ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ವತಿಯಿಂದ 1.5 ಕೋಟಿ ಅನುದಾನದಲ್ಲಿ ತಾಲೂಕಿನ ಹೊನ್ನಾದೇವಿಪುರ-ಗೂಳ್ಯ ರಸ್ತೆಗೆ 1.5 ಕಿ.ಮೀ ಡಾಂಬರ್ ಹಾಕಲಾಗಿದೆ. ಬೇಕಂತಲೇ ಬಿಜೆಪಿ ಕೆಲ ಮುಖಂಡರು ಹಾರೇಕೋಲಿನಿಂದ ಡಾಂಬರ್ ನ್ನು ಅಗೆದು ಈ ಕಾಮಗಾರಿ ಕಳಪೆ ಎಂದು ಹೇಳಲಾಗಿದೆ, ಇನ್ನೂ ಒಂದು ಪದರ ಡಾಂಬರ್ ಹಾಕುವುದು ಬಾಕಿ ಇದೆ, ಅಷ್ಟರಲ್ಲಿ ಈ ಆರೋಪವನ್ನು ಮಾಡಲಾಗಿದೆ. ಈ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಬಿಜೆಪಿ ಮುಖಂಡರ ಆರೋಪವನ್ನ ಜಿ.ಪಂ ಮಾಜಿ ಸದಸ್ಯ ಚುಂಚೇಗೌಡ ತಳ್ಳಿಹಾಕಿದರು.
ತಾಲೂಕಿನ ಹೊನ್ನಾದೇವಿಪುರ-ಗೂಳ್ಯ ರಸ್ತೆಗೆ ಡಾಂಬರು ಹಾಕಿದ 15 ದಿನಗಳಲ್ಲೇ ಗುಂಡಿಗಳು ಬಿದ್ದಿವೆ. ಈ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ ಎಂದು ಬಿಜೆಪಿ ಮುಖಂಡರು ಆರೋಪ ಮಾಡಿ ರಸ್ತೆಯಲ್ಲಿ ಕುಳಿತು ಧರಣಿ ನಡೆಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಗುರುವಾರ ಸ್ಥಳಕ್ಕೆ ಆಗಮಿಸಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, 20 ವರ್ಷಗಳಿಂದ ಈ ಗ್ರಾಮಕ್ಕೆ ರಸ್ತೆ ಇರಲಿಲ್ಲ. ರಾತ್ರಿ ಹೊತ್ತು ಓಡಾಡಲೂ ಗ್ರಾಮಸ್ಥರು ಪರದಾಡಬೇಕಾಗಿತ್ತು. ಕೊನೆಗೂ ಹೊನ್ನಾದೇವಿಪುರ ರಸ್ತೆಗೆ ಡಾಂಬರು ಭಾಗ್ಯ ಸಿಕ್ಕಿದೆ, ಇದರಲ್ಲಿ ರಾಜಕೀಯ ಮಾಡಬಾರದು, ಗ್ರಾಮದ ಅಭಿವೃದ್ಧಿಗೆ ಪಕ್ಷ ಬೇಧ ಮರೆತು ಎಲ್ಲರೂ ಸಹಕರಿಸಬೇಕು ಎಂದು ಹೇಳಿದರು.
ವಿಧಾನಸಭೆ ಚುನಾವಣೆ ಮುನ್ನವೇ ತಾಲೂಕಿನಲ್ಲಿ 40 ಕೋಟಿ ಅನುದಾನದಲ್ಲಿ 40 ಕಿ.ಮೀ ಡಾಂಬರೀಕರಣ ಕಾಮಗಾರಿ ಆರಂಭವಾಗಿತ್ತು, ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದರಿಂದ ಕಾಮಗಾರಿ ನಿಲ್ಲಿಸಲಾಗಿತ್ತು. ಈಗ ಮತ್ತೆ ಪ್ರಾರಂಭ ಮಾಡಲಾಗಿದೆ. ಎಲ್ಲಾ ಕಾಮಗಾರಿ ಅಂತಿಮ ಹಂತದಲ್ಲಿ ಇವೆ. ಕೆಲವೊಂದು ಕಡೆ ಬಿಜೆಪಿ ಮುಖಂಡರು ಡಾಂಬರೀಕರಣ ಕಾಮಗಾರಿ ಬಗ್ಗೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಈ ವೇಳೆ ಚಂದ್ರಶೇಖರ್, ಶಶಿಕುಮಾರ್, ಅಶ್ವತ್ ನಾರಾಯಣ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…