ಹೈವೆ ರಸ್ತೆಯಲ್ಲಿ ವಾಕಿಂಗ್ ಮಾಡುವ ವೇಳೆ ವೃದ್ಧ ಮಹಿಳೆ ಕೊರಳಲ್ಲಿದ್ದ ಚಿನ್ನ ಎಗರಸಿ ಪರಾರಿಯಾಗಿದ್ದ ಖದೀಮರು: ಕಳ್ಳರ ಬೆನ್ನತ್ತಿ ಬಂಧಿಸಿ ಚಿನ್ನದ ಸರ ವಶಕ್ಕೆ‌ ಪಡೆದ ಪೊಲೀಸರು: ವೃದ್ಧೆಗೆ ಚಿನ್ನದ ಮಾಂಗಲ್ಯ ಸರ ವಾಪಸ್ ನೀಡಿದ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ: ಪೊಲೀಸರ ಕಾರ್ಯಕ್ಕೆ ವೃದ್ಧೆ ಮೆಚ್ಚುಗೆ

ಸೆ‌.19ರಂದು ತಾಲೂಕಿನ ಗುಂಜೂರು ನಿವಾಸಿ ಶೈಲಜಾ ಅವರು ಒಂಟಿಯಾಗಿ ಹಿಂದೂಪುರ ಹಾಗೂ ಯಲಹಂಕ ಹೈವೆ ರಸ್ತೆಯಲ್ಲಿ ತನ್ನ ಪಾಡಿಗೆ ತಾನು ವಾಕಿಂಗ್ ಮಾಡುತ್ತಿದ್ದಾಗ ಅಪರಿಚಿತ ದುಷ್ಕರ್ಮಿಗಳು ವೃದ್ಧ ಮಹಿಳೆಯ ಕೊರಳಲ್ಲಿದ್ದ 80 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಸಿದು ಪರಾರಿಯಾಗಿದ್ದರು.

ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಶೈಲಜಾ ಅವರು ದೂರು ದಾಖಲಿಸಿದ್ದರು. ದೂರಿನ ಮೇರೆಗೆ ಕಳ್ಳರ ಬೆನ್ನತ್ತಿದ ಪೊಲೀಸರು, ಖತರ್ನಾಕ್  ಕಳ್ಳರನ್ನು ಬಂಧಿಸಿ, ಖದೀಮರಿಂದ ಚಿನ್ನದ ಮಾಂಗಲ್ಯ ಸರವನ್ನು ವಶಕ್ಕೆ ಪಡೆದು ವೃದ್ಧೆ ಶೈಲಜಾ ಅವರಿಗೆ ವಾಪಸ್ ನೀಡಿದ್ದಾರೆ.

ಮರಳಿ ಮಾಂಗಲ್ಯ ಸರ ಪಡೆದ ಶೈಲಜಾ ಅವರು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಕೃತಜ್ಞತೆ ಸಲ್ಲಿಸಿದ್ದಾರೆ.

ಘಟನೆ ವಿವರ 

2024 ಸೆಪ್ಟೆಂಬರ್ 19 ರಂದು ಗುಂಜೂರು ಬಳಿ ಶೈಲಜಾ ಅವರು ಎಂದಿನಂತೆ ಬೆಳಿಗ್ಗೆ ಹೈವೆ ರಸ್ತೆ ಪಕ್ಕದಲ್ಲಿ ವಾಕಿಂಗ್ ಮಾಡುವಾಗ ಕೆಂಪು ಬಣ್ಣದ ಶಿಫ್ಟ್ ಕಾರ್ ನಲ್ಲಿ ನಾಲ್ಕು ಜನ ಬಂದು ಅದರಲ್ಲಿ ಒಬ್ಬ ಕಾರಿನಿಂದ ಕೆಳಗೆ ಇಳಿದು ಶೈಲಜಾ ರವರ ಕೊರಳಿನಲ್ಲಿದ್ದ ಚಿನ್ನದ ಚೈನನ್ನು ಕಿತ್ತುಕೊಂಡು ಹೋಗಿರುತ್ತಾರೆ.

ವಿಷಯ ತಿಳಿದ ಡಿವೈಎಸ್ ಪಿ ರವಿ.ಪಿ, ಹಾಗೂ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ಅವರು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ಸೆಕ್ಟ‌ರ್ ಸಾಧಿಕ್ ಪಾಷಾ ನೇತೃತ್ವದಲ್ಲಿ ಕಾರ್ಯಾಚರಣೆ ಆರಂಭಿಸಿದ ಪೊಲೀಸರ ತಂಡ  ಒಟ್ಟು 34 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಐವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಈ ಪ್ರಕರಣದಲ್ಲಿ ಸಹ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.

ಬಂಧಿತರನ್ನು ಸಯ್ಯದ್ರಿಹ್ವಾನ್ (19), ಶಿವಕುಮಾರ್ (34), ಚಂದ್ರಶೇಖ‌ರ್ (44), ಅಪ್ಪು (23) ಹಾಗೂ 17 ವರ್ಷದ ಅಪ್ರಾಪ್ತ ಬಾಲಕ ಎನ್ನಲಾಗಿದೆ.

Ramesh Babu

Journalist

Recent Posts

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

4 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

4 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

9 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

20 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

21 hours ago

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಬಳಿ ಅಂಡರ್ ಪಾಸ್ ಅವೈಜ್ಞಾನಿಕ- ಮೇಲ್ಸೇತುವೆ ಅಗತ್ಯ- ಸಂಸದ ಡಾ. ಕೆ. ಸುಧಾಕರ್

ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…

21 hours ago