ಹೊನ್ನಾದೇವಿಪುರ-ಗೂಳ್ಯ ರಸ್ತೆ ಡಾಂಬರೀಕರಣ ಕಾಮಗಾರಿ ಕಳಪೆ ಆರೋಪ: ಬಿಜೆಪಿ ಮುಖಂಡರ ಆರೋಪ ತಳ್ಳಿ ಹಾಕಿದ ಕಾಂಗ್ರೆಸ್ ಮುಖಂಡರು

ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ವತಿಯಿಂದ 1.5 ಕೋಟಿ ಅನುದಾನದಲ್ಲಿ ತಾಲೂಕಿನ ಹೊನ್ನಾದೇವಿಪುರ-ಗೂಳ್ಯ ರಸ್ತೆಗೆ 1.5 ಕಿ.ಮೀ ಡಾಂಬರ್ ಹಾಕಲಾಗಿದೆ. ಬೇಕಂತಲೇ ಬಿಜೆಪಿ ಕೆಲ ಮುಖಂಡರು ಹಾರೇಕೋಲಿನಿಂದ ಡಾಂಬರ್ ನ್ನು ಅಗೆದು ಈ ಕಾಮಗಾರಿ ಕಳಪೆ ಎಂದು ಹೇಳಲಾಗಿದೆ, ಇನ್ನೂ ಒಂದು ಪದರ ಡಾಂಬರ್ ಹಾಕುವುದು ಬಾಕಿ ಇದೆ, ಅಷ್ಟರಲ್ಲಿ ಈ ಆರೋಪವನ್ನು ಮಾಡಲಾಗಿದೆ. ಈ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಬಿಜೆಪಿ ಮುಖಂಡರ ಆರೋಪವನ್ನ ಜಿ.ಪಂ ಮಾಜಿ ಸದಸ್ಯ ಚುಂಚೇಗೌಡ ತಳ್ಳಿಹಾಕಿದರು.

ತಾಲೂಕಿನ ಹೊನ್ನಾದೇವಿಪುರ-ಗೂಳ್ಯ ರಸ್ತೆಗೆ ಡಾಂಬರು ಹಾಕಿದ 15 ದಿನಗಳಲ್ಲೇ ಗುಂಡಿಗಳು ಬಿದ್ದಿವೆ. ಈ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ ಎಂದು ಬಿಜೆಪಿ ಮುಖಂಡರು ಆರೋಪ ಮಾಡಿ ರಸ್ತೆಯಲ್ಲಿ ಕುಳಿತು ಧರಣಿ ನಡೆಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಗುರುವಾರ ಸ್ಥಳಕ್ಕೆ ಆಗಮಿಸಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, 20 ವರ್ಷಗಳಿಂದ ಈ ಗ್ರಾಮಕ್ಕೆ ರಸ್ತೆ ಇರಲಿಲ್ಲ. ರಾತ್ರಿ ಹೊತ್ತು ಓಡಾಡಲೂ ಗ್ರಾಮಸ್ಥರು ಪರದಾಡಬೇಕಾಗಿತ್ತು. ಕೊನೆಗೂ ಹೊನ್ನಾದೇವಿಪುರ ರಸ್ತೆಗೆ ಡಾಂಬರು ಭಾಗ್ಯ ಸಿಕ್ಕಿದೆ, ಇದರಲ್ಲಿ ರಾಜಕೀಯ ಮಾಡಬಾರದು, ಗ್ರಾಮದ ಅಭಿವೃದ್ಧಿಗೆ ಪಕ್ಷ ಬೇಧ ಮರೆತು ಎಲ್ಲರೂ ಸಹಕರಿಸಬೇಕು ಎಂದು ಹೇಳಿದರು.

ಡಾಂಬರೀಕರಣ ಕಾಮಗಾರಿ ಕಳಪೆಯೋ ಅಥವಾ ಗುಣಮಟ್ಟದಿಂದ ಕೂಡಿದಿಯೋ ಎಂಬುದು ಸಂಬಂಧಿಸಿದ ಇಲಾಖೆಯ ಇಂಜಿನಿಯರ್ ಗಳು ಕಾಮಗಾರಿಯನ್ನ ಪರಿಶೀಲನೆ ಮಾಡಿ ವರದಿ ಬಿಡುಗಡೆ ಮಾಡುತ್ತಾರೆ‌. ಆಗ ಈ ಕುರಿತು ಸತ್ಯ ಗೊತ್ತಾಗುತ್ತದೆ. ಈ ಕುರಿತು ಇಂಜಿನಿಯರ್ ವರದಿ ಬಂದೇ ಇಲ್ಲ, ಇನ್ನೂ ಕಾಮಗಾರಿ ಬಾಕಿ ಇದೆ. ಅಷ್ಟರಲ್ಲಿ ಈ ಆರೋಪ ಮಾಡಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನೆ ಮಾಡಿದರು.

ವಿಧಾನಸಭೆ ಚುನಾವಣೆ ಮುನ್ನವೇ ತಾಲೂಕಿನಲ್ಲಿ 40 ಕೋಟಿ ಅನುದಾನದಲ್ಲಿ 40 ಕಿ.ಮೀ ಡಾಂಬರೀಕರಣ ಕಾಮಗಾರಿ ಆರಂಭವಾಗಿತ್ತು, ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದರಿಂದ ಕಾಮಗಾರಿ ನಿಲ್ಲಿಸಲಾಗಿತ್ತು. ಈಗ ಮತ್ತೆ ಪ್ರಾರಂಭ ಮಾಡಲಾಗಿದೆ. ಎಲ್ಲಾ ಕಾಮಗಾರಿ ಅಂತಿಮ ಹಂತದಲ್ಲಿ ಇವೆ. ಕೆಲವೊಂದು ಕಡೆ ಬಿಜೆಪಿ ಮುಖಂಡರು ಡಾಂಬರೀಕರಣ‌ ಕಾಮಗಾರಿ ಬಗ್ಗೆ‌ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಈ ರೀತಿಯ ಸುಳ್ಳು ಆರೋಪಗಳನ್ನು ಮಾಡುತ್ತಿರುವ ಪುಡಾರಿಗಳನ್ನ ಹಾಲಿ ಶಾಸಕರು ದೂರವಿಡಬೇಕು. ಇಲ್ಲದಿದ್ದರೆ ಶಾಸಕರಿಗೂ ಕೆಟ್ಟ ಹೆಸರು ಬರುತ್ತದೆ ಎಂದು ಸಲಹೆ ನೀಡಿದರು.

ಈ ವೇಳೆ ಚಂದ್ರಶೇಖರ್, ಶಶಿಕುಮಾರ್, ಅಶ್ವತ್ ನಾರಾಯಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

24 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

3 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

4 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

5 days ago