ಕೋಲಾರ: ಹೈನುಗಾರಿಕೆಯು ಗ್ರಾಮೀಣ ಜನರ ಆರ್ಥಿಕತೆಯ ಬದುಕಿಗೆ ಆಸರೆಯಾಗಿದೆ. ಇತ್ತಿಚಿನ ದಿನಗಳಲ್ಲಿ ರೈತರು ಕೃಷಿಯ ಜೊತೆಗೆ ಹೈನುಗಾರಿಕೆ ಮಾಡಿಕೊಂಡು ಸುಖಿ ಜೀವನ ನಡೆಸುತ್ತಿದ್ದಾರೆ ಎಂದು ಕೋಮುಲ್ ನಿರ್ದೇಶಕ ಚೆಲುವನಹಳ್ಳಿ ಡಿ.ನಾಗರಾಜ್ ತಿಳಿಸಿದರು.
ತಾಲೂಕಿನ ಕೊಂಡರಾಜನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿದ ಅವರು ಹೈನುಗಾರಿಕೆಯಲ್ಲಿ ತೊಡಗಿರುವ ಹಾಲು ಉತ್ಪಾದಕರಿಗೆ ಒಕ್ಕೂಟವು ಸೂಕ್ತ ಬೆಲೆ ನೀಡಿ ಹಾಲು ಖರೀದಿ ಮಾಡುತ್ತಿದೆ ಗುಣಮಟ್ಟದ ಹಾಲು ಡೇರಿಗೆ ನೀಡುವ ಮೂಲಕ ಸಂಘಗಳು ಸಹ ಉತ್ತಮ ಲಾಭಾಂಶವನ್ನು ಪಡೆದುಕೊಳ್ಳಬೇಕು ಎಂದರು.
ರೈತರು ಹೈನುಗಾರಿಕೆ ನಡೆಸಲು ಒಕ್ಕೂಟದಿಂದ ಹಾಗೂ ಸಹಕಾರಿ ಬ್ಯಾಂಕುಗಳು ಮೂಲಕ ಸಾಲ ಸೌಲಭ್ಯಗಳನ್ನು ನೀಡಲಾಗುತ್ತದೆ ನಿಮ್ಮ ಸಂಘದಲ್ಲಿ ಜಾಗ ಇದ್ದರೆ ಕಟ್ಟಡ ಕಟ್ಟಲು ಕೋಮುಲ್ ಒಕ್ಕೂಟ, ಕೆಎಂಎಫ್ ಹಾಗೂ ಧರ್ಮಸ್ಥಳ ಸಂಘದ ಮೂಲಕ ಸುಮಾರು 11 ಲಕ್ಷ ಅನುದಾನವನ್ನು ನೀಡಲಾಗುತ್ತದೆ ಸದುಪಯೋಗ ಪಡಿಸಿಕೊಳ್ಳಬೇಕು ಉತ್ಪಾದಕರನ್ನು ಪೋತ್ಸಾಹಿಸುವ ಕೆಲಸವನ್ನು ಸಂಘಗಳು ಮಾಡಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಕೋಮುಲ್ ಉಪ ವ್ಯವಸ್ಥಾಪಕ ಡಾ.ಮಹೇಶ್ ಮಾತನಾಡಿ, ಕೋಮುಲ್ ವತಿಯಿಂದ ನೀಡುವ ಸವಲತ್ತುಗಳನ್ನು ಹಾಲು ಉತ್ಪಾದಕರು ಸಮರ್ಪಕವಾಗಿ ಬಳಸಿಕೊಂಡು ಡೇರಿಗೆ ಗುಣಮಟ್ಟದ ಹಾಲನ್ನು ಪೂರೈಸಿ ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು. ರೈತರು ತಮ್ಮ ಹಸುಗಳಿಗೆ ವಿಮೆ ಮಾಡಿಸಿಕೊಂಡು ಅವುಗಳ ಆರೋಗ್ಯವು ಕಾಪಾಡಿಕೊಳ್ಳಬೇಕು ಹಿಂದೆ ಸಂಘದಲ್ಲಿ ನಷ್ಟದಲ್ಲಿ ಇದ್ದ ಡೇರಿ ಈ ಬಾರಿ 46 ಸಾವಿರ ಲಾಭ ಗಳಿಸಿದೆ ಇದು ಸಾಲದು ಮುಂದೆ ಆಡಳಿತ ಮಂಡಳಿಯ ಒಗ್ಗಟ್ಟಿನಿಂದ ಡೇರಿ ಅಭಿವೃದ್ಧಿಗೆ ಮುಂದಾಗಬೇಕು ಎಂದರು.
ಸಂಘದ ಅಧ್ಯಕ್ಷ ಹೆಚ್ ನಾಗರಾಜ್ ಮಾತನಾಡಿ ಕೊಂಡರಾಜನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಪ್ರಸಕ್ತ ಸಾಲಿನಲ್ಲಿ 2.61 ಲಕ್ಷ ರೂ ವ್ಯಾಪಾರ ಲಾಭ ಗಳಿಸಿ 46 ಸಾವಿರ ನಿವ್ವಳ ಲಾಭಗಳಿಸಿದೆ ಮುಂದೆ ಹೆಚ್ಚಿನ ಅಭಿವೃದ್ಧಿಗೆ ಒತ್ತು ನೀಡಲಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೋಮುಲ್ ವಿಸ್ತರಣಾಧಿಕಾರಿ ನಾಗಪ್ಪ, ಗ್ರಾಪಂ ಸದಸ್ಯರಾದ ಶ್ರೀನಿವಾಸ್ ಯಾದವ್, ಸುಬ್ಬರಾಮಪ್ಪ, ಮುಖಂಡ ಕೋರ್ಟ್ ನಾಗರಾಜ್, ಸಂಘದ ಉಪಾಧ್ಯಕ್ಷ ಕೆ.ವಿ ಮಂಜುನಾಥ್, ನಿರ್ದೇಶಕರಾದ ಶಂಕರಪ್ಪ, ಲಕ್ಷ್ಮೀಪತಿ, ನಾರಾಯಣಸ್ವಾಮಿ, ಮುರಳಿಬಾಬು, ಸಿ.ನಾರಾಯಣಸ್ವಾಮಿ, ನಂದಕುಮಾರ್, ವೆಂಕಟಲಕ್ಷ್ಮಮ್ಮ, ಕಾರ್ಯದರ್ಶಿ ಗಂಗಾಧರ್ ನಿರೂಪಕಿ ಕೊಂಡರಾಜನಹಳ್ಳಿ ಮಂಜುಳ ಸೇರಿದಂತೆ ಹಾಲು ಉತ್ಪಾದಕರು ಗ್ರಾಮಸ್ಥರು ಇದ್ದರು.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ MMS ಗ್ರೂಪ್ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಹುಟ್ಟುಹಬ್ಬ…
ಜಿಲ್ಲೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೇಕಡ 87.44% ಗಣತಿ ನಮೂನೆ ಮತದಾರರಿಗೆ ವಿತರಿಸಲಾಗಿದೆ ಎಂದು…
ದೇವನಹಳ್ಳಿ: ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 12 ವರ್ಷದ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ…
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ…
ನವದೆಹಲಿ: 2026ರಲ್ಲಿ ರೂಪುಗೊಳ್ಳುತ್ತಿರುವ "ಸೂಪರ್ ಎಲ್ ನಿನೊ" ಪರಿಣಾಮ ದೇಶದ ಮಾನ್ಸೂನ್ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ…
ದೆಹಲಿಯಲ್ಲಿ ಭಾರತದ ಮುಖ್ಯ ಚುನಾವಣಾ ಆಯುಕ್ತರಾದ ಶ್ರೀ ಜ್ಞಾನೇಶ್ ಕುಮಾರ್ ಅವರನ್ನು ಇಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಶ್ರೀ…