ಹೊಟ್ಟೆ ನೋವನ್ನೆಲ್ಲಾ ಗ್ಯಾಸ್ಟ್ರಿಕ್ ಎಂದೇ ಭಾವಿಸುವುದು ಅಪಾಯಕರ-ವೈದ್ಯರ ಎಚ್ಚರಿಕೆ

ಬೆಂಗಳೂರು, ವೈಟ್‌ಫೀಲ್ಡ್‌: ಸಾಧಾರಣ ಗ್ಯಾಸ್ಟ್ರಿಕ್ ಅಂದುಕೊಂಡು ಹೊಟ್ಟೆ ನೋವನ್ನು ನಿರ್ಲಕ್ಷ್ಯ ಮಾಡಿದರೆ, ಅದು ದೊಡ್ಡ ಗಂಭೀರ ಸಮಸ್ಯೆಗೆ ದಾರಿ ಮಾಡಿಕೊಡಬಹುದು,” ಎಂಬ ಎಚ್ಚರಿಕೆಯನ್ನು ಮೆಡಿಕವರ್‌ ಆಸ್ಪತ್ರೆಯ ರೋಬೋಟಿಕ್ ಶಸ್ತ್ರಚಿಕಿತ್ಸಕ ಡಾ. ಶೇಕ್‌ ಜಾವೀದ್ ಹುಸೇನ್ ನೀಡಿದ್ದಾರೆ.

34 ವರ್ಷದ ರೋಗಿ ರಮೇಶ್ ಬಾಬು, ಹಲವಾರು ದಿನಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಪ್ರಾರಂಭದಲ್ಲಿ ಅವರು ಇದನ್ನು ಗ್ಯಾಸ್ಟ್ರಿಕ್ ಸಮಸ್ಯೆ ಎಂದುಕೊಂಡು ಮನೆಮದ್ದು ಹಾಗೂ ಟ್ಯಾಬ್ಲೆಟ್‌ ಸೇವಿಸುತ್ತಿದ್ದರು. ಆದರೆ ನೋವು ನಿಲ್ಲದೇ ಮುಂದುವರಿದ ಹಿನ್ನಲೆಯಲ್ಲಿ ಅವರು ಮೆಡಿಕವರ್ ಆಸ್ಪತ್ರೆಯಲ್ಲಿ ಡಾ. ಶೇಕ್ ಜಾವೀದ್ ಅವರನ್ನು ಭೇಟಿ ಮಾಡಿ ಚಿಕಿತ್ಸೆ ಪಡೆದಿದ್ದಾರೆ.
ವೈದ್ಯಕೀಯ ಪರಿಶೀಲನೆ ನಂತರ, ಲೋಕೇಶ್ ಅವರ ಹೃದಯದ ಸಮೀಪ 12 x 10 ಸೆಂ.ಮೀ ಗಾತ್ರದ ಪ್ಯಾಂಕ್ರಿಯಾಟಿಕ್ ಟ್ಯೂಮರ್ ಇರುವುದು ಪತ್ತೆಯಾಯಿತು. ಸಾಮಾನ್ಯವಾಗಿ ಟ್ಯೂಮರ್‌ ಗಾತ್ರ 2 ಸೆಂ.ಮೀ ಇರುತ್ತದೆ. ಆದರೆ ಈ ಪ್ರಕರಣದಲ್ಲಿ ಅದು ತುಂಬಾ ದೊಡ್ಡದಾಗಿದ್ದು, ತೀವ್ರವಾದ ನೋವಿಗೆ ಕಾರಣವಾಗಿತ್ತು.

ಸಿಟಿ ಸ್ಕ್ಯಾನ್ ಹಾಗೂ ಎಂಆರ್‌ಐ ತಪಾಸಣೆಯ ನಂತರ, ತಕ್ಷಣವೇ ರೋಬೋಟಿಕ್ ಡಿಸ್ಟಲ್ ಪ್ಯಾಂಕ್ರಿಯಾಟೆಕ್ಟಮಿ ಶಸ್ತ್ರಚಿಕಿತ್ಸೆಗೆ ತೀರ್ಮಾನಿಸಲಾಯಿತು. ಸುಮಾರು 6 ಗಂಟೆಗಳ ಕಾಲ ನಡೆದ ಈ ಶಸ್ತ್ರಚಿಕಿತ್ಸೆಯಲ್ಲಿ ಟ್ಯೂಮರ್ ಅನ್ನು ಯಶಸ್ವಿಯಾಗಿ ತೆಗೆದುಹಾಕಲಾಯಿತು.
“ಹೊಟ್ಟೆನೋವನ್ನು ನಿರ್ಲಕ್ಷ್ಯ ಮಾಡಬಾರದು. ಇದು ಕೆಲವೊಮ್ಮೆ ಜೀವಕ್ಕೆ ಅಪಾಯವಾಗುವಂತಹ ಗಂಭೀರ ಶಾರೀರಿಕ ಸಮಸ್ಯೆಗಳ ಸಂಕೇತವಾಗಿರಬಹುದು,” ಎಂದು ಡಾ. ಶೇಕ್ ಜಾವೀದ್ ಹುಸೇನ್ ಎಚ್ಚರಿಸಿದ್ದಾರೆ.

Ramesh Babu

Journalist

Recent Posts

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

33 minutes ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

39 minutes ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

6 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

17 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

18 hours ago

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಬಳಿ ಅಂಡರ್ ಪಾಸ್ ಅವೈಜ್ಞಾನಿಕ- ಮೇಲ್ಸೇತುವೆ ಅಗತ್ಯ- ಸಂಸದ ಡಾ. ಕೆ. ಸುಧಾಕರ್

ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…

18 hours ago