ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ವತಿಯಿಂದ 1.5 ಕೋಟಿ ಅನುದಾನದಲ್ಲಿ ತಾಲೂಕಿನ ಹೊನ್ನಾದೇವಿಪುರ-ಗೂಳ್ಯ ರಸ್ತೆಗೆ 1.5 ಕಿ.ಮೀ ಡಾಂಬರ್ ಹಾಕಲಾಗಿದೆ. ಬೇಕಂತಲೇ ಬಿಜೆಪಿ ಕೆಲ ಮುಖಂಡರು ಹಾರೇಕೋಲಿನಿಂದ ಡಾಂಬರ್ ನ್ನು ಅಗೆದು ಈ ಕಾಮಗಾರಿ ಕಳಪೆ ಎಂದು ಹೇಳಲಾಗಿದೆ, ಇನ್ನೂ ಒಂದು ಪದರ ಡಾಂಬರ್ ಹಾಕುವುದು ಬಾಕಿ ಇದೆ, ಅಷ್ಟರಲ್ಲಿ ಈ ಆರೋಪವನ್ನು ಮಾಡಲಾಗಿದೆ. ಈ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಬಿಜೆಪಿ ಮುಖಂಡರ ಆರೋಪವನ್ನ ಜಿ.ಪಂ ಮಾಜಿ ಸದಸ್ಯ ಚುಂಚೇಗೌಡ ತಳ್ಳಿಹಾಕಿದರು.
ತಾಲೂಕಿನ ಹೊನ್ನಾದೇವಿಪುರ-ಗೂಳ್ಯ ರಸ್ತೆಗೆ ಡಾಂಬರು ಹಾಕಿದ 15 ದಿನಗಳಲ್ಲೇ ಗುಂಡಿಗಳು ಬಿದ್ದಿವೆ. ಈ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ ಎಂದು ಬಿಜೆಪಿ ಮುಖಂಡರು ಆರೋಪ ಮಾಡಿ ರಸ್ತೆಯಲ್ಲಿ ಕುಳಿತು ಧರಣಿ ನಡೆಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಗುರುವಾರ ಸ್ಥಳಕ್ಕೆ ಆಗಮಿಸಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, 20 ವರ್ಷಗಳಿಂದ ಈ ಗ್ರಾಮಕ್ಕೆ ರಸ್ತೆ ಇರಲಿಲ್ಲ. ರಾತ್ರಿ ಹೊತ್ತು ಓಡಾಡಲೂ ಗ್ರಾಮಸ್ಥರು ಪರದಾಡಬೇಕಾಗಿತ್ತು. ಕೊನೆಗೂ ಹೊನ್ನಾದೇವಿಪುರ ರಸ್ತೆಗೆ ಡಾಂಬರು ಭಾಗ್ಯ ಸಿಕ್ಕಿದೆ, ಇದರಲ್ಲಿ ರಾಜಕೀಯ ಮಾಡಬಾರದು, ಗ್ರಾಮದ ಅಭಿವೃದ್ಧಿಗೆ ಪಕ್ಷ ಬೇಧ ಮರೆತು ಎಲ್ಲರೂ ಸಹಕರಿಸಬೇಕು ಎಂದು ಹೇಳಿದರು.
ವಿಧಾನಸಭೆ ಚುನಾವಣೆ ಮುನ್ನವೇ ತಾಲೂಕಿನಲ್ಲಿ 40 ಕೋಟಿ ಅನುದಾನದಲ್ಲಿ 40 ಕಿ.ಮೀ ಡಾಂಬರೀಕರಣ ಕಾಮಗಾರಿ ಆರಂಭವಾಗಿತ್ತು, ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದರಿಂದ ಕಾಮಗಾರಿ ನಿಲ್ಲಿಸಲಾಗಿತ್ತು. ಈಗ ಮತ್ತೆ ಪ್ರಾರಂಭ ಮಾಡಲಾಗಿದೆ. ಎಲ್ಲಾ ಕಾಮಗಾರಿ ಅಂತಿಮ ಹಂತದಲ್ಲಿ ಇವೆ. ಕೆಲವೊಂದು ಕಡೆ ಬಿಜೆಪಿ ಮುಖಂಡರು ಡಾಂಬರೀಕರಣ ಕಾಮಗಾರಿ ಬಗ್ಗೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಈ ವೇಳೆ ಚಂದ್ರಶೇಖರ್, ಶಶಿಕುಮಾರ್, ಅಶ್ವತ್ ನಾರಾಯಣ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…