ಹೊಟ್ಟೆ ನೋವನ್ನೆಲ್ಲಾ ಗ್ಯಾಸ್ಟ್ರಿಕ್ ಎಂದೇ ಭಾವಿಸುವುದು ಅಪಾಯಕರ-ವೈದ್ಯರ ಎಚ್ಚರಿಕೆ

ಬೆಂಗಳೂರು, ವೈಟ್‌ಫೀಲ್ಡ್‌: ಸಾಧಾರಣ ಗ್ಯಾಸ್ಟ್ರಿಕ್ ಅಂದುಕೊಂಡು ಹೊಟ್ಟೆ ನೋವನ್ನು ನಿರ್ಲಕ್ಷ್ಯ ಮಾಡಿದರೆ, ಅದು ದೊಡ್ಡ ಗಂಭೀರ ಸಮಸ್ಯೆಗೆ ದಾರಿ ಮಾಡಿಕೊಡಬಹುದು,” ಎಂಬ ಎಚ್ಚರಿಕೆಯನ್ನು ಮೆಡಿಕವರ್‌ ಆಸ್ಪತ್ರೆಯ ರೋಬೋಟಿಕ್ ಶಸ್ತ್ರಚಿಕಿತ್ಸಕ ಡಾ. ಶೇಕ್‌ ಜಾವೀದ್ ಹುಸೇನ್ ನೀಡಿದ್ದಾರೆ.

34 ವರ್ಷದ ರೋಗಿ ರಮೇಶ್ ಬಾಬು, ಹಲವಾರು ದಿನಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಪ್ರಾರಂಭದಲ್ಲಿ ಅವರು ಇದನ್ನು ಗ್ಯಾಸ್ಟ್ರಿಕ್ ಸಮಸ್ಯೆ ಎಂದುಕೊಂಡು ಮನೆಮದ್ದು ಹಾಗೂ ಟ್ಯಾಬ್ಲೆಟ್‌ ಸೇವಿಸುತ್ತಿದ್ದರು. ಆದರೆ ನೋವು ನಿಲ್ಲದೇ ಮುಂದುವರಿದ ಹಿನ್ನಲೆಯಲ್ಲಿ ಅವರು ಮೆಡಿಕವರ್ ಆಸ್ಪತ್ರೆಯಲ್ಲಿ ಡಾ. ಶೇಕ್ ಜಾವೀದ್ ಅವರನ್ನು ಭೇಟಿ ಮಾಡಿ ಚಿಕಿತ್ಸೆ ಪಡೆದಿದ್ದಾರೆ.
ವೈದ್ಯಕೀಯ ಪರಿಶೀಲನೆ ನಂತರ, ಲೋಕೇಶ್ ಅವರ ಹೃದಯದ ಸಮೀಪ 12 x 10 ಸೆಂ.ಮೀ ಗಾತ್ರದ ಪ್ಯಾಂಕ್ರಿಯಾಟಿಕ್ ಟ್ಯೂಮರ್ ಇರುವುದು ಪತ್ತೆಯಾಯಿತು. ಸಾಮಾನ್ಯವಾಗಿ ಟ್ಯೂಮರ್‌ ಗಾತ್ರ 2 ಸೆಂ.ಮೀ ಇರುತ್ತದೆ. ಆದರೆ ಈ ಪ್ರಕರಣದಲ್ಲಿ ಅದು ತುಂಬಾ ದೊಡ್ಡದಾಗಿದ್ದು, ತೀವ್ರವಾದ ನೋವಿಗೆ ಕಾರಣವಾಗಿತ್ತು.

ಸಿಟಿ ಸ್ಕ್ಯಾನ್ ಹಾಗೂ ಎಂಆರ್‌ಐ ತಪಾಸಣೆಯ ನಂತರ, ತಕ್ಷಣವೇ ರೋಬೋಟಿಕ್ ಡಿಸ್ಟಲ್ ಪ್ಯಾಂಕ್ರಿಯಾಟೆಕ್ಟಮಿ ಶಸ್ತ್ರಚಿಕಿತ್ಸೆಗೆ ತೀರ್ಮಾನಿಸಲಾಯಿತು. ಸುಮಾರು 6 ಗಂಟೆಗಳ ಕಾಲ ನಡೆದ ಈ ಶಸ್ತ್ರಚಿಕಿತ್ಸೆಯಲ್ಲಿ ಟ್ಯೂಮರ್ ಅನ್ನು ಯಶಸ್ವಿಯಾಗಿ ತೆಗೆದುಹಾಕಲಾಯಿತು.
“ಹೊಟ್ಟೆನೋವನ್ನು ನಿರ್ಲಕ್ಷ್ಯ ಮಾಡಬಾರದು. ಇದು ಕೆಲವೊಮ್ಮೆ ಜೀವಕ್ಕೆ ಅಪಾಯವಾಗುವಂತಹ ಗಂಭೀರ ಶಾರೀರಿಕ ಸಮಸ್ಯೆಗಳ ಸಂಕೇತವಾಗಿರಬಹುದು,” ಎಂದು ಡಾ. ಶೇಕ್ ಜಾವೀದ್ ಹುಸೇನ್ ಎಚ್ಚರಿಸಿದ್ದಾರೆ.

Ramesh Babu

Journalist

Recent Posts

ಪ್ರಥಮ್ ಜೀವ ಬೆದರಿಕೆ ಪ್ರಕರಣ: ವಿಚಾರಣೆ ಬಳಿಕ ರಕ್ಷಕ್ ಬುಲೆಟ್ ಫಸ್ಟ್ ರಿಯಾಕ್ಟ್

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟಿಸ್ ನ್ನು ರಕ್ಷಕ್ ಬುಲೆಟ್ ಗೆ ನೀಡಲಾಗುತ್ತು.…

2 hours ago

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣ: ವಿಚಾರಣೆಗೆ ಹಾಜರಾದ ರಕ್ಷಕ್ ಬುಲೆಟ್: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿಚಾರಣೆ

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಕ್ಷಕ್ ಬುಲೆಟ್ ಇಂದು ವಿಚಾರಣೆಗೆ ಹಾಜರಾಗಿದ್ದರು. ಇನ್ಸ್ ಪೆಕ್ಟರ್ ಸಾಧಿಕ್…

3 hours ago

ಒಳಮೀಸಲಾತಿಗಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಅರೆಬೆತ್ತಲೆ ಧರಣಿ

ಜನಸಂಖ್ಯೆ ಆಧಾರದ ಮೇಲೆ ಒಳ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿ ಇಂದಿಗೆ ಒಂದು ವರ್ಷ ಕಳೆದಿದೆ ಆದರೆ…

5 hours ago

ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ ಇಲ್ಲ- 10,165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ- ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಜಿಲ್ಲೆಯಲ್ಲಿ 10.165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಇದ್ದು, ಬೇಡಿಕೆಗಿಂತ ಹೆಚ್ಚಿನ ರಸಗೊಬ್ಬರ ದಾಸ್ತಾನು ಇದೆ ಹಾಗಾಗಿ ರಸಗೊಬ್ಬರ ಕೊರತೆ…

6 hours ago

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಆರೋಪ ಕೇಸ್: ಅತ್ಯಾಚಾರ ಆರೋಪ ಸಾಬೀತು: ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ಕೋರ್ಟ್ ತೀರ್ಪು: ಶಿಕ್ಷೆಯ ಪ್ರಮಾಣ ನಾಳೆ ಪ್ರಕಟ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿದ್ದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಆರೋಪ ಸಾಬೀತಾಗಿದೆ. ಪ್ರಜ್ವಲ್ ರೇವಣ್ಣ ಅಪರಾಧಿ…

9 hours ago

ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬರುತ್ತಿದ್ದ ಸುಂದರ ಯುವತಿಯರು: ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಚಿನ್ನಾಭರಣಗಳ ಕಳವು

ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬರುತ್ತಿದ್ದ ಸುಂದರ ಯುವತಿಯರು, ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಬ್ಯಾಗ್ ನಲ್ಲಿದ್ದ ಚಿನ್ನಾಭರಣಗಳನ್ನ ಕ್ಷಣ…

13 hours ago