ಕೋಲಾರ: ಹೈನುಗಾರಿಕೆಯು ಗ್ರಾಮೀಣ ಜನರ ಆರ್ಥಿಕತೆಯ ಬದುಕಿಗೆ ಆಸರೆಯಾಗಿದೆ. ಇತ್ತಿಚಿನ ದಿನಗಳಲ್ಲಿ ರೈತರು ಕೃಷಿಯ ಜೊತೆಗೆ ಹೈನುಗಾರಿಕೆ ಮಾಡಿಕೊಂಡು ಸುಖಿ ಜೀವನ ನಡೆಸುತ್ತಿದ್ದಾರೆ ಎಂದು ಕೋಮುಲ್ ನಿರ್ದೇಶಕ ಚೆಲುವನಹಳ್ಳಿ ಡಿ.ನಾಗರಾಜ್ ತಿಳಿಸಿದರು.
ತಾಲೂಕಿನ ಕೊಂಡರಾಜನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿದ ಅವರು ಹೈನುಗಾರಿಕೆಯಲ್ಲಿ ತೊಡಗಿರುವ ಹಾಲು ಉತ್ಪಾದಕರಿಗೆ ಒಕ್ಕೂಟವು ಸೂಕ್ತ ಬೆಲೆ ನೀಡಿ ಹಾಲು ಖರೀದಿ ಮಾಡುತ್ತಿದೆ ಗುಣಮಟ್ಟದ ಹಾಲು ಡೇರಿಗೆ ನೀಡುವ ಮೂಲಕ ಸಂಘಗಳು ಸಹ ಉತ್ತಮ ಲಾಭಾಂಶವನ್ನು ಪಡೆದುಕೊಳ್ಳಬೇಕು ಎಂದರು.
ರೈತರು ಹೈನುಗಾರಿಕೆ ನಡೆಸಲು ಒಕ್ಕೂಟದಿಂದ ಹಾಗೂ ಸಹಕಾರಿ ಬ್ಯಾಂಕುಗಳು ಮೂಲಕ ಸಾಲ ಸೌಲಭ್ಯಗಳನ್ನು ನೀಡಲಾಗುತ್ತದೆ ನಿಮ್ಮ ಸಂಘದಲ್ಲಿ ಜಾಗ ಇದ್ದರೆ ಕಟ್ಟಡ ಕಟ್ಟಲು ಕೋಮುಲ್ ಒಕ್ಕೂಟ, ಕೆಎಂಎಫ್ ಹಾಗೂ ಧರ್ಮಸ್ಥಳ ಸಂಘದ ಮೂಲಕ ಸುಮಾರು 11 ಲಕ್ಷ ಅನುದಾನವನ್ನು ನೀಡಲಾಗುತ್ತದೆ ಸದುಪಯೋಗ ಪಡಿಸಿಕೊಳ್ಳಬೇಕು ಉತ್ಪಾದಕರನ್ನು ಪೋತ್ಸಾಹಿಸುವ ಕೆಲಸವನ್ನು ಸಂಘಗಳು ಮಾಡಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಕೋಮುಲ್ ಉಪ ವ್ಯವಸ್ಥಾಪಕ ಡಾ.ಮಹೇಶ್ ಮಾತನಾಡಿ, ಕೋಮುಲ್ ವತಿಯಿಂದ ನೀಡುವ ಸವಲತ್ತುಗಳನ್ನು ಹಾಲು ಉತ್ಪಾದಕರು ಸಮರ್ಪಕವಾಗಿ ಬಳಸಿಕೊಂಡು ಡೇರಿಗೆ ಗುಣಮಟ್ಟದ ಹಾಲನ್ನು ಪೂರೈಸಿ ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು. ರೈತರು ತಮ್ಮ ಹಸುಗಳಿಗೆ ವಿಮೆ ಮಾಡಿಸಿಕೊಂಡು ಅವುಗಳ ಆರೋಗ್ಯವು ಕಾಪಾಡಿಕೊಳ್ಳಬೇಕು ಹಿಂದೆ ಸಂಘದಲ್ಲಿ ನಷ್ಟದಲ್ಲಿ ಇದ್ದ ಡೇರಿ ಈ ಬಾರಿ 46 ಸಾವಿರ ಲಾಭ ಗಳಿಸಿದೆ ಇದು ಸಾಲದು ಮುಂದೆ ಆಡಳಿತ ಮಂಡಳಿಯ ಒಗ್ಗಟ್ಟಿನಿಂದ ಡೇರಿ ಅಭಿವೃದ್ಧಿಗೆ ಮುಂದಾಗಬೇಕು ಎಂದರು.
ಸಂಘದ ಅಧ್ಯಕ್ಷ ಹೆಚ್ ನಾಗರಾಜ್ ಮಾತನಾಡಿ ಕೊಂಡರಾಜನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಪ್ರಸಕ್ತ ಸಾಲಿನಲ್ಲಿ 2.61 ಲಕ್ಷ ರೂ ವ್ಯಾಪಾರ ಲಾಭ ಗಳಿಸಿ 46 ಸಾವಿರ ನಿವ್ವಳ ಲಾಭಗಳಿಸಿದೆ ಮುಂದೆ ಹೆಚ್ಚಿನ ಅಭಿವೃದ್ಧಿಗೆ ಒತ್ತು ನೀಡಲಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೋಮುಲ್ ವಿಸ್ತರಣಾಧಿಕಾರಿ ನಾಗಪ್ಪ, ಗ್ರಾಪಂ ಸದಸ್ಯರಾದ ಶ್ರೀನಿವಾಸ್ ಯಾದವ್, ಸುಬ್ಬರಾಮಪ್ಪ, ಮುಖಂಡ ಕೋರ್ಟ್ ನಾಗರಾಜ್, ಸಂಘದ ಉಪಾಧ್ಯಕ್ಷ ಕೆ.ವಿ ಮಂಜುನಾಥ್, ನಿರ್ದೇಶಕರಾದ ಶಂಕರಪ್ಪ, ಲಕ್ಷ್ಮೀಪತಿ, ನಾರಾಯಣಸ್ವಾಮಿ, ಮುರಳಿಬಾಬು, ಸಿ.ನಾರಾಯಣಸ್ವಾಮಿ, ನಂದಕುಮಾರ್, ವೆಂಕಟಲಕ್ಷ್ಮಮ್ಮ, ಕಾರ್ಯದರ್ಶಿ ಗಂಗಾಧರ್ ನಿರೂಪಕಿ ಕೊಂಡರಾಜನಹಳ್ಳಿ ಮಂಜುಳ ಸೇರಿದಂತೆ ಹಾಲು ಉತ್ಪಾದಕರು ಗ್ರಾಮಸ್ಥರು ಇದ್ದರು.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…