ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗಾಗಿ ಅರ್ಜಿ ಆಹ್ವಾನ

ಕೃಷಿ ಇಲಾಖೆ ವತಿಯಿಂದ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಇನ್ನಷ್ಟು ಬಲಪಡಿಸಲು ಹೈಟೆಕ್ ಹಾರ್ವೆಸ್ಟರ್ ಹಬ್‌ಗಳನ್ನು ಸ್ಥಾಪಿಸಲು ಚಾಲ್ತಿಯಲ್ಲಿರುವ ಕೃಷಿ ಯಂತ್ರಧಾರೆ ಕೇಂದ್ರಗಳು/ಸೇವಾದಾರ ಸಂಸ್ಥೆಗಳು/ವೈಯಕ್ತಿಕ ಫಲಾನುಭವಿಗಳು (Individual) ಹಾಗೂ ನೊಂದಾಯಿತ ಸಂಘ-ಸಂಸ್ಥೆಗಳಿಂದ (FPO) ಅರ್ಜಿ ಆಹ್ವಾನಿಸಲಾಗಿದೆ.

ಸ್ಥಳೀಯವಾಗಿ ಹಾಗೂ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಕೃಷಿ ಯಂತ್ರಧಾರೆ ಕೇಂದ್ರಗಳ/ಕೃಷಿ ಯಂತ್ರೋಪಕರಣಗಳ ಬ್ಯಾಂಕ್ (farm machinery Bank FMB) ಗಳ ಸಂಸ್ಥೆಗಳಿಗೆ ಆದ್ಯತೆ ನೀಡಲಾಗುವುದು. ಸಾಮಾನ್ಯ ವರ್ಗದ ರೈತರಿಗೆ ಗರಿಷ್ಠ ಶೇ.50 ರಂತೆ ಪ.ಜಾ/ಪ.ಪಂ ವರ್ಗದ ರೈತರಿಗೆ ಗರಿಷ್ಠ ಶೇ.70 ರಂತೆ ಹಾಗೂ ಸಂಘ-ಸಂಸ್ಥೆಗಳಿಗೆ (ಚಾಲ್ತಿಯಲ್ಲಿರುವ ಕೃಷಿ ಯಂತ್ರಧಾರೆ ಕೇಂದ್ರಗಳ ಸೇವಾದಾರ ಸಂಸ್ಥೆ/ FPO ಗಳನ್ನೊಳಗೊಂಡಂತೆ) ಗರಿಷ್ಠ ಶೇ.70 ರಂತೆ ಸಹಾಯಧನವನ್ನು ನೀಡಲಾಗುವುದು.

ವಿವಿಧ ಹಾರ್ವೆಸ್ಟರ್ ಹಬ್‌ಗಳಿಗೆ ನಿಗಧಿಪಡಿಸಿದ ಗರಿಷ್ಠ ಸಹಾಯಧನದ ಮೊತ್ತಕ್ಕೆ ಸೀಮಿತಗೊಳಿಸಿ ಸ್ಥಳೀಯವಾಗಿ ಅಗತ್ಯವಿರುವ ಕೃಷಿ ಯಂತ್ರೋಪಕರಣಗಳನ್ನು ದಾಸ್ತಾನೀಕರಿಸಲು ಪ್ರತಿ ಒಂದು ಹೈಟೆಕ್ ಹಾರ್ವೆಸ್ಟರ್ ಹಬ್ ಘಟಕಕ್ಕೆ ಗರಿಷ್ಠ ಮೊತ್ತ ರೂ.100.00 ಲಕ್ಷಗಳು ಮೀರದಂತೆ (ರೂ.5.00 ಲಕ್ಷಗಳ ಆಡಳಿತಾತ್ಮಕ ವೆಚ್ಚ ಒಳಗೊಂಡಂತೆ) ಸಹಾಯಧನವನ್ನು ಒದಗಿಸಲಾಗುವುದು.

ಆಡಳಿತಾತ್ಮಕ ವೆಚ್ಚವನ್ನು ಒಂದು ಬಾರಿ ಮಾತ್ರ ನೀಡಲಾಗುವುದು. (ವೈಯಕ್ತಿಕ ಫಲಾನುಭವಿಗಳನ್ನು ಹೊರತುಪಡಿಸಿ) ಕೃಷಿ ಯಂತ್ರೋಪಕರಣಗಳ ನೈಜ ಬೆಲೆ ಆಧರಿಸಿ ಫಲಾನುಭವಿ ವರ್ಗವಾರು/ಸಂಘ-ಸಂಸ್ಥೆವಾರು(FPO ಗಳನ್ನೊಳಗೊಂಡಂತೆ) ನಿಗದಿಪಡಿಸಿದ ಗರಿಷ್ಠ ಸಹಾಯಧನವನ್ನು ಒದಗಿಸಲಾಗುವುದು. ಸಹಾಯಧನವನ್ನು Credit linked Back Ended Subsidy ಮುಖಾಂತರವೇ ನೀಡಲಾಗುವುದು.

ವಿವಿಧ ರೀತಿಯ ಹಾರ್ವೆಸ್ಟರ್ ಹಬ್‌ಗಳಿಗೆ ನಿಗದಿಪಡಿಸಿದ ಗರಿಷ್ಠ ಸಹಾಯಧನದ ಮೊತ್ತಕ್ಕೆ ಮಿತಿಗೊಳಿಸಿ ಸ್ಥಳೀಯವಾಗಿ ಬೆಳೆಗಳ ವಿಸ್ತೀರ್ಣದ ಆಧಾರದ ಮೇಲೆ ಅಗತ್ಯವಿರುವ ಯಂತ್ರೋಪಕರಣಗಳನ್ನು ದಾಸ್ತಾನೀಕರಿಸಬೇಕಾಗಿರುತ್ತದೆ.

ಕಂಬೈನ್ಡ್ ಹಾರ್ವೆಸ್ಟರ್ ಹಬ್ ನಲ್ಲಿ ಕಂಬೈನ್ಡ್ ಹಾರ್ವೆಸ್ಟರ್ ರೊಂದಿಗೆ Baler ದಾಸ್ತಾನೀಕರಿಸುವುದು ಕಡ್ಡಾಯವಾಗಿರುತ್ತದೆ. ಆಯ್ಕೆಯಾದ ಫಲಾನುಭವಿಗಳು/ ಸಂಘ-ಸಂಸ್ಥೆಗಳು ಕೃಷಿ ಮೂಲಭೂತ ಸೌಕರ್ಯ ನಿಧಿ(AIF-Agricultural Infrastructure Fund) ಸಾಲದ ನೆರವನ್ನು ಪಡೆಯಲು ಸಹ ಅವಕಾಶವಿರುತ್ತದೆ.

ಹೈಟೆಕ್ ಹಾರ್ವೆಸ್ಟರ್ ಹಬ್‌ಗಳಲ್ಲಿ ದಾಸ್ತಾನೀಕರಿಸುವ ಯಂತ್ರೋಪಕರಣಗಳನ್ನು ಬಾಡಿಗೆ ಆಧಾರದ ಮೇಲೆ Corridor ನಲ್ಲಿ ಬರುವ ರೈತರಿಗೆ ಒದಗಿಸಲಾಗುವುದು.

ಆಸಕ್ತ ರೈತರು, ಕೃಷಿ ಯಂತ್ರಧಾರೆ ಕೇಂದ್ರಗಳು/ಸೇವಾದಾರ ಸಂಸ್ಥೆಗಳು ಹಾಗೂ ನೊಂದಾಯಿತ ಸಂಘ-ಸಂಸ್ಥೆಗಳು (FPO ಗಳನ್ನೊಳಗೊಂಡಂತೆ) ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳು, ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಉಪ ಕೃಷಿ ನಿರ್ದೇಶಕರ ಕಛೇರಿ, ಬೆಂಗಳೂರು ಹಾಗೂ ಜಂಟಿ ಕೃಷಿ ನಿರ್ದೇಶಕರ ಕಛೇರಿ ಬೆಂಗಳೂರು ಜಿಲ್ಲೆ ಗಳನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

4 minutes ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

26 minutes ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

3 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

4 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

8 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

12 hours ago