ಹೊನ್ನಾದೇವಿಪುರ-ಗೂಳ್ಯ ರಸ್ತೆ ಡಾಂಬರೀಕರಣ ಕಾಮಗಾರಿ ಕಳಪೆ ಆರೋಪ: ಬಿಜೆಪಿ ಮುಖಂಡರ ಆರೋಪ ತಳ್ಳಿ ಹಾಕಿದ ಕಾಂಗ್ರೆಸ್ ಮುಖಂಡರು

ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ವತಿಯಿಂದ 1.5 ಕೋಟಿ ಅನುದಾನದಲ್ಲಿ ತಾಲೂಕಿನ ಹೊನ್ನಾದೇವಿಪುರ-ಗೂಳ್ಯ ರಸ್ತೆಗೆ 1.5 ಕಿ.ಮೀ ಡಾಂಬರ್ ಹಾಕಲಾಗಿದೆ. ಬೇಕಂತಲೇ ಬಿಜೆಪಿ ಕೆಲ ಮುಖಂಡರು ಹಾರೇಕೋಲಿನಿಂದ ಡಾಂಬರ್ ನ್ನು ಅಗೆದು ಈ ಕಾಮಗಾರಿ ಕಳಪೆ ಎಂದು ಹೇಳಲಾಗಿದೆ, ಇನ್ನೂ ಒಂದು ಪದರ ಡಾಂಬರ್ ಹಾಕುವುದು ಬಾಕಿ ಇದೆ, ಅಷ್ಟರಲ್ಲಿ ಈ ಆರೋಪವನ್ನು ಮಾಡಲಾಗಿದೆ. ಈ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಬಿಜೆಪಿ ಮುಖಂಡರ ಆರೋಪವನ್ನ ಜಿ.ಪಂ ಮಾಜಿ ಸದಸ್ಯ ಚುಂಚೇಗೌಡ ತಳ್ಳಿಹಾಕಿದರು.

ತಾಲೂಕಿನ ಹೊನ್ನಾದೇವಿಪುರ-ಗೂಳ್ಯ ರಸ್ತೆಗೆ ಡಾಂಬರು ಹಾಕಿದ 15 ದಿನಗಳಲ್ಲೇ ಗುಂಡಿಗಳು ಬಿದ್ದಿವೆ. ಈ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ ಎಂದು ಬಿಜೆಪಿ ಮುಖಂಡರು ಆರೋಪ ಮಾಡಿ ರಸ್ತೆಯಲ್ಲಿ ಕುಳಿತು ಧರಣಿ ನಡೆಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಗುರುವಾರ ಸ್ಥಳಕ್ಕೆ ಆಗಮಿಸಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, 20 ವರ್ಷಗಳಿಂದ ಈ ಗ್ರಾಮಕ್ಕೆ ರಸ್ತೆ ಇರಲಿಲ್ಲ. ರಾತ್ರಿ ಹೊತ್ತು ಓಡಾಡಲೂ ಗ್ರಾಮಸ್ಥರು ಪರದಾಡಬೇಕಾಗಿತ್ತು. ಕೊನೆಗೂ ಹೊನ್ನಾದೇವಿಪುರ ರಸ್ತೆಗೆ ಡಾಂಬರು ಭಾಗ್ಯ ಸಿಕ್ಕಿದೆ, ಇದರಲ್ಲಿ ರಾಜಕೀಯ ಮಾಡಬಾರದು, ಗ್ರಾಮದ ಅಭಿವೃದ್ಧಿಗೆ ಪಕ್ಷ ಬೇಧ ಮರೆತು ಎಲ್ಲರೂ ಸಹಕರಿಸಬೇಕು ಎಂದು ಹೇಳಿದರು.

ಡಾಂಬರೀಕರಣ ಕಾಮಗಾರಿ ಕಳಪೆಯೋ ಅಥವಾ ಗುಣಮಟ್ಟದಿಂದ ಕೂಡಿದಿಯೋ ಎಂಬುದು ಸಂಬಂಧಿಸಿದ ಇಲಾಖೆಯ ಇಂಜಿನಿಯರ್ ಗಳು ಕಾಮಗಾರಿಯನ್ನ ಪರಿಶೀಲನೆ ಮಾಡಿ ವರದಿ ಬಿಡುಗಡೆ ಮಾಡುತ್ತಾರೆ‌. ಆಗ ಈ ಕುರಿತು ಸತ್ಯ ಗೊತ್ತಾಗುತ್ತದೆ. ಈ ಕುರಿತು ಇಂಜಿನಿಯರ್ ವರದಿ ಬಂದೇ ಇಲ್ಲ, ಇನ್ನೂ ಕಾಮಗಾರಿ ಬಾಕಿ ಇದೆ. ಅಷ್ಟರಲ್ಲಿ ಈ ಆರೋಪ ಮಾಡಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನೆ ಮಾಡಿದರು.

ವಿಧಾನಸಭೆ ಚುನಾವಣೆ ಮುನ್ನವೇ ತಾಲೂಕಿನಲ್ಲಿ 40 ಕೋಟಿ ಅನುದಾನದಲ್ಲಿ 40 ಕಿ.ಮೀ ಡಾಂಬರೀಕರಣ ಕಾಮಗಾರಿ ಆರಂಭವಾಗಿತ್ತು, ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದರಿಂದ ಕಾಮಗಾರಿ ನಿಲ್ಲಿಸಲಾಗಿತ್ತು. ಈಗ ಮತ್ತೆ ಪ್ರಾರಂಭ ಮಾಡಲಾಗಿದೆ. ಎಲ್ಲಾ ಕಾಮಗಾರಿ ಅಂತಿಮ ಹಂತದಲ್ಲಿ ಇವೆ. ಕೆಲವೊಂದು ಕಡೆ ಬಿಜೆಪಿ ಮುಖಂಡರು ಡಾಂಬರೀಕರಣ‌ ಕಾಮಗಾರಿ ಬಗ್ಗೆ‌ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಈ ರೀತಿಯ ಸುಳ್ಳು ಆರೋಪಗಳನ್ನು ಮಾಡುತ್ತಿರುವ ಪುಡಾರಿಗಳನ್ನ ಹಾಲಿ ಶಾಸಕರು ದೂರವಿಡಬೇಕು. ಇಲ್ಲದಿದ್ದರೆ ಶಾಸಕರಿಗೂ ಕೆಟ್ಟ ಹೆಸರು ಬರುತ್ತದೆ ಎಂದು ಸಲಹೆ ನೀಡಿದರು.

ಈ ವೇಳೆ ಚಂದ್ರಶೇಖರ್, ಶಶಿಕುಮಾರ್, ಅಶ್ವತ್ ನಾರಾಯಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

1 hour ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

9 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

17 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

17 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

2 days ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

2 days ago