ಹೊನ್ನಾದೇವಿಪುರ-ಗೂಳ್ಯ ರಸ್ತೆ ಡಾಂಬರೀಕರಣ ಕಾಮಗಾರಿ ಕಳಪೆ ಆರೋಪ: ಬಿಜೆಪಿ ಮುಖಂಡರ ಆರೋಪ ತಳ್ಳಿ ಹಾಕಿದ ಕಾಂಗ್ರೆಸ್ ಮುಖಂಡರು

ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ವತಿಯಿಂದ 1.5 ಕೋಟಿ ಅನುದಾನದಲ್ಲಿ ತಾಲೂಕಿನ ಹೊನ್ನಾದೇವಿಪುರ-ಗೂಳ್ಯ ರಸ್ತೆಗೆ 1.5 ಕಿ.ಮೀ ಡಾಂಬರ್ ಹಾಕಲಾಗಿದೆ. ಬೇಕಂತಲೇ ಬಿಜೆಪಿ ಕೆಲ ಮುಖಂಡರು ಹಾರೇಕೋಲಿನಿಂದ ಡಾಂಬರ್ ನ್ನು ಅಗೆದು ಈ ಕಾಮಗಾರಿ ಕಳಪೆ ಎಂದು ಹೇಳಲಾಗಿದೆ, ಇನ್ನೂ ಒಂದು ಪದರ ಡಾಂಬರ್ ಹಾಕುವುದು ಬಾಕಿ ಇದೆ, ಅಷ್ಟರಲ್ಲಿ ಈ ಆರೋಪವನ್ನು ಮಾಡಲಾಗಿದೆ. ಈ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಬಿಜೆಪಿ ಮುಖಂಡರ ಆರೋಪವನ್ನ ಜಿ.ಪಂ ಮಾಜಿ ಸದಸ್ಯ ಚುಂಚೇಗೌಡ ತಳ್ಳಿಹಾಕಿದರು.

ತಾಲೂಕಿನ ಹೊನ್ನಾದೇವಿಪುರ-ಗೂಳ್ಯ ರಸ್ತೆಗೆ ಡಾಂಬರು ಹಾಕಿದ 15 ದಿನಗಳಲ್ಲೇ ಗುಂಡಿಗಳು ಬಿದ್ದಿವೆ. ಈ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ ಎಂದು ಬಿಜೆಪಿ ಮುಖಂಡರು ಆರೋಪ ಮಾಡಿ ರಸ್ತೆಯಲ್ಲಿ ಕುಳಿತು ಧರಣಿ ನಡೆಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಗುರುವಾರ ಸ್ಥಳಕ್ಕೆ ಆಗಮಿಸಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, 20 ವರ್ಷಗಳಿಂದ ಈ ಗ್ರಾಮಕ್ಕೆ ರಸ್ತೆ ಇರಲಿಲ್ಲ. ರಾತ್ರಿ ಹೊತ್ತು ಓಡಾಡಲೂ ಗ್ರಾಮಸ್ಥರು ಪರದಾಡಬೇಕಾಗಿತ್ತು. ಕೊನೆಗೂ ಹೊನ್ನಾದೇವಿಪುರ ರಸ್ತೆಗೆ ಡಾಂಬರು ಭಾಗ್ಯ ಸಿಕ್ಕಿದೆ, ಇದರಲ್ಲಿ ರಾಜಕೀಯ ಮಾಡಬಾರದು, ಗ್ರಾಮದ ಅಭಿವೃದ್ಧಿಗೆ ಪಕ್ಷ ಬೇಧ ಮರೆತು ಎಲ್ಲರೂ ಸಹಕರಿಸಬೇಕು ಎಂದು ಹೇಳಿದರು.

ಡಾಂಬರೀಕರಣ ಕಾಮಗಾರಿ ಕಳಪೆಯೋ ಅಥವಾ ಗುಣಮಟ್ಟದಿಂದ ಕೂಡಿದಿಯೋ ಎಂಬುದು ಸಂಬಂಧಿಸಿದ ಇಲಾಖೆಯ ಇಂಜಿನಿಯರ್ ಗಳು ಕಾಮಗಾರಿಯನ್ನ ಪರಿಶೀಲನೆ ಮಾಡಿ ವರದಿ ಬಿಡುಗಡೆ ಮಾಡುತ್ತಾರೆ‌. ಆಗ ಈ ಕುರಿತು ಸತ್ಯ ಗೊತ್ತಾಗುತ್ತದೆ. ಈ ಕುರಿತು ಇಂಜಿನಿಯರ್ ವರದಿ ಬಂದೇ ಇಲ್ಲ, ಇನ್ನೂ ಕಾಮಗಾರಿ ಬಾಕಿ ಇದೆ. ಅಷ್ಟರಲ್ಲಿ ಈ ಆರೋಪ ಮಾಡಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನೆ ಮಾಡಿದರು.

ವಿಧಾನಸಭೆ ಚುನಾವಣೆ ಮುನ್ನವೇ ತಾಲೂಕಿನಲ್ಲಿ 40 ಕೋಟಿ ಅನುದಾನದಲ್ಲಿ 40 ಕಿ.ಮೀ ಡಾಂಬರೀಕರಣ ಕಾಮಗಾರಿ ಆರಂಭವಾಗಿತ್ತು, ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದರಿಂದ ಕಾಮಗಾರಿ ನಿಲ್ಲಿಸಲಾಗಿತ್ತು. ಈಗ ಮತ್ತೆ ಪ್ರಾರಂಭ ಮಾಡಲಾಗಿದೆ. ಎಲ್ಲಾ ಕಾಮಗಾರಿ ಅಂತಿಮ ಹಂತದಲ್ಲಿ ಇವೆ. ಕೆಲವೊಂದು ಕಡೆ ಬಿಜೆಪಿ ಮುಖಂಡರು ಡಾಂಬರೀಕರಣ‌ ಕಾಮಗಾರಿ ಬಗ್ಗೆ‌ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಈ ರೀತಿಯ ಸುಳ್ಳು ಆರೋಪಗಳನ್ನು ಮಾಡುತ್ತಿರುವ ಪುಡಾರಿಗಳನ್ನ ಹಾಲಿ ಶಾಸಕರು ದೂರವಿಡಬೇಕು. ಇಲ್ಲದಿದ್ದರೆ ಶಾಸಕರಿಗೂ ಕೆಟ್ಟ ಹೆಸರು ಬರುತ್ತದೆ ಎಂದು ಸಲಹೆ ನೀಡಿದರು.

ಈ ವೇಳೆ ಚಂದ್ರಶೇಖರ್, ಶಶಿಕುಮಾರ್, ಅಶ್ವತ್ ನಾರಾಯಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

8 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

9 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

14 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

16 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

19 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

20 hours ago