ಬೆಂಗಳೂರು, ವೈಟ್ಫೀಲ್ಡ್: ಸಾಧಾರಣ ಗ್ಯಾಸ್ಟ್ರಿಕ್ ಅಂದುಕೊಂಡು ಹೊಟ್ಟೆ ನೋವನ್ನು ನಿರ್ಲಕ್ಷ್ಯ ಮಾಡಿದರೆ, ಅದು ದೊಡ್ಡ ಗಂಭೀರ ಸಮಸ್ಯೆಗೆ ದಾರಿ ಮಾಡಿಕೊಡಬಹುದು,” ಎಂಬ ಎಚ್ಚರಿಕೆಯನ್ನು ಮೆಡಿಕವರ್ ಆಸ್ಪತ್ರೆಯ ರೋಬೋಟಿಕ್ ಶಸ್ತ್ರಚಿಕಿತ್ಸಕ ಡಾ. ಶೇಕ್ ಜಾವೀದ್ ಹುಸೇನ್ ನೀಡಿದ್ದಾರೆ.
34 ವರ್ಷದ ರೋಗಿ ರಮೇಶ್ ಬಾಬು, ಹಲವಾರು ದಿನಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಪ್ರಾರಂಭದಲ್ಲಿ ಅವರು ಇದನ್ನು ಗ್ಯಾಸ್ಟ್ರಿಕ್ ಸಮಸ್ಯೆ ಎಂದುಕೊಂಡು ಮನೆಮದ್ದು ಹಾಗೂ ಟ್ಯಾಬ್ಲೆಟ್ ಸೇವಿಸುತ್ತಿದ್ದರು. ಆದರೆ ನೋವು ನಿಲ್ಲದೇ ಮುಂದುವರಿದ ಹಿನ್ನಲೆಯಲ್ಲಿ ಅವರು ಮೆಡಿಕವರ್ ಆಸ್ಪತ್ರೆಯಲ್ಲಿ ಡಾ. ಶೇಕ್ ಜಾವೀದ್ ಅವರನ್ನು ಭೇಟಿ ಮಾಡಿ ಚಿಕಿತ್ಸೆ ಪಡೆದಿದ್ದಾರೆ.
ವೈದ್ಯಕೀಯ ಪರಿಶೀಲನೆ ನಂತರ, ಲೋಕೇಶ್ ಅವರ ಹೃದಯದ ಸಮೀಪ 12 x 10 ಸೆಂ.ಮೀ ಗಾತ್ರದ ಪ್ಯಾಂಕ್ರಿಯಾಟಿಕ್ ಟ್ಯೂಮರ್ ಇರುವುದು ಪತ್ತೆಯಾಯಿತು. ಸಾಮಾನ್ಯವಾಗಿ ಟ್ಯೂಮರ್ ಗಾತ್ರ 2 ಸೆಂ.ಮೀ ಇರುತ್ತದೆ. ಆದರೆ ಈ ಪ್ರಕರಣದಲ್ಲಿ ಅದು ತುಂಬಾ ದೊಡ್ಡದಾಗಿದ್ದು, ತೀವ್ರವಾದ ನೋವಿಗೆ ಕಾರಣವಾಗಿತ್ತು.
ಸಿಟಿ ಸ್ಕ್ಯಾನ್ ಹಾಗೂ ಎಂಆರ್ಐ ತಪಾಸಣೆಯ ನಂತರ, ತಕ್ಷಣವೇ ರೋಬೋಟಿಕ್ ಡಿಸ್ಟಲ್ ಪ್ಯಾಂಕ್ರಿಯಾಟೆಕ್ಟಮಿ ಶಸ್ತ್ರಚಿಕಿತ್ಸೆಗೆ ತೀರ್ಮಾನಿಸಲಾಯಿತು. ಸುಮಾರು 6 ಗಂಟೆಗಳ ಕಾಲ ನಡೆದ ಈ ಶಸ್ತ್ರಚಿಕಿತ್ಸೆಯಲ್ಲಿ ಟ್ಯೂಮರ್ ಅನ್ನು ಯಶಸ್ವಿಯಾಗಿ ತೆಗೆದುಹಾಕಲಾಯಿತು.
“ಹೊಟ್ಟೆನೋವನ್ನು ನಿರ್ಲಕ್ಷ್ಯ ಮಾಡಬಾರದು. ಇದು ಕೆಲವೊಮ್ಮೆ ಜೀವಕ್ಕೆ ಅಪಾಯವಾಗುವಂತಹ ಗಂಭೀರ ಶಾರೀರಿಕ ಸಮಸ್ಯೆಗಳ ಸಂಕೇತವಾಗಿರಬಹುದು,” ಎಂದು ಡಾ. ಶೇಕ್ ಜಾವೀದ್ ಹುಸೇನ್ ಎಚ್ಚರಿಸಿದ್ದಾರೆ.
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…