ಹೊನ್ನಾವರ: ಸೆಪ್ಟೆಂಬರ್ 18, 2025 ರಂದು ಹೊನ್ನಾವರದಲ್ಲಿ ನಡೆದ ಬೈಕ್ ಓವರ್ಟೇಕ್ ಗಲಾಟೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂದು ಮಧ್ಯಾಹ್ನ ಸುಮಾರು 1:45 ರ ಸುಮಾರಿಗೆ ಸಂಶಿ ಗ್ರಾಮದ ವಿವೇಕ ಸುರೇಶ ನಾಯ್ಕ ಮತ್ತು ಸುದೀಪ್ ನಾಯ್ಕ ಅವರು ತಮ್ಮ ಬೈಕ್ನಲ್ಲಿ ಗೇರುಸೊಪ್ಪಾದಿಂದ ಉಪ್ಪೋಣಿ ಕಡೆಗೆ ಬರುತ್ತಿದ್ದರು. ಮಾವಿನಹೊಳೆ ಬಸ್ ನಿಲ್ದಾಣದ ಬಳಿ, ವಿವೇಕ ನಾಯ್ಕ ಅವರು ಮುಂದೆ ಹೋಗುತ್ತಿದ್ದ ಮತ್ತೊಂದು ಬೈಕ್ ಅನ್ನು ಓವರ್ಟೇಕ್ ಮಾಡಲು ಪ್ರಯತ್ನಿಸಿದ್ದಾರೆ. ಈ ವೇಳೆ, ಆ ಬೈಕ್ನಲ್ಲಿದ್ದ ಆರೋಪಿಗಳಾದ ಮೊಹಮ್ಮದ್ ಅದ್ನಾನ್ (26, ಮುಸ್ಲಿಂಕೇರಿ, ಹೊನ್ನಾವರ) ಮತ್ತು ಪ್ರದೀಪ್ ಅಂಬಿಗ (26, ಮಾವಿನಹೊಳೆ, ಹೊನ್ನಾವರ) ಅವರು ಅಸಭ್ಯವಾಗಿ ಕೈ ಸನ್ನೆ ಮಾಡಿದ್ದಾರೆ.
ಇದರಿಂದ ಮಾತಿಗೆ ಮಾತು ಬೆಳೆದು ಜಗಳ ಆರಂಭವಾಗಿದೆ. ಈ ಸಂದರ್ಭದಲ್ಲಿ ಮೊಹಮ್ಮದ್ ಅದ್ನಾನ್ ತನ್ನ ಜೇಬಿನಲ್ಲಿದ್ದ ಚಾಕುವಿನಿಂದ ವಿವೇಕ ನಾಯ್ಕ ಅವರಿಗೆ ಚುಚ್ಚಲು ಯತ್ನಿಸಿದ್ದು, ವಿವೇಕ ಅವರಿಗೆ ಗಾಯಗಳಾಗಿವೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ವರದಿಯಾಗಿದೆ.
ಈ ಸಂಬಂಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೊನ್ನಾವರ ಪೊಲೀಸ್ ವೃತ್ತ ನಿರೀಕ್ಷಕರು ತನಿಖೆ ಕೈಗೊಂಡಿದ್ದಾರೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ಪೊಲೀಸರು ತಕ್ಷಣವೇ ಆರೋಪಿಗಳಾದ ಮೊಹಮ್ಮದ್ ಅದ್ನಾನ್ ಮತ್ತು ಪ್ರದೀಪ್ ಅಂಬಿಗ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಈ ಘಟನೆಯು ಯಾವುದೇ ಕೋಮು ಅಥವಾ ಹಳೆಯ ದ್ವೇಷದ ಕಾರಣದಿಂದ ಸಂಭವಿಸಿಲ್ಲ. ಇದು ಹಠಾತ್ ಪ್ರಚೋದನೆಯಿಂದ ನಡೆದ ಘಟನೆ ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಈ ಘಟನೆಯ ಬಗ್ಗೆ ಕೆಲವರು ಸುಳ್ಳು ಸುದ್ದಿ ಮತ್ತು ಅಪಪ್ರಚಾರ ಹರಡುತ್ತಿರುವುದು ಕಂಡುಬಂದಿದ್ದು, ಇಂತಹ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.
ಪಟಾಕಿ ದುರಂತಕ್ಕೆ ಯಾರು ಹೊಣೆ.... ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ..... ಲೇಸರ್…
ದೊಡ್ಡಬಳ್ಳಾಪುರ ನಗರದಲ್ಲಿ ಏ.23 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F09-Rajaghatta, F03-Thalagavara, F12-Heggadihalli, F17- Nandi…
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…