ಬೆಂಗಳೂರು, ವೈಟ್ಫೀಲ್ಡ್: ಸಾಧಾರಣ ಗ್ಯಾಸ್ಟ್ರಿಕ್ ಅಂದುಕೊಂಡು ಹೊಟ್ಟೆ ನೋವನ್ನು ನಿರ್ಲಕ್ಷ್ಯ ಮಾಡಿದರೆ, ಅದು ದೊಡ್ಡ ಗಂಭೀರ ಸಮಸ್ಯೆಗೆ ದಾರಿ ಮಾಡಿಕೊಡಬಹುದು,” ಎಂಬ ಎಚ್ಚರಿಕೆಯನ್ನು ಮೆಡಿಕವರ್ ಆಸ್ಪತ್ರೆಯ ರೋಬೋಟಿಕ್ ಶಸ್ತ್ರಚಿಕಿತ್ಸಕ ಡಾ. ಶೇಕ್ ಜಾವೀದ್ ಹುಸೇನ್ ನೀಡಿದ್ದಾರೆ.
34 ವರ್ಷದ ರೋಗಿ ರಮೇಶ್ ಬಾಬು, ಹಲವಾರು ದಿನಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಪ್ರಾರಂಭದಲ್ಲಿ ಅವರು ಇದನ್ನು ಗ್ಯಾಸ್ಟ್ರಿಕ್ ಸಮಸ್ಯೆ ಎಂದುಕೊಂಡು ಮನೆಮದ್ದು ಹಾಗೂ ಟ್ಯಾಬ್ಲೆಟ್ ಸೇವಿಸುತ್ತಿದ್ದರು. ಆದರೆ ನೋವು ನಿಲ್ಲದೇ ಮುಂದುವರಿದ ಹಿನ್ನಲೆಯಲ್ಲಿ ಅವರು ಮೆಡಿಕವರ್ ಆಸ್ಪತ್ರೆಯಲ್ಲಿ ಡಾ. ಶೇಕ್ ಜಾವೀದ್ ಅವರನ್ನು ಭೇಟಿ ಮಾಡಿ ಚಿಕಿತ್ಸೆ ಪಡೆದಿದ್ದಾರೆ.
ವೈದ್ಯಕೀಯ ಪರಿಶೀಲನೆ ನಂತರ, ಲೋಕೇಶ್ ಅವರ ಹೃದಯದ ಸಮೀಪ 12 x 10 ಸೆಂ.ಮೀ ಗಾತ್ರದ ಪ್ಯಾಂಕ್ರಿಯಾಟಿಕ್ ಟ್ಯೂಮರ್ ಇರುವುದು ಪತ್ತೆಯಾಯಿತು. ಸಾಮಾನ್ಯವಾಗಿ ಟ್ಯೂಮರ್ ಗಾತ್ರ 2 ಸೆಂ.ಮೀ ಇರುತ್ತದೆ. ಆದರೆ ಈ ಪ್ರಕರಣದಲ್ಲಿ ಅದು ತುಂಬಾ ದೊಡ್ಡದಾಗಿದ್ದು, ತೀವ್ರವಾದ ನೋವಿಗೆ ಕಾರಣವಾಗಿತ್ತು.
ಸಿಟಿ ಸ್ಕ್ಯಾನ್ ಹಾಗೂ ಎಂಆರ್ಐ ತಪಾಸಣೆಯ ನಂತರ, ತಕ್ಷಣವೇ ರೋಬೋಟಿಕ್ ಡಿಸ್ಟಲ್ ಪ್ಯಾಂಕ್ರಿಯಾಟೆಕ್ಟಮಿ ಶಸ್ತ್ರಚಿಕಿತ್ಸೆಗೆ ತೀರ್ಮಾನಿಸಲಾಯಿತು. ಸುಮಾರು 6 ಗಂಟೆಗಳ ಕಾಲ ನಡೆದ ಈ ಶಸ್ತ್ರಚಿಕಿತ್ಸೆಯಲ್ಲಿ ಟ್ಯೂಮರ್ ಅನ್ನು ಯಶಸ್ವಿಯಾಗಿ ತೆಗೆದುಹಾಕಲಾಯಿತು.
“ಹೊಟ್ಟೆನೋವನ್ನು ನಿರ್ಲಕ್ಷ್ಯ ಮಾಡಬಾರದು. ಇದು ಕೆಲವೊಮ್ಮೆ ಜೀವಕ್ಕೆ ಅಪಾಯವಾಗುವಂತಹ ಗಂಭೀರ ಶಾರೀರಿಕ ಸಮಸ್ಯೆಗಳ ಸಂಕೇತವಾಗಿರಬಹುದು,” ಎಂದು ಡಾ. ಶೇಕ್ ಜಾವೀದ್ ಹುಸೇನ್ ಎಚ್ಚರಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…