ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ವತಿಯಿಂದ 1.5 ಕೋಟಿ ಅನುದಾನದಲ್ಲಿ ತಾಲೂಕಿನ ಹೊನ್ನಾದೇವಿಪುರ-ಗೂಳ್ಯ ರಸ್ತೆಗೆ 1.5 ಕಿ.ಮೀ ಡಾಂಬರ್ ಹಾಕಲಾಗಿದೆ. ಬೇಕಂತಲೇ ಬಿಜೆಪಿ ಕೆಲ ಮುಖಂಡರು ಹಾರೇಕೋಲಿನಿಂದ ಡಾಂಬರ್ ನ್ನು ಅಗೆದು ಈ ಕಾಮಗಾರಿ ಕಳಪೆ ಎಂದು ಹೇಳಲಾಗಿದೆ, ಇನ್ನೂ ಒಂದು ಪದರ ಡಾಂಬರ್ ಹಾಕುವುದು ಬಾಕಿ ಇದೆ, ಅಷ್ಟರಲ್ಲಿ ಈ ಆರೋಪವನ್ನು ಮಾಡಲಾಗಿದೆ. ಈ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಬಿಜೆಪಿ ಮುಖಂಡರ ಆರೋಪವನ್ನ ಜಿ.ಪಂ ಮಾಜಿ ಸದಸ್ಯ ಚುಂಚೇಗೌಡ ತಳ್ಳಿಹಾಕಿದರು.
ತಾಲೂಕಿನ ಹೊನ್ನಾದೇವಿಪುರ-ಗೂಳ್ಯ ರಸ್ತೆಗೆ ಡಾಂಬರು ಹಾಕಿದ 15 ದಿನಗಳಲ್ಲೇ ಗುಂಡಿಗಳು ಬಿದ್ದಿವೆ. ಈ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ ಎಂದು ಬಿಜೆಪಿ ಮುಖಂಡರು ಆರೋಪ ಮಾಡಿ ರಸ್ತೆಯಲ್ಲಿ ಕುಳಿತು ಧರಣಿ ನಡೆಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಗುರುವಾರ ಸ್ಥಳಕ್ಕೆ ಆಗಮಿಸಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, 20 ವರ್ಷಗಳಿಂದ ಈ ಗ್ರಾಮಕ್ಕೆ ರಸ್ತೆ ಇರಲಿಲ್ಲ. ರಾತ್ರಿ ಹೊತ್ತು ಓಡಾಡಲೂ ಗ್ರಾಮಸ್ಥರು ಪರದಾಡಬೇಕಾಗಿತ್ತು. ಕೊನೆಗೂ ಹೊನ್ನಾದೇವಿಪುರ ರಸ್ತೆಗೆ ಡಾಂಬರು ಭಾಗ್ಯ ಸಿಕ್ಕಿದೆ, ಇದರಲ್ಲಿ ರಾಜಕೀಯ ಮಾಡಬಾರದು, ಗ್ರಾಮದ ಅಭಿವೃದ್ಧಿಗೆ ಪಕ್ಷ ಬೇಧ ಮರೆತು ಎಲ್ಲರೂ ಸಹಕರಿಸಬೇಕು ಎಂದು ಹೇಳಿದರು.
ವಿಧಾನಸಭೆ ಚುನಾವಣೆ ಮುನ್ನವೇ ತಾಲೂಕಿನಲ್ಲಿ 40 ಕೋಟಿ ಅನುದಾನದಲ್ಲಿ 40 ಕಿ.ಮೀ ಡಾಂಬರೀಕರಣ ಕಾಮಗಾರಿ ಆರಂಭವಾಗಿತ್ತು, ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದರಿಂದ ಕಾಮಗಾರಿ ನಿಲ್ಲಿಸಲಾಗಿತ್ತು. ಈಗ ಮತ್ತೆ ಪ್ರಾರಂಭ ಮಾಡಲಾಗಿದೆ. ಎಲ್ಲಾ ಕಾಮಗಾರಿ ಅಂತಿಮ ಹಂತದಲ್ಲಿ ಇವೆ. ಕೆಲವೊಂದು ಕಡೆ ಬಿಜೆಪಿ ಮುಖಂಡರು ಡಾಂಬರೀಕರಣ ಕಾಮಗಾರಿ ಬಗ್ಗೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಈ ವೇಳೆ ಚಂದ್ರಶೇಖರ್, ಶಶಿಕುಮಾರ್, ಅಶ್ವತ್ ನಾರಾಯಣ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…