ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿ ರಾಜ್ಯದ ಹೈನು ರೈತರ ಹಿತ ಕಾಯಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಭರವಸೆ ನೀಡಿದರು.
ದೇವನಹಳ್ಳಿಯಲ್ಲಿ ಭಾನುವಾರ ಆಯೋಜಿಸಿದ್ದ ಬಹು ಹಾಲು ಒಕ್ಕೂಟಗಳ ವತಿಯಿಂದ ಹಾಲು ಉತ್ಪಾದಕ ಸಂಘಗಳ ಸದಸ್ಯರು ಮತ್ತು ಸಿಬ್ಬಂದಿಯ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಡೀ ರಾಜ್ಯದಲ್ಲಿ ಅತಿ ಹೆಚ್ಚು ಹಾಲು ಶೇಖರಣೆ ಮಾಡುತ್ತಿರುವುದು ಬಮೂಲ್ ಸಂಸ್ಥೆಯಾಗಿದ್ದು, ಈ ಖ್ಯಾತಿಗೆ ಪಾತ್ರರಾದ ಎಲ್ಲ ಹೈನು ರೈತರ ಶ್ರಮ ಅಭಿನಂದನೀಯ ಎಂದರು.
ಕುಸಿತ ಕಂಡ ಹಾಲು ಉತ್ಪಾದನೆ
ಈ ಹಿಂದೆ ಪ್ರತಿನಿತ್ಯ 15 ಲಕ್ಷ ಲೀಟರ್ ಇದ್ದ ಹಾಲು ಉತ್ಪಾದನೆ ಇದೀಗ 13 ಲಕ್ಷಕ್ಕೆ ಕುಸಿತ ಕಂಡಿದೆ. ದೇವನಹಳ್ಳಿ ತಾಲೂಕಿನಲ್ಲಿ ದಿನಕ್ಕೆ 1.4 ಲಕ್ಷ ಲೀಟರ್ ಗೆ ಹಾಲು ಉತ್ಪಾದನೆಯಾಗುತ್ತಿದ್ದು, 163 ಕಾರ್ಯನಿರತ ಹಾಲು ಉತ್ಪಾದಕ ಸಂಘಳಿವೆ. ಈ ಎಲ್ಲ ಸಂಘಗಳಿಂದ ಒಟ್ಟು 13,320 ರೈತರು ಹೈನುಗಾರಿಕೆ ಎಂಬ ಉಪ ಕಸುಬಿನಲ್ಲಿ ತೊಡಗಿದ್ದಾರೆ ಎಂದು ಸಚಿವರು ವಿವರಿಸಿದರು.
ಹೈನುಗಾರಿಕೆಗೆ ಪ್ರೋತ್ಸಾಹ
ತೋಟಗಾರಿಕೆ, ಹೈನುಗಾರಿಕೆ, ರೇಷ್ಮೆಯಿಂದ ಈ ಭಾಗದಲ್ಲಿ ರೈತರು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗಿದೆ. ಇದಕ್ಕೆ ಅಗತ್ಯವಿರುವ ಸೌಲಭ್ಯಗಳನ್ನು ಸರ್ಕಾರ ನೀಡುತ್ತಿದೆ. ಹೈನು ರೈತರಿಗೆ ಪ್ರೋತ್ಸಾಹಧನ ನೀಡುತ್ತಿರುವುದು ಇಡೀ ದೇಶದಲ್ಲಿಯೇ ರಾಜ್ಯ ಮಾತ್ರ. ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ರೋತ್ಸಾಹ ಧನ ನೀಡುವುದನ್ನು ಆರಂಭಿಸಿದರು, ನಂತರದ ಸರ್ಕಾರಗಳು ಹೆಚ್ಚಿಸಿದವು. ಈಗ ಸರ್ಕಾರ ಪ್ರತಿ ಲೀಟರ್ ಹಾಲಿಗೆ 5 ರುಪಾಯಿ ನೀಡುತ್ತಿದೆ ಎಂದರು.
ಹಾಲಿನ ಬೆಲೆ ಇತರೆ ರಾಜ್ಯಗಳಿಗೆ ಹೋಲಿಸಿದರೆ ಮಾರಾಟ ಮಾಡುತ್ತಿರುವುದು ಕಡಿಮೆ ಬೆಲೆಗೆ, ಕೋವಿಡ್ ಸಂದರ್ಭದಲ್ಲಿ ಹಾಲಿನ ಬೆಲೆ ಹೆಚ್ಚಿಸಲು ಸಾಧ್ಯವಾಗಲಿಲ್ಲ. ನಾಲ್ಕು ವರ್ಷದಿಂದ ಹಾಲಿನ ಬೆಲೆ ಹೆಚ್ಚಿಸದೆ ಒಂದೇ ಸಲ 5 ರುಪಾಯಿ ಹೆಚ್ಚಿಸಿದರೆ ಹೊರೆಯಾಗಲಿದೆ ಎಂಬ ಕಾರಣಕ್ಕೆ ಮುಖ್ಯಮಂತ್ರಿಗಳು ಕಡಿಮೆ ಬೆಲೆ ಏರಿಕೆ ಮಾಡಿದ್ದಾರೆ. ಖರೀದಿ ಬೆಲೆಯಿಂದಾಗಿ ರೈತರಿಗೆ ಅದಾಯ ಸಿಗುತ್ತಿಲ್ಲ ಎಂಬ ಕಾರಣಕ್ಕೆ ಹಾಲಿನ ಉತ್ಪಾದನೆ ಕಡಿಮೆಯಾಗಿದೆ ಎಂದರು.
ಇಸ್ರೇಲ್ ಸ್ಫೂರ್ತಿಯಾಗಲಿ
ಶಿಕ್ಷಣದಿಂದ ಎಲ್ಲವೂ ಸಾಧ್ಯ, ಹಾಗಾಗಿ ರೈತರ ಮಕ್ಕಳು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು, ಕೃಷಿಯಲ್ಲಿ ಆಧುನಿಕ ಪದ್ಧತಿಗಳು ಬಂದಿವೆ, ತೋಟಗಾರಿಕಾ ಬೆಳೆಗಳಲ್ಲಿ ಆಧುನಿಕ ಪದ್ಧತಿ ಅನುಸರಿಸುವ ಶಿಕ್ಷಣ ಪಡೆಯಬೇಕು, ಇಸ್ರೇಲ್ ಚಿಕ್ಕ ದೇಶವಾಗಿದ್ದರೂ, ಕಡಿಮೆ ಪ್ರಮಾಣದ ಮಳೆಯಾಗುತ್ತಿದ್ದರೂ ಅಲ್ಲಿ ಕೃಷಿ ಮತ್ತು ತೋಟಗಾರಿಕೆ ಇಡೀ ವಿಶ್ವಕ್ಕೇ ಮಾದರಿಯಾಗಿದೆ ಎಂದು ಹೇಳಿದರು.
ಜೀವನದಲ್ಲಿ ಎಲ್ಲರೂ ಯಶಸ್ವಿಯಾಗಬೇಕು, ನೀವು ಆಯ್ಕೆ ಮಾಡಿಕೊಂಡ ಕ್ಷೇತ್ರದಲ್ಲಿ ನಿಪುಣರಾಗುವಂತೆ ಸಚಿವರು ಹಾರೈಸಿದರು.
ಈ ಸಂದರ್ಭದಲ್ಲಿ ಬೆಂಗಳೂರು ಸಹಕಾರ ಹಾಲು ಒಕ್ಕೂಟದ ಅಧ್ಯಕ್ಷ ನರಸಿಂಹಮೂರ್ತಿ, ಉಪಾಧ್ಯಕ್ಷ ಮಂಜುನಾಥ್, ನಿರ್ದೇಶಕ ಶ್ರೀನಿವಾಸ್, ಕೃಷ್ಣಯ್ಯ, ಜಯಚಂದ್ರ ಗೌಡ, ಶ್ರೀನಿವಾಸ್, ಸುಧಾಕರ್, ಡಾ.ಎಂ. ಗಂಗಯ್ಯ, ವೆಂಕಟಸ್ವಾಮಿ ರೆಡ್ಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…
ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…
ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…