ಹೈವೆ ರಸ್ತೆಯಲ್ಲಿ ವಾಕಿಂಗ್ ಮಾಡುವ ವೇಳೆ ವೃದ್ಧ ಮಹಿಳೆ ಕೊರಳಲ್ಲಿದ್ದ ಚಿನ್ನ ಎಗರಸಿ ಪರಾರಿಯಾಗಿದ್ದ ಖದೀಮರು: ಕಳ್ಳರ ಬೆನ್ನತ್ತಿ ಬಂಧಿಸಿ ಚಿನ್ನದ ಸರ ವಶಕ್ಕೆ‌ ಪಡೆದ ಪೊಲೀಸರು: ವೃದ್ಧೆಗೆ ಚಿನ್ನದ ಮಾಂಗಲ್ಯ ಸರ ವಾಪಸ್ ನೀಡಿದ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ: ಪೊಲೀಸರ ಕಾರ್ಯಕ್ಕೆ ವೃದ್ಧೆ ಮೆಚ್ಚುಗೆ

ಸೆ‌.19ರಂದು ತಾಲೂಕಿನ ಗುಂಜೂರು ನಿವಾಸಿ ಶೈಲಜಾ ಅವರು ಒಂಟಿಯಾಗಿ ಹಿಂದೂಪುರ ಹಾಗೂ ಯಲಹಂಕ ಹೈವೆ ರಸ್ತೆಯಲ್ಲಿ ತನ್ನ ಪಾಡಿಗೆ ತಾನು ವಾಕಿಂಗ್ ಮಾಡುತ್ತಿದ್ದಾಗ ಅಪರಿಚಿತ ದುಷ್ಕರ್ಮಿಗಳು ವೃದ್ಧ ಮಹಿಳೆಯ ಕೊರಳಲ್ಲಿದ್ದ 80 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಸಿದು ಪರಾರಿಯಾಗಿದ್ದರು.

ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಶೈಲಜಾ ಅವರು ದೂರು ದಾಖಲಿಸಿದ್ದರು. ದೂರಿನ ಮೇರೆಗೆ ಕಳ್ಳರ ಬೆನ್ನತ್ತಿದ ಪೊಲೀಸರು, ಖತರ್ನಾಕ್  ಕಳ್ಳರನ್ನು ಬಂಧಿಸಿ, ಖದೀಮರಿಂದ ಚಿನ್ನದ ಮಾಂಗಲ್ಯ ಸರವನ್ನು ವಶಕ್ಕೆ ಪಡೆದು ವೃದ್ಧೆ ಶೈಲಜಾ ಅವರಿಗೆ ವಾಪಸ್ ನೀಡಿದ್ದಾರೆ.

ಮರಳಿ ಮಾಂಗಲ್ಯ ಸರ ಪಡೆದ ಶೈಲಜಾ ಅವರು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಕೃತಜ್ಞತೆ ಸಲ್ಲಿಸಿದ್ದಾರೆ.

ಘಟನೆ ವಿವರ 

2024 ಸೆಪ್ಟೆಂಬರ್ 19 ರಂದು ಗುಂಜೂರು ಬಳಿ ಶೈಲಜಾ ಅವರು ಎಂದಿನಂತೆ ಬೆಳಿಗ್ಗೆ ಹೈವೆ ರಸ್ತೆ ಪಕ್ಕದಲ್ಲಿ ವಾಕಿಂಗ್ ಮಾಡುವಾಗ ಕೆಂಪು ಬಣ್ಣದ ಶಿಫ್ಟ್ ಕಾರ್ ನಲ್ಲಿ ನಾಲ್ಕು ಜನ ಬಂದು ಅದರಲ್ಲಿ ಒಬ್ಬ ಕಾರಿನಿಂದ ಕೆಳಗೆ ಇಳಿದು ಶೈಲಜಾ ರವರ ಕೊರಳಿನಲ್ಲಿದ್ದ ಚಿನ್ನದ ಚೈನನ್ನು ಕಿತ್ತುಕೊಂಡು ಹೋಗಿರುತ್ತಾರೆ.

ವಿಷಯ ತಿಳಿದ ಡಿವೈಎಸ್ ಪಿ ರವಿ.ಪಿ, ಹಾಗೂ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ಅವರು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ಸೆಕ್ಟ‌ರ್ ಸಾಧಿಕ್ ಪಾಷಾ ನೇತೃತ್ವದಲ್ಲಿ ಕಾರ್ಯಾಚರಣೆ ಆರಂಭಿಸಿದ ಪೊಲೀಸರ ತಂಡ  ಒಟ್ಟು 34 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಐವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಈ ಪ್ರಕರಣದಲ್ಲಿ ಸಹ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.

ಬಂಧಿತರನ್ನು ಸಯ್ಯದ್ರಿಹ್ವಾನ್ (19), ಶಿವಕುಮಾರ್ (34), ಚಂದ್ರಶೇಖ‌ರ್ (44), ಅಪ್ಪು (23) ಹಾಗೂ 17 ವರ್ಷದ ಅಪ್ರಾಪ್ತ ಬಾಲಕ ಎನ್ನಲಾಗಿದೆ.

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

15 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 day ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

2 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

2 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

3 days ago