ಹೊನ್ನಾವರದಲ್ಲಿ ಬೈಕ್ ಓವರ್‌ಟೇಕ್ ಗಲಾಟೆ, ಇಬ್ಬರು ಆರೋಪಿಗಳ ಬಂಧನ

ಹೊನ್ನಾವರ: ಸೆಪ್ಟೆಂಬರ್ 18, 2025 ರಂದು ಹೊನ್ನಾವರದಲ್ಲಿ ನಡೆದ ಬೈಕ್ ಓವರ್‌ಟೇಕ್ ಗಲಾಟೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂದು ಮಧ್ಯಾಹ್ನ ಸುಮಾರು 1:45 ರ ಸುಮಾರಿಗೆ ಸಂಶಿ ಗ್ರಾಮದ ವಿವೇಕ ಸುರೇಶ ನಾಯ್ಕ ಮತ್ತು ಸುದೀಪ್ ನಾಯ್ಕ ಅವರು ತಮ್ಮ ಬೈಕ್‌ನಲ್ಲಿ ಗೇರುಸೊಪ್ಪಾದಿಂದ ಉಪ್ಪೋಣಿ ಕಡೆಗೆ ಬರುತ್ತಿದ್ದರು. ಮಾವಿನಹೊಳೆ ಬಸ್ ನಿಲ್ದಾಣದ ಬಳಿ, ವಿವೇಕ ನಾಯ್ಕ ಅವರು ಮುಂದೆ ಹೋಗುತ್ತಿದ್ದ ಮತ್ತೊಂದು ಬೈಕ್ ಅನ್ನು ಓವರ್‌ಟೇಕ್ ಮಾಡಲು ಪ್ರಯತ್ನಿಸಿದ್ದಾರೆ. ಈ ವೇಳೆ, ಆ ಬೈಕ್‌ನಲ್ಲಿದ್ದ ಆರೋಪಿಗಳಾದ ಮೊಹಮ್ಮದ್ ಅದ್ನಾನ್ (26, ಮುಸ್ಲಿಂಕೇರಿ, ಹೊನ್ನಾವರ) ಮತ್ತು ಪ್ರದೀಪ್ ಅಂಬಿಗ (26, ಮಾವಿನಹೊಳೆ, ಹೊನ್ನಾವರ) ಅವರು ಅಸಭ್ಯವಾಗಿ ಕೈ ಸನ್ನೆ ಮಾಡಿದ್ದಾರೆ.

ಇದರಿಂದ ಮಾತಿಗೆ ಮಾತು ಬೆಳೆದು ಜಗಳ ಆರಂಭವಾಗಿದೆ. ಈ ಸಂದರ್ಭದಲ್ಲಿ ಮೊಹಮ್ಮದ್ ಅದ್ನಾನ್ ತನ್ನ ಜೇಬಿನಲ್ಲಿದ್ದ ಚಾಕುವಿನಿಂದ ವಿವೇಕ ನಾಯ್ಕ ಅವರಿಗೆ ಚುಚ್ಚಲು ಯತ್ನಿಸಿದ್ದು, ವಿವೇಕ ಅವರಿಗೆ ಗಾಯಗಳಾಗಿವೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ವರದಿಯಾಗಿದೆ.

ಈ ಸಂಬಂಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೊನ್ನಾವರ ಪೊಲೀಸ್ ವೃತ್ತ ನಿರೀಕ್ಷಕರು ತನಿಖೆ ಕೈಗೊಂಡಿದ್ದಾರೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ಪೊಲೀಸರು ತಕ್ಷಣವೇ ಆರೋಪಿಗಳಾದ ಮೊಹಮ್ಮದ್ ಅದ್ನಾನ್ ಮತ್ತು ಪ್ರದೀಪ್ ಅಂಬಿಗ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಘಟನೆಯು ಯಾವುದೇ ಕೋಮು ಅಥವಾ ಹಳೆಯ ದ್ವೇಷದ ಕಾರಣದಿಂದ ಸಂಭವಿಸಿಲ್ಲ. ಇದು ಹಠಾತ್ ಪ್ರಚೋದನೆಯಿಂದ ನಡೆದ ಘಟನೆ ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಈ ಘಟನೆಯ ಬಗ್ಗೆ ಕೆಲವರು ಸುಳ್ಳು ಸುದ್ದಿ ಮತ್ತು ಅಪಪ್ರಚಾರ ಹರಡುತ್ತಿರುವುದು ಕಂಡುಬಂದಿದ್ದು, ಇಂತಹ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

1 hour ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

7 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

21 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

22 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

23 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

23 hours ago