ಹೊನ್ನಾದೇವಿಪುರ-ಗೂಳ್ಯ ರಸ್ತೆ ಡಾಂಬರೀಕರಣ ಕಾಮಗಾರಿ ಕಳಪೆ ಆರೋಪ: ಬಿಜೆಪಿ ಮುಖಂಡರ ಆರೋಪ ತಳ್ಳಿ ಹಾಕಿದ ಕಾಂಗ್ರೆಸ್ ಮುಖಂಡರು

ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ವತಿಯಿಂದ 1.5 ಕೋಟಿ ಅನುದಾನದಲ್ಲಿ ತಾಲೂಕಿನ ಹೊನ್ನಾದೇವಿಪುರ-ಗೂಳ್ಯ ರಸ್ತೆಗೆ 1.5 ಕಿ.ಮೀ ಡಾಂಬರ್ ಹಾಕಲಾಗಿದೆ. ಬೇಕಂತಲೇ ಬಿಜೆಪಿ ಕೆಲ ಮುಖಂಡರು ಹಾರೇಕೋಲಿನಿಂದ ಡಾಂಬರ್ ನ್ನು ಅಗೆದು ಈ ಕಾಮಗಾರಿ ಕಳಪೆ ಎಂದು ಹೇಳಲಾಗಿದೆ, ಇನ್ನೂ ಒಂದು ಪದರ ಡಾಂಬರ್ ಹಾಕುವುದು ಬಾಕಿ ಇದೆ, ಅಷ್ಟರಲ್ಲಿ ಈ ಆರೋಪವನ್ನು ಮಾಡಲಾಗಿದೆ. ಈ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಬಿಜೆಪಿ ಮುಖಂಡರ ಆರೋಪವನ್ನ ಜಿ.ಪಂ ಮಾಜಿ ಸದಸ್ಯ ಚುಂಚೇಗೌಡ ತಳ್ಳಿಹಾಕಿದರು.

ತಾಲೂಕಿನ ಹೊನ್ನಾದೇವಿಪುರ-ಗೂಳ್ಯ ರಸ್ತೆಗೆ ಡಾಂಬರು ಹಾಕಿದ 15 ದಿನಗಳಲ್ಲೇ ಗುಂಡಿಗಳು ಬಿದ್ದಿವೆ. ಈ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ ಎಂದು ಬಿಜೆಪಿ ಮುಖಂಡರು ಆರೋಪ ಮಾಡಿ ರಸ್ತೆಯಲ್ಲಿ ಕುಳಿತು ಧರಣಿ ನಡೆಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಗುರುವಾರ ಸ್ಥಳಕ್ಕೆ ಆಗಮಿಸಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, 20 ವರ್ಷಗಳಿಂದ ಈ ಗ್ರಾಮಕ್ಕೆ ರಸ್ತೆ ಇರಲಿಲ್ಲ. ರಾತ್ರಿ ಹೊತ್ತು ಓಡಾಡಲೂ ಗ್ರಾಮಸ್ಥರು ಪರದಾಡಬೇಕಾಗಿತ್ತು. ಕೊನೆಗೂ ಹೊನ್ನಾದೇವಿಪುರ ರಸ್ತೆಗೆ ಡಾಂಬರು ಭಾಗ್ಯ ಸಿಕ್ಕಿದೆ, ಇದರಲ್ಲಿ ರಾಜಕೀಯ ಮಾಡಬಾರದು, ಗ್ರಾಮದ ಅಭಿವೃದ್ಧಿಗೆ ಪಕ್ಷ ಬೇಧ ಮರೆತು ಎಲ್ಲರೂ ಸಹಕರಿಸಬೇಕು ಎಂದು ಹೇಳಿದರು.

ಡಾಂಬರೀಕರಣ ಕಾಮಗಾರಿ ಕಳಪೆಯೋ ಅಥವಾ ಗುಣಮಟ್ಟದಿಂದ ಕೂಡಿದಿಯೋ ಎಂಬುದು ಸಂಬಂಧಿಸಿದ ಇಲಾಖೆಯ ಇಂಜಿನಿಯರ್ ಗಳು ಕಾಮಗಾರಿಯನ್ನ ಪರಿಶೀಲನೆ ಮಾಡಿ ವರದಿ ಬಿಡುಗಡೆ ಮಾಡುತ್ತಾರೆ‌. ಆಗ ಈ ಕುರಿತು ಸತ್ಯ ಗೊತ್ತಾಗುತ್ತದೆ. ಈ ಕುರಿತು ಇಂಜಿನಿಯರ್ ವರದಿ ಬಂದೇ ಇಲ್ಲ, ಇನ್ನೂ ಕಾಮಗಾರಿ ಬಾಕಿ ಇದೆ. ಅಷ್ಟರಲ್ಲಿ ಈ ಆರೋಪ ಮಾಡಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನೆ ಮಾಡಿದರು.

ವಿಧಾನಸಭೆ ಚುನಾವಣೆ ಮುನ್ನವೇ ತಾಲೂಕಿನಲ್ಲಿ 40 ಕೋಟಿ ಅನುದಾನದಲ್ಲಿ 40 ಕಿ.ಮೀ ಡಾಂಬರೀಕರಣ ಕಾಮಗಾರಿ ಆರಂಭವಾಗಿತ್ತು, ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದರಿಂದ ಕಾಮಗಾರಿ ನಿಲ್ಲಿಸಲಾಗಿತ್ತು. ಈಗ ಮತ್ತೆ ಪ್ರಾರಂಭ ಮಾಡಲಾಗಿದೆ. ಎಲ್ಲಾ ಕಾಮಗಾರಿ ಅಂತಿಮ ಹಂತದಲ್ಲಿ ಇವೆ. ಕೆಲವೊಂದು ಕಡೆ ಬಿಜೆಪಿ ಮುಖಂಡರು ಡಾಂಬರೀಕರಣ‌ ಕಾಮಗಾರಿ ಬಗ್ಗೆ‌ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಈ ರೀತಿಯ ಸುಳ್ಳು ಆರೋಪಗಳನ್ನು ಮಾಡುತ್ತಿರುವ ಪುಡಾರಿಗಳನ್ನ ಹಾಲಿ ಶಾಸಕರು ದೂರವಿಡಬೇಕು. ಇಲ್ಲದಿದ್ದರೆ ಶಾಸಕರಿಗೂ ಕೆಟ್ಟ ಹೆಸರು ಬರುತ್ತದೆ ಎಂದು ಸಲಹೆ ನೀಡಿದರು.

ಈ ವೇಳೆ ಚಂದ್ರಶೇಖರ್, ಶಶಿಕುಮಾರ್, ಅಶ್ವತ್ ನಾರಾಯಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ತಪಾಸಣೆ ಬಳಿಕ ಹುಸಿ ಕರೆ ಎಂದು ಸ್ಪಷ್ಟ

ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್‌ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…

9 hours ago

ಸೋನಂ ವಾಂಗ್ ಚುಕ್……

ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…

1 day ago

ರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…

2 days ago

ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…

2 days ago

ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ವಾಹನ ಡಿಕ್ಕಿ: ಚಾಲಕ ಸಾವು

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್‌ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…

2 days ago

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

3 days ago