ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗಾಗಿ ಅರ್ಜಿ ಆಹ್ವಾನ

ಕೃಷಿ ಇಲಾಖೆ ವತಿಯಿಂದ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಇನ್ನಷ್ಟು ಬಲಪಡಿಸಲು ಹೈಟೆಕ್ ಹಾರ್ವೆಸ್ಟರ್ ಹಬ್‌ಗಳನ್ನು ಸ್ಥಾಪಿಸಲು ಚಾಲ್ತಿಯಲ್ಲಿರುವ ಕೃಷಿ ಯಂತ್ರಧಾರೆ ಕೇಂದ್ರಗಳು/ಸೇವಾದಾರ ಸಂಸ್ಥೆಗಳು/ವೈಯಕ್ತಿಕ ಫಲಾನುಭವಿಗಳು (Individual) ಹಾಗೂ ನೊಂದಾಯಿತ ಸಂಘ-ಸಂಸ್ಥೆಗಳಿಂದ (FPO) ಅರ್ಜಿ ಆಹ್ವಾನಿಸಲಾಗಿದೆ.

ಸ್ಥಳೀಯವಾಗಿ ಹಾಗೂ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಕೃಷಿ ಯಂತ್ರಧಾರೆ ಕೇಂದ್ರಗಳ/ಕೃಷಿ ಯಂತ್ರೋಪಕರಣಗಳ ಬ್ಯಾಂಕ್ (farm machinery Bank FMB) ಗಳ ಸಂಸ್ಥೆಗಳಿಗೆ ಆದ್ಯತೆ ನೀಡಲಾಗುವುದು. ಸಾಮಾನ್ಯ ವರ್ಗದ ರೈತರಿಗೆ ಗರಿಷ್ಠ ಶೇ.50 ರಂತೆ ಪ.ಜಾ/ಪ.ಪಂ ವರ್ಗದ ರೈತರಿಗೆ ಗರಿಷ್ಠ ಶೇ.70 ರಂತೆ ಹಾಗೂ ಸಂಘ-ಸಂಸ್ಥೆಗಳಿಗೆ (ಚಾಲ್ತಿಯಲ್ಲಿರುವ ಕೃಷಿ ಯಂತ್ರಧಾರೆ ಕೇಂದ್ರಗಳ ಸೇವಾದಾರ ಸಂಸ್ಥೆ/ FPO ಗಳನ್ನೊಳಗೊಂಡಂತೆ) ಗರಿಷ್ಠ ಶೇ.70 ರಂತೆ ಸಹಾಯಧನವನ್ನು ನೀಡಲಾಗುವುದು.

ವಿವಿಧ ಹಾರ್ವೆಸ್ಟರ್ ಹಬ್‌ಗಳಿಗೆ ನಿಗಧಿಪಡಿಸಿದ ಗರಿಷ್ಠ ಸಹಾಯಧನದ ಮೊತ್ತಕ್ಕೆ ಸೀಮಿತಗೊಳಿಸಿ ಸ್ಥಳೀಯವಾಗಿ ಅಗತ್ಯವಿರುವ ಕೃಷಿ ಯಂತ್ರೋಪಕರಣಗಳನ್ನು ದಾಸ್ತಾನೀಕರಿಸಲು ಪ್ರತಿ ಒಂದು ಹೈಟೆಕ್ ಹಾರ್ವೆಸ್ಟರ್ ಹಬ್ ಘಟಕಕ್ಕೆ ಗರಿಷ್ಠ ಮೊತ್ತ ರೂ.100.00 ಲಕ್ಷಗಳು ಮೀರದಂತೆ (ರೂ.5.00 ಲಕ್ಷಗಳ ಆಡಳಿತಾತ್ಮಕ ವೆಚ್ಚ ಒಳಗೊಂಡಂತೆ) ಸಹಾಯಧನವನ್ನು ಒದಗಿಸಲಾಗುವುದು.

ಆಡಳಿತಾತ್ಮಕ ವೆಚ್ಚವನ್ನು ಒಂದು ಬಾರಿ ಮಾತ್ರ ನೀಡಲಾಗುವುದು. (ವೈಯಕ್ತಿಕ ಫಲಾನುಭವಿಗಳನ್ನು ಹೊರತುಪಡಿಸಿ) ಕೃಷಿ ಯಂತ್ರೋಪಕರಣಗಳ ನೈಜ ಬೆಲೆ ಆಧರಿಸಿ ಫಲಾನುಭವಿ ವರ್ಗವಾರು/ಸಂಘ-ಸಂಸ್ಥೆವಾರು(FPO ಗಳನ್ನೊಳಗೊಂಡಂತೆ) ನಿಗದಿಪಡಿಸಿದ ಗರಿಷ್ಠ ಸಹಾಯಧನವನ್ನು ಒದಗಿಸಲಾಗುವುದು. ಸಹಾಯಧನವನ್ನು Credit linked Back Ended Subsidy ಮುಖಾಂತರವೇ ನೀಡಲಾಗುವುದು.

ವಿವಿಧ ರೀತಿಯ ಹಾರ್ವೆಸ್ಟರ್ ಹಬ್‌ಗಳಿಗೆ ನಿಗದಿಪಡಿಸಿದ ಗರಿಷ್ಠ ಸಹಾಯಧನದ ಮೊತ್ತಕ್ಕೆ ಮಿತಿಗೊಳಿಸಿ ಸ್ಥಳೀಯವಾಗಿ ಬೆಳೆಗಳ ವಿಸ್ತೀರ್ಣದ ಆಧಾರದ ಮೇಲೆ ಅಗತ್ಯವಿರುವ ಯಂತ್ರೋಪಕರಣಗಳನ್ನು ದಾಸ್ತಾನೀಕರಿಸಬೇಕಾಗಿರುತ್ತದೆ.

ಕಂಬೈನ್ಡ್ ಹಾರ್ವೆಸ್ಟರ್ ಹಬ್ ನಲ್ಲಿ ಕಂಬೈನ್ಡ್ ಹಾರ್ವೆಸ್ಟರ್ ರೊಂದಿಗೆ Baler ದಾಸ್ತಾನೀಕರಿಸುವುದು ಕಡ್ಡಾಯವಾಗಿರುತ್ತದೆ. ಆಯ್ಕೆಯಾದ ಫಲಾನುಭವಿಗಳು/ ಸಂಘ-ಸಂಸ್ಥೆಗಳು ಕೃಷಿ ಮೂಲಭೂತ ಸೌಕರ್ಯ ನಿಧಿ(AIF-Agricultural Infrastructure Fund) ಸಾಲದ ನೆರವನ್ನು ಪಡೆಯಲು ಸಹ ಅವಕಾಶವಿರುತ್ತದೆ.

ಹೈಟೆಕ್ ಹಾರ್ವೆಸ್ಟರ್ ಹಬ್‌ಗಳಲ್ಲಿ ದಾಸ್ತಾನೀಕರಿಸುವ ಯಂತ್ರೋಪಕರಣಗಳನ್ನು ಬಾಡಿಗೆ ಆಧಾರದ ಮೇಲೆ Corridor ನಲ್ಲಿ ಬರುವ ರೈತರಿಗೆ ಒದಗಿಸಲಾಗುವುದು.

ಆಸಕ್ತ ರೈತರು, ಕೃಷಿ ಯಂತ್ರಧಾರೆ ಕೇಂದ್ರಗಳು/ಸೇವಾದಾರ ಸಂಸ್ಥೆಗಳು ಹಾಗೂ ನೊಂದಾಯಿತ ಸಂಘ-ಸಂಸ್ಥೆಗಳು (FPO ಗಳನ್ನೊಳಗೊಂಡಂತೆ) ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳು, ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಉಪ ಕೃಷಿ ನಿರ್ದೇಶಕರ ಕಛೇರಿ, ಬೆಂಗಳೂರು ಹಾಗೂ ಜಂಟಿ ಕೃಷಿ ನಿರ್ದೇಶಕರ ಕಛೇರಿ ಬೆಂಗಳೂರು ಜಿಲ್ಲೆ ಗಳನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ವಿಧಾನಸೌಧದಲ್ಲಿ ಐತಿಹಾಸಿಕ ತೀರ್ಮಾನ: ಒಳಮೀಸಲಾತಿ ಜಾರಿಗೆ ಸಚಿವ ಸಂಪುಟ ಒಪ್ಪಿಗೆ- ಸಚಿವ ಕೆ.ಎಚ್ ಮುನಿಯಪ್ಪ

ವಿಧಾನಸೌಧದಲ್ಲಿ ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ…

46 minutes ago

ನಟಸಾರ್ವಭೌಮ ಡಾ.ರಾಜ್ ಉದ್ಯಾನ ಜನಾರ್ಪಣೆಗೊಳಿಸಿದ ಸಚಿವ ಕೆ.ಜೆ ಜಾರ್ಜ್

ಕನ್ನಡದ ಕಣ್ಮಣಿ ಡಾ.ರಾಜ್‌ಕುಮಾರ್ ಅವರು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಹಸಿರಾಗಿ, ಜನರ ಉಸಿರಾಗಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.…

1 hour ago

ಪೌರ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಡಾ. ಪಿ.ಪಾಂಡುಸಿಂಧೆ ಆಯ್ಕೆ

ಕರ್ನಾಟಕ ರಾಜ್ಯ ಪೌರನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾಗಿ ನಗರಸಭೆಯ ಲೆಕ್ಕಾಧಿಕಾರಿ ಡಾ. ಪಿ.ಪಾಂಡುಸಿಂಧೆ ಎರಡನೇ ಬಾರಿಗೆ ಅವಿರೋಧವಾಗಿ…

1 hour ago

ರಾಷ್ಟ್ರೀಯ ಪಂಚಾಯತ್ ರಾಜ್ ದಿನ ಆಚರಣೆ: ಅತಿ ಹೆಚ್ಚು ತೆರಿಗೆ ವಸೂಲಾತಿ ಮಾಡಿದ ಕಾಡನೂರು ಗ್ರಾ.ಪಂ ಗೆ ಬಹುಮಾನ ವಿತರಣೆ

ಗ್ರಾಮೀಣ ಪ್ರದೇಶದ ಜನರ ಆಶೋತ್ತರಗಳಿಗೆ ಧ್ವನಿಯಾಗಿ ಪಂಚಾಯತ್ ರಾಜ್ ಇಲಾಖೆಯು ಕೆಲಸ ನಿರ್ವಹಿಸುತ್ತಿದೆ. ಪಾರದರ್ಶಕವಾಗಿ ಸ್ಥಳೀಯ ಆಡಳಿತ ವ್ಯವಸ್ಥೆ ನಡೆಯುತ್ತಾ,…

2 hours ago

ಜೆಡಿಎಸ್ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆದ ಜೆಡಿಎಸ್…

4 hours ago

ಇ-ಸ್ವತ್ತು ಅರ್ಜಿ ಸಲ್ಲಿಕೆಗೆ ಬಾಪೂಜಿ ಸೇವಾ ಕೇಂದ್ರ (ಗ್ರಾಮ ಒನ್), ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲೂ ಸೌಲಭ್ಯ

ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…

10 hours ago