ಕೋಲಾರ: ಹೈನುಗಾರಿಕೆಯು ಗ್ರಾಮೀಣ ಜನರ ಆರ್ಥಿಕತೆಯ ಬದುಕಿಗೆ ಆಸರೆಯಾಗಿದೆ. ಇತ್ತಿಚಿನ ದಿನಗಳಲ್ಲಿ ರೈತರು ಕೃಷಿಯ ಜೊತೆಗೆ ಹೈನುಗಾರಿಕೆ ಮಾಡಿಕೊಂಡು ಸುಖಿ ಜೀವನ ನಡೆಸುತ್ತಿದ್ದಾರೆ ಎಂದು ಕೋಮುಲ್ ನಿರ್ದೇಶಕ ಚೆಲುವನಹಳ್ಳಿ ಡಿ.ನಾಗರಾಜ್ ತಿಳಿಸಿದರು.
ತಾಲೂಕಿನ ಕೊಂಡರಾಜನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿದ ಅವರು ಹೈನುಗಾರಿಕೆಯಲ್ಲಿ ತೊಡಗಿರುವ ಹಾಲು ಉತ್ಪಾದಕರಿಗೆ ಒಕ್ಕೂಟವು ಸೂಕ್ತ ಬೆಲೆ ನೀಡಿ ಹಾಲು ಖರೀದಿ ಮಾಡುತ್ತಿದೆ ಗುಣಮಟ್ಟದ ಹಾಲು ಡೇರಿಗೆ ನೀಡುವ ಮೂಲಕ ಸಂಘಗಳು ಸಹ ಉತ್ತಮ ಲಾಭಾಂಶವನ್ನು ಪಡೆದುಕೊಳ್ಳಬೇಕು ಎಂದರು.
ರೈತರು ಹೈನುಗಾರಿಕೆ ನಡೆಸಲು ಒಕ್ಕೂಟದಿಂದ ಹಾಗೂ ಸಹಕಾರಿ ಬ್ಯಾಂಕುಗಳು ಮೂಲಕ ಸಾಲ ಸೌಲಭ್ಯಗಳನ್ನು ನೀಡಲಾಗುತ್ತದೆ ನಿಮ್ಮ ಸಂಘದಲ್ಲಿ ಜಾಗ ಇದ್ದರೆ ಕಟ್ಟಡ ಕಟ್ಟಲು ಕೋಮುಲ್ ಒಕ್ಕೂಟ, ಕೆಎಂಎಫ್ ಹಾಗೂ ಧರ್ಮಸ್ಥಳ ಸಂಘದ ಮೂಲಕ ಸುಮಾರು 11 ಲಕ್ಷ ಅನುದಾನವನ್ನು ನೀಡಲಾಗುತ್ತದೆ ಸದುಪಯೋಗ ಪಡಿಸಿಕೊಳ್ಳಬೇಕು ಉತ್ಪಾದಕರನ್ನು ಪೋತ್ಸಾಹಿಸುವ ಕೆಲಸವನ್ನು ಸಂಘಗಳು ಮಾಡಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಕೋಮುಲ್ ಉಪ ವ್ಯವಸ್ಥಾಪಕ ಡಾ.ಮಹೇಶ್ ಮಾತನಾಡಿ, ಕೋಮುಲ್ ವತಿಯಿಂದ ನೀಡುವ ಸವಲತ್ತುಗಳನ್ನು ಹಾಲು ಉತ್ಪಾದಕರು ಸಮರ್ಪಕವಾಗಿ ಬಳಸಿಕೊಂಡು ಡೇರಿಗೆ ಗುಣಮಟ್ಟದ ಹಾಲನ್ನು ಪೂರೈಸಿ ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು. ರೈತರು ತಮ್ಮ ಹಸುಗಳಿಗೆ ವಿಮೆ ಮಾಡಿಸಿಕೊಂಡು ಅವುಗಳ ಆರೋಗ್ಯವು ಕಾಪಾಡಿಕೊಳ್ಳಬೇಕು ಹಿಂದೆ ಸಂಘದಲ್ಲಿ ನಷ್ಟದಲ್ಲಿ ಇದ್ದ ಡೇರಿ ಈ ಬಾರಿ 46 ಸಾವಿರ ಲಾಭ ಗಳಿಸಿದೆ ಇದು ಸಾಲದು ಮುಂದೆ ಆಡಳಿತ ಮಂಡಳಿಯ ಒಗ್ಗಟ್ಟಿನಿಂದ ಡೇರಿ ಅಭಿವೃದ್ಧಿಗೆ ಮುಂದಾಗಬೇಕು ಎಂದರು.
ಸಂಘದ ಅಧ್ಯಕ್ಷ ಹೆಚ್ ನಾಗರಾಜ್ ಮಾತನಾಡಿ ಕೊಂಡರಾಜನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಪ್ರಸಕ್ತ ಸಾಲಿನಲ್ಲಿ 2.61 ಲಕ್ಷ ರೂ ವ್ಯಾಪಾರ ಲಾಭ ಗಳಿಸಿ 46 ಸಾವಿರ ನಿವ್ವಳ ಲಾಭಗಳಿಸಿದೆ ಮುಂದೆ ಹೆಚ್ಚಿನ ಅಭಿವೃದ್ಧಿಗೆ ಒತ್ತು ನೀಡಲಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೋಮುಲ್ ವಿಸ್ತರಣಾಧಿಕಾರಿ ನಾಗಪ್ಪ, ಗ್ರಾಪಂ ಸದಸ್ಯರಾದ ಶ್ರೀನಿವಾಸ್ ಯಾದವ್, ಸುಬ್ಬರಾಮಪ್ಪ, ಮುಖಂಡ ಕೋರ್ಟ್ ನಾಗರಾಜ್, ಸಂಘದ ಉಪಾಧ್ಯಕ್ಷ ಕೆ.ವಿ ಮಂಜುನಾಥ್, ನಿರ್ದೇಶಕರಾದ ಶಂಕರಪ್ಪ, ಲಕ್ಷ್ಮೀಪತಿ, ನಾರಾಯಣಸ್ವಾಮಿ, ಮುರಳಿಬಾಬು, ಸಿ.ನಾರಾಯಣಸ್ವಾಮಿ, ನಂದಕುಮಾರ್, ವೆಂಕಟಲಕ್ಷ್ಮಮ್ಮ, ಕಾರ್ಯದರ್ಶಿ ಗಂಗಾಧರ್ ನಿರೂಪಕಿ ಕೊಂಡರಾಜನಹಳ್ಳಿ ಮಂಜುಳ ಸೇರಿದಂತೆ ಹಾಲು ಉತ್ಪಾದಕರು ಗ್ರಾಮಸ್ಥರು ಇದ್ದರು.
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…