ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗಾಗಿ ಅರ್ಜಿ ಆಹ್ವಾನ

ಕೃಷಿ ಇಲಾಖೆ ವತಿಯಿಂದ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಇನ್ನಷ್ಟು ಬಲಪಡಿಸಲು ಹೈಟೆಕ್ ಹಾರ್ವೆಸ್ಟರ್ ಹಬ್‌ಗಳನ್ನು ಸ್ಥಾಪಿಸಲು ಚಾಲ್ತಿಯಲ್ಲಿರುವ ಕೃಷಿ ಯಂತ್ರಧಾರೆ ಕೇಂದ್ರಗಳು/ಸೇವಾದಾರ ಸಂಸ್ಥೆಗಳು/ವೈಯಕ್ತಿಕ ಫಲಾನುಭವಿಗಳು (Individual) ಹಾಗೂ ನೊಂದಾಯಿತ ಸಂಘ-ಸಂಸ್ಥೆಗಳಿಂದ (FPO) ಅರ್ಜಿ ಆಹ್ವಾನಿಸಲಾಗಿದೆ.

ಸ್ಥಳೀಯವಾಗಿ ಹಾಗೂ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಕೃಷಿ ಯಂತ್ರಧಾರೆ ಕೇಂದ್ರಗಳ/ಕೃಷಿ ಯಂತ್ರೋಪಕರಣಗಳ ಬ್ಯಾಂಕ್ (farm machinery Bank FMB) ಗಳ ಸಂಸ್ಥೆಗಳಿಗೆ ಆದ್ಯತೆ ನೀಡಲಾಗುವುದು. ಸಾಮಾನ್ಯ ವರ್ಗದ ರೈತರಿಗೆ ಗರಿಷ್ಠ ಶೇ.50 ರಂತೆ ಪ.ಜಾ/ಪ.ಪಂ ವರ್ಗದ ರೈತರಿಗೆ ಗರಿಷ್ಠ ಶೇ.70 ರಂತೆ ಹಾಗೂ ಸಂಘ-ಸಂಸ್ಥೆಗಳಿಗೆ (ಚಾಲ್ತಿಯಲ್ಲಿರುವ ಕೃಷಿ ಯಂತ್ರಧಾರೆ ಕೇಂದ್ರಗಳ ಸೇವಾದಾರ ಸಂಸ್ಥೆ/ FPO ಗಳನ್ನೊಳಗೊಂಡಂತೆ) ಗರಿಷ್ಠ ಶೇ.70 ರಂತೆ ಸಹಾಯಧನವನ್ನು ನೀಡಲಾಗುವುದು.

ವಿವಿಧ ಹಾರ್ವೆಸ್ಟರ್ ಹಬ್‌ಗಳಿಗೆ ನಿಗಧಿಪಡಿಸಿದ ಗರಿಷ್ಠ ಸಹಾಯಧನದ ಮೊತ್ತಕ್ಕೆ ಸೀಮಿತಗೊಳಿಸಿ ಸ್ಥಳೀಯವಾಗಿ ಅಗತ್ಯವಿರುವ ಕೃಷಿ ಯಂತ್ರೋಪಕರಣಗಳನ್ನು ದಾಸ್ತಾನೀಕರಿಸಲು ಪ್ರತಿ ಒಂದು ಹೈಟೆಕ್ ಹಾರ್ವೆಸ್ಟರ್ ಹಬ್ ಘಟಕಕ್ಕೆ ಗರಿಷ್ಠ ಮೊತ್ತ ರೂ.100.00 ಲಕ್ಷಗಳು ಮೀರದಂತೆ (ರೂ.5.00 ಲಕ್ಷಗಳ ಆಡಳಿತಾತ್ಮಕ ವೆಚ್ಚ ಒಳಗೊಂಡಂತೆ) ಸಹಾಯಧನವನ್ನು ಒದಗಿಸಲಾಗುವುದು.

ಆಡಳಿತಾತ್ಮಕ ವೆಚ್ಚವನ್ನು ಒಂದು ಬಾರಿ ಮಾತ್ರ ನೀಡಲಾಗುವುದು. (ವೈಯಕ್ತಿಕ ಫಲಾನುಭವಿಗಳನ್ನು ಹೊರತುಪಡಿಸಿ) ಕೃಷಿ ಯಂತ್ರೋಪಕರಣಗಳ ನೈಜ ಬೆಲೆ ಆಧರಿಸಿ ಫಲಾನುಭವಿ ವರ್ಗವಾರು/ಸಂಘ-ಸಂಸ್ಥೆವಾರು(FPO ಗಳನ್ನೊಳಗೊಂಡಂತೆ) ನಿಗದಿಪಡಿಸಿದ ಗರಿಷ್ಠ ಸಹಾಯಧನವನ್ನು ಒದಗಿಸಲಾಗುವುದು. ಸಹಾಯಧನವನ್ನು Credit linked Back Ended Subsidy ಮುಖಾಂತರವೇ ನೀಡಲಾಗುವುದು.

ವಿವಿಧ ರೀತಿಯ ಹಾರ್ವೆಸ್ಟರ್ ಹಬ್‌ಗಳಿಗೆ ನಿಗದಿಪಡಿಸಿದ ಗರಿಷ್ಠ ಸಹಾಯಧನದ ಮೊತ್ತಕ್ಕೆ ಮಿತಿಗೊಳಿಸಿ ಸ್ಥಳೀಯವಾಗಿ ಬೆಳೆಗಳ ವಿಸ್ತೀರ್ಣದ ಆಧಾರದ ಮೇಲೆ ಅಗತ್ಯವಿರುವ ಯಂತ್ರೋಪಕರಣಗಳನ್ನು ದಾಸ್ತಾನೀಕರಿಸಬೇಕಾಗಿರುತ್ತದೆ.

ಕಂಬೈನ್ಡ್ ಹಾರ್ವೆಸ್ಟರ್ ಹಬ್ ನಲ್ಲಿ ಕಂಬೈನ್ಡ್ ಹಾರ್ವೆಸ್ಟರ್ ರೊಂದಿಗೆ Baler ದಾಸ್ತಾನೀಕರಿಸುವುದು ಕಡ್ಡಾಯವಾಗಿರುತ್ತದೆ. ಆಯ್ಕೆಯಾದ ಫಲಾನುಭವಿಗಳು/ ಸಂಘ-ಸಂಸ್ಥೆಗಳು ಕೃಷಿ ಮೂಲಭೂತ ಸೌಕರ್ಯ ನಿಧಿ(AIF-Agricultural Infrastructure Fund) ಸಾಲದ ನೆರವನ್ನು ಪಡೆಯಲು ಸಹ ಅವಕಾಶವಿರುತ್ತದೆ.

ಹೈಟೆಕ್ ಹಾರ್ವೆಸ್ಟರ್ ಹಬ್‌ಗಳಲ್ಲಿ ದಾಸ್ತಾನೀಕರಿಸುವ ಯಂತ್ರೋಪಕರಣಗಳನ್ನು ಬಾಡಿಗೆ ಆಧಾರದ ಮೇಲೆ Corridor ನಲ್ಲಿ ಬರುವ ರೈತರಿಗೆ ಒದಗಿಸಲಾಗುವುದು.

ಆಸಕ್ತ ರೈತರು, ಕೃಷಿ ಯಂತ್ರಧಾರೆ ಕೇಂದ್ರಗಳು/ಸೇವಾದಾರ ಸಂಸ್ಥೆಗಳು ಹಾಗೂ ನೊಂದಾಯಿತ ಸಂಘ-ಸಂಸ್ಥೆಗಳು (FPO ಗಳನ್ನೊಳಗೊಂಡಂತೆ) ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳು, ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಉಪ ಕೃಷಿ ನಿರ್ದೇಶಕರ ಕಛೇರಿ, ಬೆಂಗಳೂರು ಹಾಗೂ ಜಂಟಿ ಕೃಷಿ ನಿರ್ದೇಶಕರ ಕಛೇರಿ ಬೆಂಗಳೂರು ಜಿಲ್ಲೆ ಗಳನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಸಾರ್ವಜನಿಕ ಆಡಳಿತದ ದಕ್ಷತೆ ಹೆಚ್ಚಿಸಲು ಕೆಜಿಐಎಸ್-2.0 ಸಹಕಾರಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧಾ

ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…

2 hours ago

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

7 hours ago

ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ….

ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…

10 hours ago

ಹವಾಮಾನ ವೈಪರಿತ್ಯಕ್ಕೆ ತತ್ತರಿಸಿದ ಕೃಷಿ: ಮಾವು, ದ್ರಾಕ್ಷಿ, ತರಕಾರಿ ಬೆಳೆಗಳಿಗೆ ಭಾರೀ ಹೊಡೆತ

ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…

12 hours ago

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

23 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

1 day ago