ಕೋಲಾರ: ಹೈನುಗಾರಿಕೆಯು ಗ್ರಾಮೀಣ ಜನರ ಆರ್ಥಿಕತೆಯ ಬದುಕಿಗೆ ಆಸರೆಯಾಗಿದೆ. ಇತ್ತಿಚಿನ ದಿನಗಳಲ್ಲಿ ರೈತರು ಕೃಷಿಯ ಜೊತೆಗೆ ಹೈನುಗಾರಿಕೆ ಮಾಡಿಕೊಂಡು ಸುಖಿ ಜೀವನ ನಡೆಸುತ್ತಿದ್ದಾರೆ ಎಂದು ಕೋಮುಲ್ ನಿರ್ದೇಶಕ ಚೆಲುವನಹಳ್ಳಿ ಡಿ.ನಾಗರಾಜ್ ತಿಳಿಸಿದರು.
ತಾಲೂಕಿನ ಕೊಂಡರಾಜನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿದ ಅವರು ಹೈನುಗಾರಿಕೆಯಲ್ಲಿ ತೊಡಗಿರುವ ಹಾಲು ಉತ್ಪಾದಕರಿಗೆ ಒಕ್ಕೂಟವು ಸೂಕ್ತ ಬೆಲೆ ನೀಡಿ ಹಾಲು ಖರೀದಿ ಮಾಡುತ್ತಿದೆ ಗುಣಮಟ್ಟದ ಹಾಲು ಡೇರಿಗೆ ನೀಡುವ ಮೂಲಕ ಸಂಘಗಳು ಸಹ ಉತ್ತಮ ಲಾಭಾಂಶವನ್ನು ಪಡೆದುಕೊಳ್ಳಬೇಕು ಎಂದರು.
ರೈತರು ಹೈನುಗಾರಿಕೆ ನಡೆಸಲು ಒಕ್ಕೂಟದಿಂದ ಹಾಗೂ ಸಹಕಾರಿ ಬ್ಯಾಂಕುಗಳು ಮೂಲಕ ಸಾಲ ಸೌಲಭ್ಯಗಳನ್ನು ನೀಡಲಾಗುತ್ತದೆ ನಿಮ್ಮ ಸಂಘದಲ್ಲಿ ಜಾಗ ಇದ್ದರೆ ಕಟ್ಟಡ ಕಟ್ಟಲು ಕೋಮುಲ್ ಒಕ್ಕೂಟ, ಕೆಎಂಎಫ್ ಹಾಗೂ ಧರ್ಮಸ್ಥಳ ಸಂಘದ ಮೂಲಕ ಸುಮಾರು 11 ಲಕ್ಷ ಅನುದಾನವನ್ನು ನೀಡಲಾಗುತ್ತದೆ ಸದುಪಯೋಗ ಪಡಿಸಿಕೊಳ್ಳಬೇಕು ಉತ್ಪಾದಕರನ್ನು ಪೋತ್ಸಾಹಿಸುವ ಕೆಲಸವನ್ನು ಸಂಘಗಳು ಮಾಡಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಕೋಮುಲ್ ಉಪ ವ್ಯವಸ್ಥಾಪಕ ಡಾ.ಮಹೇಶ್ ಮಾತನಾಡಿ, ಕೋಮುಲ್ ವತಿಯಿಂದ ನೀಡುವ ಸವಲತ್ತುಗಳನ್ನು ಹಾಲು ಉತ್ಪಾದಕರು ಸಮರ್ಪಕವಾಗಿ ಬಳಸಿಕೊಂಡು ಡೇರಿಗೆ ಗುಣಮಟ್ಟದ ಹಾಲನ್ನು ಪೂರೈಸಿ ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು. ರೈತರು ತಮ್ಮ ಹಸುಗಳಿಗೆ ವಿಮೆ ಮಾಡಿಸಿಕೊಂಡು ಅವುಗಳ ಆರೋಗ್ಯವು ಕಾಪಾಡಿಕೊಳ್ಳಬೇಕು ಹಿಂದೆ ಸಂಘದಲ್ಲಿ ನಷ್ಟದಲ್ಲಿ ಇದ್ದ ಡೇರಿ ಈ ಬಾರಿ 46 ಸಾವಿರ ಲಾಭ ಗಳಿಸಿದೆ ಇದು ಸಾಲದು ಮುಂದೆ ಆಡಳಿತ ಮಂಡಳಿಯ ಒಗ್ಗಟ್ಟಿನಿಂದ ಡೇರಿ ಅಭಿವೃದ್ಧಿಗೆ ಮುಂದಾಗಬೇಕು ಎಂದರು.
ಸಂಘದ ಅಧ್ಯಕ್ಷ ಹೆಚ್ ನಾಗರಾಜ್ ಮಾತನಾಡಿ ಕೊಂಡರಾಜನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಪ್ರಸಕ್ತ ಸಾಲಿನಲ್ಲಿ 2.61 ಲಕ್ಷ ರೂ ವ್ಯಾಪಾರ ಲಾಭ ಗಳಿಸಿ 46 ಸಾವಿರ ನಿವ್ವಳ ಲಾಭಗಳಿಸಿದೆ ಮುಂದೆ ಹೆಚ್ಚಿನ ಅಭಿವೃದ್ಧಿಗೆ ಒತ್ತು ನೀಡಲಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೋಮುಲ್ ವಿಸ್ತರಣಾಧಿಕಾರಿ ನಾಗಪ್ಪ, ಗ್ರಾಪಂ ಸದಸ್ಯರಾದ ಶ್ರೀನಿವಾಸ್ ಯಾದವ್, ಸುಬ್ಬರಾಮಪ್ಪ, ಮುಖಂಡ ಕೋರ್ಟ್ ನಾಗರಾಜ್, ಸಂಘದ ಉಪಾಧ್ಯಕ್ಷ ಕೆ.ವಿ ಮಂಜುನಾಥ್, ನಿರ್ದೇಶಕರಾದ ಶಂಕರಪ್ಪ, ಲಕ್ಷ್ಮೀಪತಿ, ನಾರಾಯಣಸ್ವಾಮಿ, ಮುರಳಿಬಾಬು, ಸಿ.ನಾರಾಯಣಸ್ವಾಮಿ, ನಂದಕುಮಾರ್, ವೆಂಕಟಲಕ್ಷ್ಮಮ್ಮ, ಕಾರ್ಯದರ್ಶಿ ಗಂಗಾಧರ್ ನಿರೂಪಕಿ ಕೊಂಡರಾಜನಹಳ್ಳಿ ಮಂಜುಳ ಸೇರಿದಂತೆ ಹಾಲು ಉತ್ಪಾದಕರು ಗ್ರಾಮಸ್ಥರು ಇದ್ದರು.
ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…
ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…
ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…
ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…
ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…