ಹೈವೆ ರಸ್ತೆಯಲ್ಲಿ ವಾಕಿಂಗ್ ಮಾಡುವ ವೇಳೆ ವೃದ್ಧ ಮಹಿಳೆ ಕೊರಳಲ್ಲಿದ್ದ ಚಿನ್ನ ಎಗರಸಿ ಪರಾರಿಯಾಗಿದ್ದ ಖದೀಮರು: ಕಳ್ಳರ ಬೆನ್ನತ್ತಿ ಬಂಧಿಸಿ ಚಿನ್ನದ ಸರ ವಶಕ್ಕೆ‌ ಪಡೆದ ಪೊಲೀಸರು: ವೃದ್ಧೆಗೆ ಚಿನ್ನದ ಮಾಂಗಲ್ಯ ಸರ ವಾಪಸ್ ನೀಡಿದ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ: ಪೊಲೀಸರ ಕಾರ್ಯಕ್ಕೆ ವೃದ್ಧೆ ಮೆಚ್ಚುಗೆ

ಸೆ‌.19ರಂದು ತಾಲೂಕಿನ ಗುಂಜೂರು ನಿವಾಸಿ ಶೈಲಜಾ ಅವರು ಒಂಟಿಯಾಗಿ ಹಿಂದೂಪುರ ಹಾಗೂ ಯಲಹಂಕ ಹೈವೆ ರಸ್ತೆಯಲ್ಲಿ ತನ್ನ ಪಾಡಿಗೆ ತಾನು ವಾಕಿಂಗ್ ಮಾಡುತ್ತಿದ್ದಾಗ ಅಪರಿಚಿತ ದುಷ್ಕರ್ಮಿಗಳು ವೃದ್ಧ ಮಹಿಳೆಯ ಕೊರಳಲ್ಲಿದ್ದ 80 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಸಿದು ಪರಾರಿಯಾಗಿದ್ದರು.

ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಶೈಲಜಾ ಅವರು ದೂರು ದಾಖಲಿಸಿದ್ದರು. ದೂರಿನ ಮೇರೆಗೆ ಕಳ್ಳರ ಬೆನ್ನತ್ತಿದ ಪೊಲೀಸರು, ಖತರ್ನಾಕ್  ಕಳ್ಳರನ್ನು ಬಂಧಿಸಿ, ಖದೀಮರಿಂದ ಚಿನ್ನದ ಮಾಂಗಲ್ಯ ಸರವನ್ನು ವಶಕ್ಕೆ ಪಡೆದು ವೃದ್ಧೆ ಶೈಲಜಾ ಅವರಿಗೆ ವಾಪಸ್ ನೀಡಿದ್ದಾರೆ.

ಮರಳಿ ಮಾಂಗಲ್ಯ ಸರ ಪಡೆದ ಶೈಲಜಾ ಅವರು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಕೃತಜ್ಞತೆ ಸಲ್ಲಿಸಿದ್ದಾರೆ.

ಘಟನೆ ವಿವರ 

2024 ಸೆಪ್ಟೆಂಬರ್ 19 ರಂದು ಗುಂಜೂರು ಬಳಿ ಶೈಲಜಾ ಅವರು ಎಂದಿನಂತೆ ಬೆಳಿಗ್ಗೆ ಹೈವೆ ರಸ್ತೆ ಪಕ್ಕದಲ್ಲಿ ವಾಕಿಂಗ್ ಮಾಡುವಾಗ ಕೆಂಪು ಬಣ್ಣದ ಶಿಫ್ಟ್ ಕಾರ್ ನಲ್ಲಿ ನಾಲ್ಕು ಜನ ಬಂದು ಅದರಲ್ಲಿ ಒಬ್ಬ ಕಾರಿನಿಂದ ಕೆಳಗೆ ಇಳಿದು ಶೈಲಜಾ ರವರ ಕೊರಳಿನಲ್ಲಿದ್ದ ಚಿನ್ನದ ಚೈನನ್ನು ಕಿತ್ತುಕೊಂಡು ಹೋಗಿರುತ್ತಾರೆ.

ವಿಷಯ ತಿಳಿದ ಡಿವೈಎಸ್ ಪಿ ರವಿ.ಪಿ, ಹಾಗೂ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ಅವರು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ಸೆಕ್ಟ‌ರ್ ಸಾಧಿಕ್ ಪಾಷಾ ನೇತೃತ್ವದಲ್ಲಿ ಕಾರ್ಯಾಚರಣೆ ಆರಂಭಿಸಿದ ಪೊಲೀಸರ ತಂಡ  ಒಟ್ಟು 34 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಐವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಈ ಪ್ರಕರಣದಲ್ಲಿ ಸಹ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.

ಬಂಧಿತರನ್ನು ಸಯ್ಯದ್ರಿಹ್ವಾನ್ (19), ಶಿವಕುಮಾರ್ (34), ಚಂದ್ರಶೇಖ‌ರ್ (44), ಅಪ್ಪು (23) ಹಾಗೂ 17 ವರ್ಷದ ಅಪ್ರಾಪ್ತ ಬಾಲಕ ಎನ್ನಲಾಗಿದೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

13 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

17 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

1 day ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

1 day ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

2 days ago