ಕೋಲಾರ: ಹೈನುಗಾರಿಕೆಯು ಗ್ರಾಮೀಣ ಜನರ ಆರ್ಥಿಕತೆಯ ಬದುಕಿಗೆ ಆಸರೆಯಾಗಿದೆ. ಇತ್ತಿಚಿನ ದಿನಗಳಲ್ಲಿ ರೈತರು ಕೃಷಿಯ ಜೊತೆಗೆ ಹೈನುಗಾರಿಕೆ ಮಾಡಿಕೊಂಡು ಸುಖಿ ಜೀವನ ನಡೆಸುತ್ತಿದ್ದಾರೆ ಎಂದು ಕೋಮುಲ್ ನಿರ್ದೇಶಕ ಚೆಲುವನಹಳ್ಳಿ ಡಿ.ನಾಗರಾಜ್ ತಿಳಿಸಿದರು.
ತಾಲೂಕಿನ ಕೊಂಡರಾಜನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿದ ಅವರು ಹೈನುಗಾರಿಕೆಯಲ್ಲಿ ತೊಡಗಿರುವ ಹಾಲು ಉತ್ಪಾದಕರಿಗೆ ಒಕ್ಕೂಟವು ಸೂಕ್ತ ಬೆಲೆ ನೀಡಿ ಹಾಲು ಖರೀದಿ ಮಾಡುತ್ತಿದೆ ಗುಣಮಟ್ಟದ ಹಾಲು ಡೇರಿಗೆ ನೀಡುವ ಮೂಲಕ ಸಂಘಗಳು ಸಹ ಉತ್ತಮ ಲಾಭಾಂಶವನ್ನು ಪಡೆದುಕೊಳ್ಳಬೇಕು ಎಂದರು.
ರೈತರು ಹೈನುಗಾರಿಕೆ ನಡೆಸಲು ಒಕ್ಕೂಟದಿಂದ ಹಾಗೂ ಸಹಕಾರಿ ಬ್ಯಾಂಕುಗಳು ಮೂಲಕ ಸಾಲ ಸೌಲಭ್ಯಗಳನ್ನು ನೀಡಲಾಗುತ್ತದೆ ನಿಮ್ಮ ಸಂಘದಲ್ಲಿ ಜಾಗ ಇದ್ದರೆ ಕಟ್ಟಡ ಕಟ್ಟಲು ಕೋಮುಲ್ ಒಕ್ಕೂಟ, ಕೆಎಂಎಫ್ ಹಾಗೂ ಧರ್ಮಸ್ಥಳ ಸಂಘದ ಮೂಲಕ ಸುಮಾರು 11 ಲಕ್ಷ ಅನುದಾನವನ್ನು ನೀಡಲಾಗುತ್ತದೆ ಸದುಪಯೋಗ ಪಡಿಸಿಕೊಳ್ಳಬೇಕು ಉತ್ಪಾದಕರನ್ನು ಪೋತ್ಸಾಹಿಸುವ ಕೆಲಸವನ್ನು ಸಂಘಗಳು ಮಾಡಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಕೋಮುಲ್ ಉಪ ವ್ಯವಸ್ಥಾಪಕ ಡಾ.ಮಹೇಶ್ ಮಾತನಾಡಿ, ಕೋಮುಲ್ ವತಿಯಿಂದ ನೀಡುವ ಸವಲತ್ತುಗಳನ್ನು ಹಾಲು ಉತ್ಪಾದಕರು ಸಮರ್ಪಕವಾಗಿ ಬಳಸಿಕೊಂಡು ಡೇರಿಗೆ ಗುಣಮಟ್ಟದ ಹಾಲನ್ನು ಪೂರೈಸಿ ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು. ರೈತರು ತಮ್ಮ ಹಸುಗಳಿಗೆ ವಿಮೆ ಮಾಡಿಸಿಕೊಂಡು ಅವುಗಳ ಆರೋಗ್ಯವು ಕಾಪಾಡಿಕೊಳ್ಳಬೇಕು ಹಿಂದೆ ಸಂಘದಲ್ಲಿ ನಷ್ಟದಲ್ಲಿ ಇದ್ದ ಡೇರಿ ಈ ಬಾರಿ 46 ಸಾವಿರ ಲಾಭ ಗಳಿಸಿದೆ ಇದು ಸಾಲದು ಮುಂದೆ ಆಡಳಿತ ಮಂಡಳಿಯ ಒಗ್ಗಟ್ಟಿನಿಂದ ಡೇರಿ ಅಭಿವೃದ್ಧಿಗೆ ಮುಂದಾಗಬೇಕು ಎಂದರು.
ಸಂಘದ ಅಧ್ಯಕ್ಷ ಹೆಚ್ ನಾಗರಾಜ್ ಮಾತನಾಡಿ ಕೊಂಡರಾಜನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಪ್ರಸಕ್ತ ಸಾಲಿನಲ್ಲಿ 2.61 ಲಕ್ಷ ರೂ ವ್ಯಾಪಾರ ಲಾಭ ಗಳಿಸಿ 46 ಸಾವಿರ ನಿವ್ವಳ ಲಾಭಗಳಿಸಿದೆ ಮುಂದೆ ಹೆಚ್ಚಿನ ಅಭಿವೃದ್ಧಿಗೆ ಒತ್ತು ನೀಡಲಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೋಮುಲ್ ವಿಸ್ತರಣಾಧಿಕಾರಿ ನಾಗಪ್ಪ, ಗ್ರಾಪಂ ಸದಸ್ಯರಾದ ಶ್ರೀನಿವಾಸ್ ಯಾದವ್, ಸುಬ್ಬರಾಮಪ್ಪ, ಮುಖಂಡ ಕೋರ್ಟ್ ನಾಗರಾಜ್, ಸಂಘದ ಉಪಾಧ್ಯಕ್ಷ ಕೆ.ವಿ ಮಂಜುನಾಥ್, ನಿರ್ದೇಶಕರಾದ ಶಂಕರಪ್ಪ, ಲಕ್ಷ್ಮೀಪತಿ, ನಾರಾಯಣಸ್ವಾಮಿ, ಮುರಳಿಬಾಬು, ಸಿ.ನಾರಾಯಣಸ್ವಾಮಿ, ನಂದಕುಮಾರ್, ವೆಂಕಟಲಕ್ಷ್ಮಮ್ಮ, ಕಾರ್ಯದರ್ಶಿ ಗಂಗಾಧರ್ ನಿರೂಪಕಿ ಕೊಂಡರಾಜನಹಳ್ಳಿ ಮಂಜುಳ ಸೇರಿದಂತೆ ಹಾಲು ಉತ್ಪಾದಕರು ಗ್ರಾಮಸ್ಥರು ಇದ್ದರು.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…