Categories: ಕೋಲಾರ

ಹೊನ್ನೇನಹಳ್ಳಿ, ವಡಗೂರು ಗ್ರಾಪಂ ಪಿಡಿಒಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

ಕೋಲಾರ: ಅಕ್ರಮವಾಗಿ ಲೂಟಿಯಲ್ಲಿ ತೊಡಗಿರುವ ಹೊನ್ನೇನಹಳ್ಳಿ ಗ್ರಾಪಂ ಪಿಡಿಒ ಹರೀಶ್ ಹಾಗೂ ವಡಗೂರು ಗ್ರಾಪಂ ಪಿಡಿಒ ರಮೇಶ್ ಬಾಬು ವಿರುದ್ದ ತನಿಖೆ ಮಾಡಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ರಿಪಬ್ಲಿಕನ್ ಸಂಘಟನೆಯ ನೇತೃತ್ವದಲ್ಲಿ ಗುರುವಾರ ಜಿಲ್ಲಾ ಪಂಚಾಯತಿ ಮುಂಭಾಗ ಪ್ರತಿಭಟನೆ ನಡೆಸಿ ಜಿಪಂ ಉಪ ಕಾರ್ಯದರ್ಶಿ ರಮೇಶ್ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು

ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯ ಅಧ್ಯಕ್ಷ ಚಿಕ್ಕನಾರಾಯಣ ಮಾತನಾಡಿ ಹೊನ್ನೇನಹಳ್ಳಿ ಮತ್ತು ವಡಗೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಅಕ್ರಮವಾಗಿ ರಾಜಕಾಲುವೆ ಒತ್ತುವರಿ, ಇ ಖಾತೆಗಳ ಹೆಸರಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ, ಭೂಪರಿವರ್ತನೆ, ನರೇಗಾದಲ್ಲಿ ಭ್ರಷ್ಟಾಚಾರ, ಸರ್ಕಾರಿ ಗುಂಡು ತೋಪುಗಳನ್ನು ಬಲಾಢ್ಯರಿಗೆ ಮಾಡಿಕೊಟ್ಟಿದ್ದಾರೆ ದಲಿತರ ಭೂಮಿ ವಂಚನೆ ಮಾಡಿರುವ ಪಿಡಿಒಗಳ ವಿರುದ್ದ ಲೋಕಾಯುಕ್ತ ತನಿಖೆ ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು

ಹೊನ್ನೇನಹಳ್ಳಿ ಮತ್ತು ವಡಗೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆದಿರುವ ಅಕ್ರಮ ಇ ಸ್ವತ್ತುಗಳನ್ನು ಪರಿಶೀಲನೆ ಮಾಡಬೇಕು ಇವರುಗಳ ಅಕ್ರಮಗಳ ಬಗ್ಗೆ ದೂರು ನೀಡಿದರು ಯಾವುದೇ ಕ್ರಮ ವಹಿಸಿಲ್ಲ ಕೂಡಲೇ ಇವರ ವಿರುದ್ದ ಕ್ರಮ ಕೈಗೊಂಡು ಇವರನ್ನು ಬೇರೆ ಕಡೆ ವರ್ಗಾವಣೆ ಮಾಡಬೇಕು ಜಮೀನುಗಳ ಬಗ್ಗೆ ಸರ್ವೆ ಮಾಡಿಸಿ ಸರ್ಕಾರಿ ಜಮೀನು ಉಳಿಸಿ ಜಾನುವಾರುಗಳಿಗೆ ಮೀಸಲಿಟ್ಟು ದಲಿತರಿಗೆ ಹಾಗೂ ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಕ್ರಮವಹಿಸುವಂತೆ ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಜಿಪಂ ಉಪ ಕಾರ್ಯದರ್ಶಿ ರಮೇಶ್ ಮನವಿಯನ್ನು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಸಂಘಟನೆಯ ಕಾರ್ಮಿಕ ಘಟಕದ ಅಧ್ಯಕ್ಷ ಜಿ ರಾಮಚಂದ್ರ, ಪ್ರಧಾನ ಕಾರ್ಯದರ್ಶಿ ಪಿ‌.ನಾರಾಯಣ್, ರಾಜ್ಯ ಸಂಚಾಲಕ ವಿ.ಮಂಜುನಾಥ್, ಜಿಲ್ಲಾ ಅಧ್ಯಕ್ಷ ವಿ.ಅಮರೇಶ್ ಬಂಗಾರಪೇಟೆ ತಾ ಅಧ್ಯಕ್ಷ ತಿಪ್ಪಣ್ಣ, ಸಂಘಟನಾ ಕಾರ್ಯದರ್ಶಿ ಕೃಷ್ಣಮೂರ್ತಿ, ಉಮಾರಾಣಿ ಮುಂತಾದವರು ಇದ್ದರು

Ramesh Babu

Journalist

Recent Posts

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

1 hour ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

1 hour ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

9 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

22 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

24 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

1 day ago