ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗಾಗಿ ಅರ್ಜಿ ಆಹ್ವಾನ

ಕೃಷಿ ಇಲಾಖೆ ವತಿಯಿಂದ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಇನ್ನಷ್ಟು ಬಲಪಡಿಸಲು ಹೈಟೆಕ್ ಹಾರ್ವೆಸ್ಟರ್ ಹಬ್‌ಗಳನ್ನು ಸ್ಥಾಪಿಸಲು ಚಾಲ್ತಿಯಲ್ಲಿರುವ ಕೃಷಿ ಯಂತ್ರಧಾರೆ ಕೇಂದ್ರಗಳು/ಸೇವಾದಾರ ಸಂಸ್ಥೆಗಳು/ವೈಯಕ್ತಿಕ ಫಲಾನುಭವಿಗಳು (Individual) ಹಾಗೂ ನೊಂದಾಯಿತ ಸಂಘ-ಸಂಸ್ಥೆಗಳಿಂದ (FPO) ಅರ್ಜಿ ಆಹ್ವಾನಿಸಲಾಗಿದೆ.

ಸ್ಥಳೀಯವಾಗಿ ಹಾಗೂ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಕೃಷಿ ಯಂತ್ರಧಾರೆ ಕೇಂದ್ರಗಳ/ಕೃಷಿ ಯಂತ್ರೋಪಕರಣಗಳ ಬ್ಯಾಂಕ್ (farm machinery Bank FMB) ಗಳ ಸಂಸ್ಥೆಗಳಿಗೆ ಆದ್ಯತೆ ನೀಡಲಾಗುವುದು. ಸಾಮಾನ್ಯ ವರ್ಗದ ರೈತರಿಗೆ ಗರಿಷ್ಠ ಶೇ.50 ರಂತೆ ಪ.ಜಾ/ಪ.ಪಂ ವರ್ಗದ ರೈತರಿಗೆ ಗರಿಷ್ಠ ಶೇ.70 ರಂತೆ ಹಾಗೂ ಸಂಘ-ಸಂಸ್ಥೆಗಳಿಗೆ (ಚಾಲ್ತಿಯಲ್ಲಿರುವ ಕೃಷಿ ಯಂತ್ರಧಾರೆ ಕೇಂದ್ರಗಳ ಸೇವಾದಾರ ಸಂಸ್ಥೆ/ FPO ಗಳನ್ನೊಳಗೊಂಡಂತೆ) ಗರಿಷ್ಠ ಶೇ.70 ರಂತೆ ಸಹಾಯಧನವನ್ನು ನೀಡಲಾಗುವುದು.

ವಿವಿಧ ಹಾರ್ವೆಸ್ಟರ್ ಹಬ್‌ಗಳಿಗೆ ನಿಗಧಿಪಡಿಸಿದ ಗರಿಷ್ಠ ಸಹಾಯಧನದ ಮೊತ್ತಕ್ಕೆ ಸೀಮಿತಗೊಳಿಸಿ ಸ್ಥಳೀಯವಾಗಿ ಅಗತ್ಯವಿರುವ ಕೃಷಿ ಯಂತ್ರೋಪಕರಣಗಳನ್ನು ದಾಸ್ತಾನೀಕರಿಸಲು ಪ್ರತಿ ಒಂದು ಹೈಟೆಕ್ ಹಾರ್ವೆಸ್ಟರ್ ಹಬ್ ಘಟಕಕ್ಕೆ ಗರಿಷ್ಠ ಮೊತ್ತ ರೂ.100.00 ಲಕ್ಷಗಳು ಮೀರದಂತೆ (ರೂ.5.00 ಲಕ್ಷಗಳ ಆಡಳಿತಾತ್ಮಕ ವೆಚ್ಚ ಒಳಗೊಂಡಂತೆ) ಸಹಾಯಧನವನ್ನು ಒದಗಿಸಲಾಗುವುದು.

ಆಡಳಿತಾತ್ಮಕ ವೆಚ್ಚವನ್ನು ಒಂದು ಬಾರಿ ಮಾತ್ರ ನೀಡಲಾಗುವುದು. (ವೈಯಕ್ತಿಕ ಫಲಾನುಭವಿಗಳನ್ನು ಹೊರತುಪಡಿಸಿ) ಕೃಷಿ ಯಂತ್ರೋಪಕರಣಗಳ ನೈಜ ಬೆಲೆ ಆಧರಿಸಿ ಫಲಾನುಭವಿ ವರ್ಗವಾರು/ಸಂಘ-ಸಂಸ್ಥೆವಾರು(FPO ಗಳನ್ನೊಳಗೊಂಡಂತೆ) ನಿಗದಿಪಡಿಸಿದ ಗರಿಷ್ಠ ಸಹಾಯಧನವನ್ನು ಒದಗಿಸಲಾಗುವುದು. ಸಹಾಯಧನವನ್ನು Credit linked Back Ended Subsidy ಮುಖಾಂತರವೇ ನೀಡಲಾಗುವುದು.

ವಿವಿಧ ರೀತಿಯ ಹಾರ್ವೆಸ್ಟರ್ ಹಬ್‌ಗಳಿಗೆ ನಿಗದಿಪಡಿಸಿದ ಗರಿಷ್ಠ ಸಹಾಯಧನದ ಮೊತ್ತಕ್ಕೆ ಮಿತಿಗೊಳಿಸಿ ಸ್ಥಳೀಯವಾಗಿ ಬೆಳೆಗಳ ವಿಸ್ತೀರ್ಣದ ಆಧಾರದ ಮೇಲೆ ಅಗತ್ಯವಿರುವ ಯಂತ್ರೋಪಕರಣಗಳನ್ನು ದಾಸ್ತಾನೀಕರಿಸಬೇಕಾಗಿರುತ್ತದೆ.

ಕಂಬೈನ್ಡ್ ಹಾರ್ವೆಸ್ಟರ್ ಹಬ್ ನಲ್ಲಿ ಕಂಬೈನ್ಡ್ ಹಾರ್ವೆಸ್ಟರ್ ರೊಂದಿಗೆ Baler ದಾಸ್ತಾನೀಕರಿಸುವುದು ಕಡ್ಡಾಯವಾಗಿರುತ್ತದೆ. ಆಯ್ಕೆಯಾದ ಫಲಾನುಭವಿಗಳು/ ಸಂಘ-ಸಂಸ್ಥೆಗಳು ಕೃಷಿ ಮೂಲಭೂತ ಸೌಕರ್ಯ ನಿಧಿ(AIF-Agricultural Infrastructure Fund) ಸಾಲದ ನೆರವನ್ನು ಪಡೆಯಲು ಸಹ ಅವಕಾಶವಿರುತ್ತದೆ.

ಹೈಟೆಕ್ ಹಾರ್ವೆಸ್ಟರ್ ಹಬ್‌ಗಳಲ್ಲಿ ದಾಸ್ತಾನೀಕರಿಸುವ ಯಂತ್ರೋಪಕರಣಗಳನ್ನು ಬಾಡಿಗೆ ಆಧಾರದ ಮೇಲೆ Corridor ನಲ್ಲಿ ಬರುವ ರೈತರಿಗೆ ಒದಗಿಸಲಾಗುವುದು.

ಆಸಕ್ತ ರೈತರು, ಕೃಷಿ ಯಂತ್ರಧಾರೆ ಕೇಂದ್ರಗಳು/ಸೇವಾದಾರ ಸಂಸ್ಥೆಗಳು ಹಾಗೂ ನೊಂದಾಯಿತ ಸಂಘ-ಸಂಸ್ಥೆಗಳು (FPO ಗಳನ್ನೊಳಗೊಂಡಂತೆ) ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳು, ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಉಪ ಕೃಷಿ ನಿರ್ದೇಶಕರ ಕಛೇರಿ, ಬೆಂಗಳೂರು ಹಾಗೂ ಜಂಟಿ ಕೃಷಿ ನಿರ್ದೇಶಕರ ಕಛೇರಿ ಬೆಂಗಳೂರು ಜಿಲ್ಲೆ ಗಳನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

5 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

6 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

7 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

8 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

15 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago