ಬೆಂಗಳೂರು, ವೈಟ್ಫೀಲ್ಡ್: ಸಾಧಾರಣ ಗ್ಯಾಸ್ಟ್ರಿಕ್ ಅಂದುಕೊಂಡು ಹೊಟ್ಟೆ ನೋವನ್ನು ನಿರ್ಲಕ್ಷ್ಯ ಮಾಡಿದರೆ, ಅದು ದೊಡ್ಡ ಗಂಭೀರ ಸಮಸ್ಯೆಗೆ ದಾರಿ ಮಾಡಿಕೊಡಬಹುದು,” ಎಂಬ ಎಚ್ಚರಿಕೆಯನ್ನು ಮೆಡಿಕವರ್ ಆಸ್ಪತ್ರೆಯ ರೋಬೋಟಿಕ್ ಶಸ್ತ್ರಚಿಕಿತ್ಸಕ ಡಾ. ಶೇಕ್ ಜಾವೀದ್ ಹುಸೇನ್ ನೀಡಿದ್ದಾರೆ.
34 ವರ್ಷದ ರೋಗಿ ರಮೇಶ್ ಬಾಬು, ಹಲವಾರು ದಿನಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಪ್ರಾರಂಭದಲ್ಲಿ ಅವರು ಇದನ್ನು ಗ್ಯಾಸ್ಟ್ರಿಕ್ ಸಮಸ್ಯೆ ಎಂದುಕೊಂಡು ಮನೆಮದ್ದು ಹಾಗೂ ಟ್ಯಾಬ್ಲೆಟ್ ಸೇವಿಸುತ್ತಿದ್ದರು. ಆದರೆ ನೋವು ನಿಲ್ಲದೇ ಮುಂದುವರಿದ ಹಿನ್ನಲೆಯಲ್ಲಿ ಅವರು ಮೆಡಿಕವರ್ ಆಸ್ಪತ್ರೆಯಲ್ಲಿ ಡಾ. ಶೇಕ್ ಜಾವೀದ್ ಅವರನ್ನು ಭೇಟಿ ಮಾಡಿ ಚಿಕಿತ್ಸೆ ಪಡೆದಿದ್ದಾರೆ.
ವೈದ್ಯಕೀಯ ಪರಿಶೀಲನೆ ನಂತರ, ಲೋಕೇಶ್ ಅವರ ಹೃದಯದ ಸಮೀಪ 12 x 10 ಸೆಂ.ಮೀ ಗಾತ್ರದ ಪ್ಯಾಂಕ್ರಿಯಾಟಿಕ್ ಟ್ಯೂಮರ್ ಇರುವುದು ಪತ್ತೆಯಾಯಿತು. ಸಾಮಾನ್ಯವಾಗಿ ಟ್ಯೂಮರ್ ಗಾತ್ರ 2 ಸೆಂ.ಮೀ ಇರುತ್ತದೆ. ಆದರೆ ಈ ಪ್ರಕರಣದಲ್ಲಿ ಅದು ತುಂಬಾ ದೊಡ್ಡದಾಗಿದ್ದು, ತೀವ್ರವಾದ ನೋವಿಗೆ ಕಾರಣವಾಗಿತ್ತು.
ಸಿಟಿ ಸ್ಕ್ಯಾನ್ ಹಾಗೂ ಎಂಆರ್ಐ ತಪಾಸಣೆಯ ನಂತರ, ತಕ್ಷಣವೇ ರೋಬೋಟಿಕ್ ಡಿಸ್ಟಲ್ ಪ್ಯಾಂಕ್ರಿಯಾಟೆಕ್ಟಮಿ ಶಸ್ತ್ರಚಿಕಿತ್ಸೆಗೆ ತೀರ್ಮಾನಿಸಲಾಯಿತು. ಸುಮಾರು 6 ಗಂಟೆಗಳ ಕಾಲ ನಡೆದ ಈ ಶಸ್ತ್ರಚಿಕಿತ್ಸೆಯಲ್ಲಿ ಟ್ಯೂಮರ್ ಅನ್ನು ಯಶಸ್ವಿಯಾಗಿ ತೆಗೆದುಹಾಕಲಾಯಿತು.
“ಹೊಟ್ಟೆನೋವನ್ನು ನಿರ್ಲಕ್ಷ್ಯ ಮಾಡಬಾರದು. ಇದು ಕೆಲವೊಮ್ಮೆ ಜೀವಕ್ಕೆ ಅಪಾಯವಾಗುವಂತಹ ಗಂಭೀರ ಶಾರೀರಿಕ ಸಮಸ್ಯೆಗಳ ಸಂಕೇತವಾಗಿರಬಹುದು,” ಎಂದು ಡಾ. ಶೇಕ್ ಜಾವೀದ್ ಹುಸೇನ್ ಎಚ್ಚರಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…
ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…