Categories: ಕೋಲಾರ

ಹೊನ್ನೇನಹಳ್ಳಿ, ವಡಗೂರು ಗ್ರಾಪಂ ಪಿಡಿಒಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

ಕೋಲಾರ: ಅಕ್ರಮವಾಗಿ ಲೂಟಿಯಲ್ಲಿ ತೊಡಗಿರುವ ಹೊನ್ನೇನಹಳ್ಳಿ ಗ್ರಾಪಂ ಪಿಡಿಒ ಹರೀಶ್ ಹಾಗೂ ವಡಗೂರು ಗ್ರಾಪಂ ಪಿಡಿಒ ರಮೇಶ್ ಬಾಬು ವಿರುದ್ದ ತನಿಖೆ ಮಾಡಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ರಿಪಬ್ಲಿಕನ್ ಸಂಘಟನೆಯ ನೇತೃತ್ವದಲ್ಲಿ ಗುರುವಾರ ಜಿಲ್ಲಾ ಪಂಚಾಯತಿ ಮುಂಭಾಗ ಪ್ರತಿಭಟನೆ ನಡೆಸಿ ಜಿಪಂ ಉಪ ಕಾರ್ಯದರ್ಶಿ ರಮೇಶ್ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು

ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯ ಅಧ್ಯಕ್ಷ ಚಿಕ್ಕನಾರಾಯಣ ಮಾತನಾಡಿ ಹೊನ್ನೇನಹಳ್ಳಿ ಮತ್ತು ವಡಗೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಅಕ್ರಮವಾಗಿ ರಾಜಕಾಲುವೆ ಒತ್ತುವರಿ, ಇ ಖಾತೆಗಳ ಹೆಸರಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ, ಭೂಪರಿವರ್ತನೆ, ನರೇಗಾದಲ್ಲಿ ಭ್ರಷ್ಟಾಚಾರ, ಸರ್ಕಾರಿ ಗುಂಡು ತೋಪುಗಳನ್ನು ಬಲಾಢ್ಯರಿಗೆ ಮಾಡಿಕೊಟ್ಟಿದ್ದಾರೆ ದಲಿತರ ಭೂಮಿ ವಂಚನೆ ಮಾಡಿರುವ ಪಿಡಿಒಗಳ ವಿರುದ್ದ ಲೋಕಾಯುಕ್ತ ತನಿಖೆ ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು

ಹೊನ್ನೇನಹಳ್ಳಿ ಮತ್ತು ವಡಗೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆದಿರುವ ಅಕ್ರಮ ಇ ಸ್ವತ್ತುಗಳನ್ನು ಪರಿಶೀಲನೆ ಮಾಡಬೇಕು ಇವರುಗಳ ಅಕ್ರಮಗಳ ಬಗ್ಗೆ ದೂರು ನೀಡಿದರು ಯಾವುದೇ ಕ್ರಮ ವಹಿಸಿಲ್ಲ ಕೂಡಲೇ ಇವರ ವಿರುದ್ದ ಕ್ರಮ ಕೈಗೊಂಡು ಇವರನ್ನು ಬೇರೆ ಕಡೆ ವರ್ಗಾವಣೆ ಮಾಡಬೇಕು ಜಮೀನುಗಳ ಬಗ್ಗೆ ಸರ್ವೆ ಮಾಡಿಸಿ ಸರ್ಕಾರಿ ಜಮೀನು ಉಳಿಸಿ ಜಾನುವಾರುಗಳಿಗೆ ಮೀಸಲಿಟ್ಟು ದಲಿತರಿಗೆ ಹಾಗೂ ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಕ್ರಮವಹಿಸುವಂತೆ ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಜಿಪಂ ಉಪ ಕಾರ್ಯದರ್ಶಿ ರಮೇಶ್ ಮನವಿಯನ್ನು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಸಂಘಟನೆಯ ಕಾರ್ಮಿಕ ಘಟಕದ ಅಧ್ಯಕ್ಷ ಜಿ ರಾಮಚಂದ್ರ, ಪ್ರಧಾನ ಕಾರ್ಯದರ್ಶಿ ಪಿ‌.ನಾರಾಯಣ್, ರಾಜ್ಯ ಸಂಚಾಲಕ ವಿ.ಮಂಜುನಾಥ್, ಜಿಲ್ಲಾ ಅಧ್ಯಕ್ಷ ವಿ.ಅಮರೇಶ್ ಬಂಗಾರಪೇಟೆ ತಾ ಅಧ್ಯಕ್ಷ ತಿಪ್ಪಣ್ಣ, ಸಂಘಟನಾ ಕಾರ್ಯದರ್ಶಿ ಕೃಷ್ಣಮೂರ್ತಿ, ಉಮಾರಾಣಿ ಮುಂತಾದವರು ಇದ್ದರು

Ramesh Babu

Journalist

Recent Posts

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

36 minutes ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

14 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

16 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

16 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

16 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

21 hours ago