ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2023-2024ನೇ ಸಾಲಿಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ 1)ನಾವೀನ್ಯತೆ(Innovation), 2)ತಾರ್ಕಿಕ ಸಾಧನೆ(sholostic) (ಉದಾ:ಎರಡು ಅನುಕ್ರಮ ವರ್ಷಗಳಲ್ಲಿ ಗಣಿತ ಶಾಸ್ತ್ರದಲ್ಲಿ ಮೊದಲನೆ ಸ್ಥಾನ) 3) ಕ್ರೀಡೆ,(Sports), 4) ಕಲೆ,ಸಾಂಸ್ಕೃತಿಕ,ಮತ್ತು ಸಂಗೀತ (Art, cultural,music) ಕ್ಷೇತ್ರಗಳಲ್ಲಿ ಅಸಾಧಾರಣಾ ಸಾಧನೆ ಮಾಡಿದ ಮಕ್ಕಳಿಗೆ ಒಂದು ಕೇತ್ರದಿಂದ 2 ಮಕ್ಕಳನ್ನು ಜಿಲ್ಲಾ ಸಮಿತಿಯಿಂದ ಆಯ್ಕೆ ಮಾಡಿ ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ ಪತ್ರ ಹಾಗೂ ರೂ.10,000/-ಗಳ ನಗದು ಬಹುಮಾನ ನೀಡಲಾಗುವುದು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

5 ರಿಂದ 18 ವರ್ಷ ಒಳಗಿನ ವಯೋಮಿತಿ ಮಕ್ಕಳು (ಜುಲೈ 31ರಂತೆ) ವಯಸ್ಸಿನ ಬಗ್ಗೆ ಜನನ ಪ್ರಮಾಣ ಪತ್ರವನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಣ ಮಾಡಿಸಿದ ಪ್ರತಿ ಲಗತ್ತಿಸಬೇಕು. ಪ್ರಭೆಯನ್ನು ಹೊಂದಿರುವ ಬಗ್ಗೆ ಪ್ರಮುಖ ದಿನ ಪತ್ರಿಕೆಯಲ್ಲಿ ಪ್ರಕಟಗೊಂಡಿರುವ ಪತ್ರಿಕೆ ತುಣುಕು/ಪ್ರಮಾಣ ಪತ್ರಗಳನ್ನು ಲಗತ್ತಿಸಬೇಕು. ಅಂತರ ರಾಷ್ಟ್ರೀಯ/ರಾಷ್ಟ್ರೀಯ/ರಾಜ್ಯ ಮಟ್ಟದಲ್ಲಿ ಭಾಗವಹಿಸಿರುವ ಪ್ರಶಸ್ತಿ ಪಡೆದಿರುವ ಬಗ್ಗೆ ಮಾಹಿತಿ ಲಗತ್ತಿಸಬೇಕು.

ಅರ್ಜಿದಾರರು, ಕರ್ನಾಟಕ ರಾಜ್ಯದಲ್ಲಿ ನೆಲಸಿರತಕ್ಕದ್ದು. ಸಾಧಿಸಿರುವ ಪ್ರತಿಭೆಯನ್ನು ಸಮರ್ಥಿಸಲು ಪೂರಕ ದಾಖಲಾತಿಗಳನ್ನು ಸಲ್ಲಿಸತಕ್ಕದ್ದು.
ಹಿಂದಿನ ವರ್ಷಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ ಪಡೆದ ಮಕ್ಕಳಿಗೆ ಪುನಃ ಪ್ರಶಸ್ತಿ ನೀಡಲು ಅವಕಾಶವಿರುವುದಿಲ್ಲ.

ಮೇಲಿನ ಮಾನದಂಡದನ್ವಯ ಆಸಕ್ತಿಯುಳ್ಳ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಗೆ ಒಳಪಡುವ ಮಕ್ಕಳು ಅರ್ಜಿಯನ್ನು ಪಡೆಯಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿ,ಕೊಠಡಿ ಸಂಖ್ಯೆ:206, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂ: 080-29787445, ತಾಲ್ಲೂಕುಗಳಲ್ಲಿ ಶಿಶು ಅಭಿವೃಧ್ಧಿ ಯೋಜನಾಧಿಕಾರಿ ಕಚೇರಿ,ದೊಡ್ಡಬಳ್ಳಾಪುರ-080-27625228, ಹೊಸಕೋಟೆ-080-27931493, ನೆಲಮಂಗಲ-080-27722177 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.

ಭರ್ತಿ ಮಾಡಿದ ಅರ್ಜಿಗಳನ್ನು ಸೂಕ್ತ ದಾಖಲಾತಿಗಳೊಂದಿಗೆ ದಿನಾಂಕ: 05.10.2023 ರ ಒಳಗೆ ಕಚೇರಿಗೆ ಸಲ್ಲಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

14 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

16 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

19 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

1 day ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

2 days ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

2 days ago