ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2023-2024ನೇ ಸಾಲಿಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ 1)ನಾವೀನ್ಯತೆ(Innovation), 2)ತಾರ್ಕಿಕ ಸಾಧನೆ(sholostic) (ಉದಾ:ಎರಡು ಅನುಕ್ರಮ ವರ್ಷಗಳಲ್ಲಿ ಗಣಿತ ಶಾಸ್ತ್ರದಲ್ಲಿ ಮೊದಲನೆ ಸ್ಥಾನ) 3) ಕ್ರೀಡೆ,(Sports), 4) ಕಲೆ,ಸಾಂಸ್ಕೃತಿಕ,ಮತ್ತು ಸಂಗೀತ (Art, cultural,music) ಕ್ಷೇತ್ರಗಳಲ್ಲಿ ಅಸಾಧಾರಣಾ ಸಾಧನೆ ಮಾಡಿದ ಮಕ್ಕಳಿಗೆ ಒಂದು ಕೇತ್ರದಿಂದ 2 ಮಕ್ಕಳನ್ನು ಜಿಲ್ಲಾ ಸಮಿತಿಯಿಂದ ಆಯ್ಕೆ ಮಾಡಿ ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ ಪತ್ರ ಹಾಗೂ ರೂ.10,000/-ಗಳ ನಗದು ಬಹುಮಾನ ನೀಡಲಾಗುವುದು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

5 ರಿಂದ 18 ವರ್ಷ ಒಳಗಿನ ವಯೋಮಿತಿ ಮಕ್ಕಳು (ಜುಲೈ 31ರಂತೆ) ವಯಸ್ಸಿನ ಬಗ್ಗೆ ಜನನ ಪ್ರಮಾಣ ಪತ್ರವನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಣ ಮಾಡಿಸಿದ ಪ್ರತಿ ಲಗತ್ತಿಸಬೇಕು. ಪ್ರಭೆಯನ್ನು ಹೊಂದಿರುವ ಬಗ್ಗೆ ಪ್ರಮುಖ ದಿನ ಪತ್ರಿಕೆಯಲ್ಲಿ ಪ್ರಕಟಗೊಂಡಿರುವ ಪತ್ರಿಕೆ ತುಣುಕು/ಪ್ರಮಾಣ ಪತ್ರಗಳನ್ನು ಲಗತ್ತಿಸಬೇಕು. ಅಂತರ ರಾಷ್ಟ್ರೀಯ/ರಾಷ್ಟ್ರೀಯ/ರಾಜ್ಯ ಮಟ್ಟದಲ್ಲಿ ಭಾಗವಹಿಸಿರುವ ಪ್ರಶಸ್ತಿ ಪಡೆದಿರುವ ಬಗ್ಗೆ ಮಾಹಿತಿ ಲಗತ್ತಿಸಬೇಕು.

ಅರ್ಜಿದಾರರು, ಕರ್ನಾಟಕ ರಾಜ್ಯದಲ್ಲಿ ನೆಲಸಿರತಕ್ಕದ್ದು. ಸಾಧಿಸಿರುವ ಪ್ರತಿಭೆಯನ್ನು ಸಮರ್ಥಿಸಲು ಪೂರಕ ದಾಖಲಾತಿಗಳನ್ನು ಸಲ್ಲಿಸತಕ್ಕದ್ದು.
ಹಿಂದಿನ ವರ್ಷಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ ಪಡೆದ ಮಕ್ಕಳಿಗೆ ಪುನಃ ಪ್ರಶಸ್ತಿ ನೀಡಲು ಅವಕಾಶವಿರುವುದಿಲ್ಲ.

ಮೇಲಿನ ಮಾನದಂಡದನ್ವಯ ಆಸಕ್ತಿಯುಳ್ಳ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಗೆ ಒಳಪಡುವ ಮಕ್ಕಳು ಅರ್ಜಿಯನ್ನು ಪಡೆಯಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿ,ಕೊಠಡಿ ಸಂಖ್ಯೆ:206, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂ: 080-29787445, ತಾಲ್ಲೂಕುಗಳಲ್ಲಿ ಶಿಶು ಅಭಿವೃಧ್ಧಿ ಯೋಜನಾಧಿಕಾರಿ ಕಚೇರಿ,ದೊಡ್ಡಬಳ್ಳಾಪುರ-080-27625228, ಹೊಸಕೋಟೆ-080-27931493, ನೆಲಮಂಗಲ-080-27722177 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.

ಭರ್ತಿ ಮಾಡಿದ ಅರ್ಜಿಗಳನ್ನು ಸೂಕ್ತ ದಾಖಲಾತಿಗಳೊಂದಿಗೆ ದಿನಾಂಕ: 05.10.2023 ರ ಒಳಗೆ ಕಚೇರಿಗೆ ಸಲ್ಲಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

6 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

17 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

2 days ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago