Categories: ಕೋಲಾರ

ಹೊನ್ನೇನಹಳ್ಳಿ, ವಡಗೂರು ಗ್ರಾಪಂ ಪಿಡಿಒಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

ಕೋಲಾರ: ಅಕ್ರಮವಾಗಿ ಲೂಟಿಯಲ್ಲಿ ತೊಡಗಿರುವ ಹೊನ್ನೇನಹಳ್ಳಿ ಗ್ರಾಪಂ ಪಿಡಿಒ ಹರೀಶ್ ಹಾಗೂ ವಡಗೂರು ಗ್ರಾಪಂ ಪಿಡಿಒ ರಮೇಶ್ ಬಾಬು ವಿರುದ್ದ ತನಿಖೆ ಮಾಡಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ರಿಪಬ್ಲಿಕನ್ ಸಂಘಟನೆಯ ನೇತೃತ್ವದಲ್ಲಿ ಗುರುವಾರ ಜಿಲ್ಲಾ ಪಂಚಾಯತಿ ಮುಂಭಾಗ ಪ್ರತಿಭಟನೆ ನಡೆಸಿ ಜಿಪಂ ಉಪ ಕಾರ್ಯದರ್ಶಿ ರಮೇಶ್ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು

ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯ ಅಧ್ಯಕ್ಷ ಚಿಕ್ಕನಾರಾಯಣ ಮಾತನಾಡಿ ಹೊನ್ನೇನಹಳ್ಳಿ ಮತ್ತು ವಡಗೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಅಕ್ರಮವಾಗಿ ರಾಜಕಾಲುವೆ ಒತ್ತುವರಿ, ಇ ಖಾತೆಗಳ ಹೆಸರಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ, ಭೂಪರಿವರ್ತನೆ, ನರೇಗಾದಲ್ಲಿ ಭ್ರಷ್ಟಾಚಾರ, ಸರ್ಕಾರಿ ಗುಂಡು ತೋಪುಗಳನ್ನು ಬಲಾಢ್ಯರಿಗೆ ಮಾಡಿಕೊಟ್ಟಿದ್ದಾರೆ ದಲಿತರ ಭೂಮಿ ವಂಚನೆ ಮಾಡಿರುವ ಪಿಡಿಒಗಳ ವಿರುದ್ದ ಲೋಕಾಯುಕ್ತ ತನಿಖೆ ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು

ಹೊನ್ನೇನಹಳ್ಳಿ ಮತ್ತು ವಡಗೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆದಿರುವ ಅಕ್ರಮ ಇ ಸ್ವತ್ತುಗಳನ್ನು ಪರಿಶೀಲನೆ ಮಾಡಬೇಕು ಇವರುಗಳ ಅಕ್ರಮಗಳ ಬಗ್ಗೆ ದೂರು ನೀಡಿದರು ಯಾವುದೇ ಕ್ರಮ ವಹಿಸಿಲ್ಲ ಕೂಡಲೇ ಇವರ ವಿರುದ್ದ ಕ್ರಮ ಕೈಗೊಂಡು ಇವರನ್ನು ಬೇರೆ ಕಡೆ ವರ್ಗಾವಣೆ ಮಾಡಬೇಕು ಜಮೀನುಗಳ ಬಗ್ಗೆ ಸರ್ವೆ ಮಾಡಿಸಿ ಸರ್ಕಾರಿ ಜಮೀನು ಉಳಿಸಿ ಜಾನುವಾರುಗಳಿಗೆ ಮೀಸಲಿಟ್ಟು ದಲಿತರಿಗೆ ಹಾಗೂ ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಕ್ರಮವಹಿಸುವಂತೆ ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಜಿಪಂ ಉಪ ಕಾರ್ಯದರ್ಶಿ ರಮೇಶ್ ಮನವಿಯನ್ನು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಸಂಘಟನೆಯ ಕಾರ್ಮಿಕ ಘಟಕದ ಅಧ್ಯಕ್ಷ ಜಿ ರಾಮಚಂದ್ರ, ಪ್ರಧಾನ ಕಾರ್ಯದರ್ಶಿ ಪಿ‌.ನಾರಾಯಣ್, ರಾಜ್ಯ ಸಂಚಾಲಕ ವಿ.ಮಂಜುನಾಥ್, ಜಿಲ್ಲಾ ಅಧ್ಯಕ್ಷ ವಿ.ಅಮರೇಶ್ ಬಂಗಾರಪೇಟೆ ತಾ ಅಧ್ಯಕ್ಷ ತಿಪ್ಪಣ್ಣ, ಸಂಘಟನಾ ಕಾರ್ಯದರ್ಶಿ ಕೃಷ್ಣಮೂರ್ತಿ, ಉಮಾರಾಣಿ ಮುಂತಾದವರು ಇದ್ದರು

Ramesh Babu

Journalist

Recent Posts

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

2 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago