವೆಸ್ಟರ್ ಹಬ್ ಘಟಕಕ್ಕೆ ಗರಿಷ್ಠ ಮೊತ್ತ ರೂ.100.00 ಲಕ್ಷಗಳು ಮೀರದಂತೆ (ರೂ.5.00 ಲಕ್ಷಗಳ ಆಡಳಿತಾತ್ಮಕ ವೆಚ್ಚ ಒಳಗೊಂಡಂತೆ) ಸಹಾಯಧನವನ್ನು ಒದಗಿಸಲಾಗುವುದು.

ಆಡಳಿತಾತ್ಮಕ ವೆಚ್ಚವನ್ನು ಒಂದು ಬಾರಿ ಮಾತ್ರ ನೀಡಲಾಗುವುದು. (ವೈಯಕ್ತಿಕ ಫಲಾನುಭವಿಗಳನ್ನು ಹೊರತುಪಡಿಸಿ) ಕೃಷಿ ಯಂತ್ರೋಪಕರಣಗಳ ನೈಜ ಬೆಲೆ ಆಧರಿಸಿ ಫಲಾನುಭವಿ ವರ್ಗವಾರು/ಸಂಘ-ಸಂಸ್ಥೆವಾರು(FPO ಗಳನ್ನೊಳಗೊಂಡಂತೆ) ನಿಗದಿಪಡಿಸಿದ ಗರಿಷ್ಠ ಸಹಾಯಧನವನ್ನು ಒದಗಿಸಲಾಗುವುದು. ಸಹಾಯಧನವನ್ನು Credit linked Back Ended Subsidy ಮುಖಾಂತರವೇ ನೀಡಲಾಗುವುದು.

ವಿವಿಧ ರೀತಿಯ ಹಾರ್ವೆಸ್ಟರ್ ಹಬ್‌ಗಳಿಗೆ ನಿಗದಿಪಡಿಸಿದ ಗರಿಷ್ಠ ಸಹಾಯಧನದ ಮೊತ್ತಕ್ಕೆ ಮಿತಿಗೊಳಿಸಿ ಸ್ಥಳೀಯವಾಗಿ ಬೆಳೆಗಳ ವಿಸ್ತೀರ್ಣದ ಆಧಾರದ ಮೇಲೆ ಅಗತ್ಯವಿರುವ ಯಂತ್ರೋಪಕರಣಗಳನ್ನು ದಾಸ್ತಾನೀಕರಿಸಬೇಕಾಗಿರುತ್ತದೆ.

ಕಂಬೈನ್ಡ್ ಹಾರ್ವೆಸ್ಟರ್ ಹಬ್ ನಲ್ಲಿ ಕಂಬೈನ್ಡ್ ಹಾರ್ವೆಸ್ಟರ್ ರೊಂದಿಗೆ Baler ದಾಸ್ತಾನೀಕರಿಸುವುದು ಕಡ್ಡಾಯವಾಗಿರುತ್ತದೆ. ಆಯ್ಕೆಯಾದ ಫಲಾನುಭವಿಗಳು/ ಸಂಘ-ಸಂಸ್ಥೆಗಳು ಕೃಷಿ ಮೂಲಭೂತ ಸೌಕರ್ಯ ನಿಧಿ(AIF-Agricultural Infrastructure Fund) ಸಾಲದ ನೆರವನ್ನು ಪಡೆಯಲು ಸಹ ಅವಕಾಶವಿರುತ್ತದೆ.

ಹೈಟೆಕ್ ಹಾರ್ವೆಸ್ಟರ್ ಹಬ್‌ಗಳಲ್ಲಿ ದಾಸ್ತಾನೀಕರಿಸುವ ಯಂತ್ರೋಪಕರಣಗಳನ್ನು ಬಾಡಿಗೆ ಆಧಾರದ ಮೇಲೆ Corridor ನಲ್ಲಿ ಬರುವ ರೈತರಿಗೆ ಒದಗಿಸಲಾಗುವುದು.

ಆಸಕ್ತ ರೈತರು, ಕೃಷಿ ಯಂತ್ರಧಾರೆ ಕೇಂದ್ರಗಳು/ಸೇವಾದಾರ ಸಂಸ್ಥೆಗಳು ಹಾಗೂ ನೊಂದಾಯಿತ ಸಂಘ-ಸಂಸ್ಥೆಗಳು (FPO ಗಳನ್ನೊಳಗೊಂಡಂತೆ) ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳು, ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಉಪ ಕೃಷಿ ನಿರ್ದೇಶಕರ ಕಛೇರಿ, ಬೆಂಗಳೂರು ಹಾಗೂ ಜಂಟಿ ಕೃಷಿ ನಿರ್ದೇಶಕರ ಕಛೇರಿ ಬೆಂಗಳೂರು ಜಿಲ್ಲೆ ಗಳನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

34 minutes ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

2 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

5 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

20 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

1 day ago