ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗಾಗಿ ಅರ್ಜಿ ಆಹ್ವಾನ

ಕೃಷಿ ಇಲಾಖೆ ವತಿಯಿಂದ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಇನ್ನಷ್ಟು ಬಲಪಡಿಸಲು ಹೈಟೆಕ್ ಹಾರ್ವೆಸ್ಟರ್ ಹಬ್‌ಗಳನ್ನು ಸ್ಥಾಪಿಸಲು ಚಾಲ್ತಿಯಲ್ಲಿರುವ ಕೃಷಿ ಯಂತ್ರಧಾರೆ ಕೇಂದ್ರಗಳು/ಸೇವಾದಾರ ಸಂಸ್ಥೆಗಳು/ವೈಯಕ್ತಿಕ ಫಲಾನುಭವಿಗಳು (Individual) ಹಾಗೂ ನೊಂದಾಯಿತ ಸಂಘ-ಸಂಸ್ಥೆಗಳಿಂದ (FPO) ಅರ್ಜಿ ಆಹ್ವಾನಿಸಲಾಗಿದೆ.

ಸ್ಥಳೀಯವಾಗಿ ಹಾಗೂ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಕೃಷಿ ಯಂತ್ರಧಾರೆ ಕೇಂದ್ರಗಳ/ಕೃಷಿ ಯಂತ್ರೋಪಕರಣಗಳ ಬ್ಯಾಂಕ್ (farm machinery Bank FMB) ಗಳ ಸಂಸ್ಥೆಗಳಿಗೆ ಆದ್ಯತೆ ನೀಡಲಾಗುವುದು. ಸಾಮಾನ್ಯ ವರ್ಗದ ರೈತರಿಗೆ ಗರಿಷ್ಠ ಶೇ.50 ರಂತೆ ಪ.ಜಾ/ಪ.ಪಂ ವರ್ಗದ ರೈತರಿಗೆ ಗರಿಷ್ಠ ಶೇ.70 ರಂತೆ ಹಾಗೂ ಸಂಘ-ಸಂಸ್ಥೆಗಳಿಗೆ (ಚಾಲ್ತಿಯಲ್ಲಿರುವ ಕೃಷಿ ಯಂತ್ರಧಾರೆ ಕೇಂದ್ರಗಳ ಸೇವಾದಾರ ಸಂಸ್ಥೆ/ FPO ಗಳನ್ನೊಳಗೊಂಡಂತೆ) ಗರಿಷ್ಠ ಶೇ.70 ರಂತೆ ಸಹಾಯಧನವನ್ನು ನೀಡಲಾಗುವುದು.

ವಿವಿಧ ಹಾರ್ವೆಸ್ಟರ್ ಹಬ್‌ಗಳಿಗೆ ನಿಗಧಿಪಡಿಸಿದ ಗರಿಷ್ಠ ಸಹಾಯಧನದ ಮೊತ್ತಕ್ಕೆ ಸೀಮಿತಗೊಳಿಸಿ ಸ್ಥಳೀಯವಾಗಿ ಅಗತ್ಯವಿರುವ ಕೃಷಿ ಯಂತ್ರೋಪಕರಣಗಳನ್ನು ದಾಸ್ತಾನೀಕರಿಸಲು ಪ್ರತಿ ಒಂದು ಹೈಟೆಕ್ ಹಾರ್ವೆಸ್ಟರ್ ಹಬ್ ಘಟಕಕ್ಕೆ ಗರಿಷ್ಠ ಮೊತ್ತ ರೂ.100.00 ಲಕ್ಷಗಳು ಮೀರದಂತೆ (ರೂ.5.00 ಲಕ್ಷಗಳ ಆಡಳಿತಾತ್ಮಕ ವೆಚ್ಚ ಒಳಗೊಂಡಂತೆ) ಸಹಾಯಧನವನ್ನು ಒದಗಿಸಲಾಗುವುದು.

ಆಡಳಿತಾತ್ಮಕ ವೆಚ್ಚವನ್ನು ಒಂದು ಬಾರಿ ಮಾತ್ರ ನೀಡಲಾಗುವುದು. (ವೈಯಕ್ತಿಕ ಫಲಾನುಭವಿಗಳನ್ನು ಹೊರತುಪಡಿಸಿ) ಕೃಷಿ ಯಂತ್ರೋಪಕರಣಗಳ ನೈಜ ಬೆಲೆ ಆಧರಿಸಿ ಫಲಾನುಭವಿ ವರ್ಗವಾರು/ಸಂಘ-ಸಂಸ್ಥೆವಾರು(FPO ಗಳನ್ನೊಳಗೊಂಡಂತೆ) ನಿಗದಿಪಡಿಸಿದ ಗರಿಷ್ಠ ಸಹಾಯಧನವನ್ನು ಒದಗಿಸಲಾಗುವುದು. ಸಹಾಯಧನವನ್ನು Credit linked Back Ended Subsidy ಮುಖಾಂತರವೇ ನೀಡಲಾಗುವುದು.

ವಿವಿಧ ರೀತಿಯ ಹಾರ್ವೆಸ್ಟರ್ ಹಬ್‌ಗಳಿಗೆ ನಿಗದಿಪಡಿಸಿದ ಗರಿಷ್ಠ ಸಹಾಯಧನದ ಮೊತ್ತಕ್ಕೆ ಮಿತಿಗೊಳಿಸಿ ಸ್ಥಳೀಯವಾಗಿ ಬೆಳೆಗಳ ವಿಸ್ತೀರ್ಣದ ಆಧಾರದ ಮೇಲೆ ಅಗತ್ಯವಿರುವ ಯಂತ್ರೋಪಕರಣಗಳನ್ನು ದಾಸ್ತಾನೀಕರಿಸಬೇಕಾಗಿರುತ್ತದೆ.

ಕಂಬೈನ್ಡ್ ಹಾರ್ವೆಸ್ಟರ್ ಹಬ್ ನಲ್ಲಿ ಕಂಬೈನ್ಡ್ ಹಾರ್ವೆಸ್ಟರ್ ರೊಂದಿಗೆ Baler ದಾಸ್ತಾನೀಕರಿಸುವುದು ಕಡ್ಡಾಯವಾಗಿರುತ್ತದೆ. ಆಯ್ಕೆಯಾದ ಫಲಾನುಭವಿಗಳು/ ಸಂಘ-ಸಂಸ್ಥೆಗಳು ಕೃಷಿ ಮೂಲಭೂತ ಸೌಕರ್ಯ ನಿಧಿ(AIF-Agricultural Infrastructure Fund) ಸಾಲದ ನೆರವನ್ನು ಪಡೆಯಲು ಸಹ ಅವಕಾಶವಿರುತ್ತದೆ.

ಹೈಟೆಕ್ ಹಾರ್ವೆಸ್ಟರ್ ಹಬ್‌ಗಳಲ್ಲಿ ದಾಸ್ತಾನೀಕರಿಸುವ ಯಂತ್ರೋಪಕರಣಗಳನ್ನು ಬಾಡಿಗೆ ಆಧಾರದ ಮೇಲೆ Corridor ನಲ್ಲಿ ಬರುವ ರೈತರಿಗೆ ಒದಗಿಸಲಾಗುವುದು.

ಆಸಕ್ತ ರೈತರು, ಕೃಷಿ ಯಂತ್ರಧಾರೆ ಕೇಂದ್ರಗಳು/ಸೇವಾದಾರ ಸಂಸ್ಥೆಗಳು ಹಾಗೂ ನೊಂದಾಯಿತ ಸಂಘ-ಸಂಸ್ಥೆಗಳು (FPO ಗಳನ್ನೊಳಗೊಂಡಂತೆ) ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳು, ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಉಪ ಕೃಷಿ ನಿರ್ದೇಶಕರ ಕಛೇರಿ, ಬೆಂಗಳೂರು ಹಾಗೂ ಜಂಟಿ ಕೃಷಿ ನಿರ್ದೇಶಕರ ಕಛೇರಿ ಬೆಂಗಳೂರು ಜಿಲ್ಲೆ ಗಳನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

50 minutes ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

14 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

18 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 days ago