ಕೋಲಾರ: ಹೈನುಗಾರಿಕೆಯು ಗ್ರಾಮೀಣ ಜನರ ಆರ್ಥಿಕತೆಯ ಬದುಕಿಗೆ ಆಸರೆಯಾಗಿದೆ. ಇತ್ತಿಚಿನ ದಿನಗಳಲ್ಲಿ ರೈತರು ಕೃಷಿಯ ಜೊತೆಗೆ ಹೈನುಗಾರಿಕೆ ಮಾಡಿಕೊಂಡು ಸುಖಿ ಜೀವನ ನಡೆಸುತ್ತಿದ್ದಾರೆ ಎಂದು ಕೋಮುಲ್ ನಿರ್ದೇಶಕ ಚೆಲುವನಹಳ್ಳಿ ಡಿ.ನಾಗರಾಜ್ ತಿಳಿಸಿದರು.
ತಾಲೂಕಿನ ಕೊಂಡರಾಜನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿದ ಅವರು ಹೈನುಗಾರಿಕೆಯಲ್ಲಿ ತೊಡಗಿರುವ ಹಾಲು ಉತ್ಪಾದಕರಿಗೆ ಒಕ್ಕೂಟವು ಸೂಕ್ತ ಬೆಲೆ ನೀಡಿ ಹಾಲು ಖರೀದಿ ಮಾಡುತ್ತಿದೆ ಗುಣಮಟ್ಟದ ಹಾಲು ಡೇರಿಗೆ ನೀಡುವ ಮೂಲಕ ಸಂಘಗಳು ಸಹ ಉತ್ತಮ ಲಾಭಾಂಶವನ್ನು ಪಡೆದುಕೊಳ್ಳಬೇಕು ಎಂದರು.
ರೈತರು ಹೈನುಗಾರಿಕೆ ನಡೆಸಲು ಒಕ್ಕೂಟದಿಂದ ಹಾಗೂ ಸಹಕಾರಿ ಬ್ಯಾಂಕುಗಳು ಮೂಲಕ ಸಾಲ ಸೌಲಭ್ಯಗಳನ್ನು ನೀಡಲಾಗುತ್ತದೆ ನಿಮ್ಮ ಸಂಘದಲ್ಲಿ ಜಾಗ ಇದ್ದರೆ ಕಟ್ಟಡ ಕಟ್ಟಲು ಕೋಮುಲ್ ಒಕ್ಕೂಟ, ಕೆಎಂಎಫ್ ಹಾಗೂ ಧರ್ಮಸ್ಥಳ ಸಂಘದ ಮೂಲಕ ಸುಮಾರು 11 ಲಕ್ಷ ಅನುದಾನವನ್ನು ನೀಡಲಾಗುತ್ತದೆ ಸದುಪಯೋಗ ಪಡಿಸಿಕೊಳ್ಳಬೇಕು ಉತ್ಪಾದಕರನ್ನು ಪೋತ್ಸಾಹಿಸುವ ಕೆಲಸವನ್ನು ಸಂಘಗಳು ಮಾಡಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಕೋಮುಲ್ ಉಪ ವ್ಯವಸ್ಥಾಪಕ ಡಾ.ಮಹೇಶ್ ಮಾತನಾಡಿ, ಕೋಮುಲ್ ವತಿಯಿಂದ ನೀಡುವ ಸವಲತ್ತುಗಳನ್ನು ಹಾಲು ಉತ್ಪಾದಕರು ಸಮರ್ಪಕವಾಗಿ ಬಳಸಿಕೊಂಡು ಡೇರಿಗೆ ಗುಣಮಟ್ಟದ ಹಾಲನ್ನು ಪೂರೈಸಿ ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು. ರೈತರು ತಮ್ಮ ಹಸುಗಳಿಗೆ ವಿಮೆ ಮಾಡಿಸಿಕೊಂಡು ಅವುಗಳ ಆರೋಗ್ಯವು ಕಾಪಾಡಿಕೊಳ್ಳಬೇಕು ಹಿಂದೆ ಸಂಘದಲ್ಲಿ ನಷ್ಟದಲ್ಲಿ ಇದ್ದ ಡೇರಿ ಈ ಬಾರಿ 46 ಸಾವಿರ ಲಾಭ ಗಳಿಸಿದೆ ಇದು ಸಾಲದು ಮುಂದೆ ಆಡಳಿತ ಮಂಡಳಿಯ ಒಗ್ಗಟ್ಟಿನಿಂದ ಡೇರಿ ಅಭಿವೃದ್ಧಿಗೆ ಮುಂದಾಗಬೇಕು ಎಂದರು.
ಸಂಘದ ಅಧ್ಯಕ್ಷ ಹೆಚ್ ನಾಗರಾಜ್ ಮಾತನಾಡಿ ಕೊಂಡರಾಜನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಪ್ರಸಕ್ತ ಸಾಲಿನಲ್ಲಿ 2.61 ಲಕ್ಷ ರೂ ವ್ಯಾಪಾರ ಲಾಭ ಗಳಿಸಿ 46 ಸಾವಿರ ನಿವ್ವಳ ಲಾಭಗಳಿಸಿದೆ ಮುಂದೆ ಹೆಚ್ಚಿನ ಅಭಿವೃದ್ಧಿಗೆ ಒತ್ತು ನೀಡಲಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೋಮುಲ್ ವಿಸ್ತರಣಾಧಿಕಾರಿ ನಾಗಪ್ಪ, ಗ್ರಾಪಂ ಸದಸ್ಯರಾದ ಶ್ರೀನಿವಾಸ್ ಯಾದವ್, ಸುಬ್ಬರಾಮಪ್ಪ, ಮುಖಂಡ ಕೋರ್ಟ್ ನಾಗರಾಜ್, ಸಂಘದ ಉಪಾಧ್ಯಕ್ಷ ಕೆ.ವಿ ಮಂಜುನಾಥ್, ನಿರ್ದೇಶಕರಾದ ಶಂಕರಪ್ಪ, ಲಕ್ಷ್ಮೀಪತಿ, ನಾರಾಯಣಸ್ವಾಮಿ, ಮುರಳಿಬಾಬು, ಸಿ.ನಾರಾಯಣಸ್ವಾಮಿ, ನಂದಕುಮಾರ್, ವೆಂಕಟಲಕ್ಷ್ಮಮ್ಮ, ಕಾರ್ಯದರ್ಶಿ ಗಂಗಾಧರ್ ನಿರೂಪಕಿ ಕೊಂಡರಾಜನಹಳ್ಳಿ ಮಂಜುಳ ಸೇರಿದಂತೆ ಹಾಲು ಉತ್ಪಾದಕರು ಗ್ರಾಮಸ್ಥರು ಇದ್ದರು.
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…