ಹೊರ ರಾಜ್ಯದ ಕಾರ್ಮಿಕರನ್ನು ಗುರಿಯಾಗಿಸಿ ಗಾಂಜಾ ಮಾರಾಟ: ಇಬ್ಬರ ಬಂಧನ, 3.61 ಕೆಜಿ ಗಾಂಜಾ ವಶ

ದೇವನಹಳ್ಳಿ: ಹೊರ ರಾಜ್ಯದ ಕಾರ್ಮಿಕರನ್ನು ಗುರಿಯಾಗಿಸಿಕೊಂಡು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಇಬ್ಬರನ್ನು ಚನ್ನರಾಯಪಟ್ಟಣ ಪೊಲೀಸರು ಬಂಧಿಸಿ, ಅವರಿಂದ 3 ಕೆಜಿ 610 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ದೇವನಹಳ್ಳಿ ತಾಲ್ಲೂಕಿನ ಪೋಲನಹಳ್ಳಿ ಕೆಐಎಡಿಬಿ ಪ್ರದೇಶದ ಫ್ಯಾಕ್ಟರಿಯೊಂದರ ಸಮೀಪ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಸಮೀರ್ (30) ಹಾಗೂ ಪ್ರಜ್ವಲ್ (19) ಎಂದು ಗುರುತಿಸಲಾಗಿದೆ. ಇವರು ಹೊರ ರಾಜ್ಯಗಳಿಂದ ಕೆಲಸಕ್ಕೆ ಬಂದ ಕಾರ್ಮಿಕರನ್ನು ಗುರಿಯಾಗಿಸಿಕೊಂಡು ಗಾಂಜಾ ಮಾರಾಟ ನಡೆಸುತ್ತಿದ್ದರು ಎನ್ನಲಾಗಿದೆ.

ಆರೋಪಿಗಳ ವಿರುದ್ಧ ಮಾದಕ ದ್ರವ್ಯ ಮತ್ತು ಮನೋವಿಕೃತ ಪದಾರ್ಥಗಳ ನಿಯಂತ್ರಣ ಕಾಯ್ದೆ (NDPS Act) ಅಡಿಯಲ್ಲಿ ಪ್ರಕರಣ ದಾಖಲಿಸಿ, ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ.

ದೊಡ್ಡಬಳ್ಳಾಪುರ ಡಿವೈಎಸ್ಪಿ ಪಾಂಡುರಂಗ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಚನ್ನರಾಯಪಟ್ಟಣ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕ ಪ್ರಕಾಶ್ ನೇತೃತ್ವದಲ್ಲಿ ಎಎಸ್‌ಐ ನಾರಾಯಣಸ್ವಾಮಿ ಹಾಗೂ ಸಿಬ್ಬಂದಿಗಳಾದ ಜೈ ಭೀಮ್, ಸಂಜು ವಾಲೇಕರ್ ಮತ್ತು ಶ್ರೀಧರ್ ಕುದುರಿ ಭಾಗವಹಿಸಿದ್ದರು.

Ramesh Babu

Journalist

Recent Posts

ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಮೂವರು ದುರ್ಮರಣ, ಮತ್ತೊಂದು ಮಗುವಿಗೆ ಗಂಭೀರ ಗಾಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಸಮೀಪ ಶುಕ್ರವಾರ ಸಂಜೆ ಸುಮಾರು 6:15ಕ್ಕೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…

53 minutes ago

ಬಂಗಾರದ ಕಿವಿ ಓಲೆಗಳಿಗಾಗಿ 80 ವರ್ಷದ ವೃದ್ಧೆಯ ಭೀಕರ ಕೊಲೆ

ಚಿಕ್ಕಬಳ್ಳಾಪುರ: ಬಂಗಾರದ ಕಿವಿ ಓಲೆಗಳಿಗಾಗಿ 80 ವರ್ಷದ ವೃದ್ಧೆಯನ್ನು ಹತ್ಯೆ ಮಾಡಿ, ಕಿವಿಗಳನ್ನು ಕತ್ತರಿಸಿ ಆಭರಣ ಕಳವು ಮಾಡಿರುವ ಅಮಾನುಷ…

2 hours ago

ನೇಕಾರ ಸಮ್ಮಾನ್ ಯೋಜನೆಯಡಿ ಆರ್ಥಿಕ ಸಹಾಯಕ್ಕಾಗಿ ಅರ್ಜಿ ಆಹ್ವಾನ

ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2026-27ನೇ ಸಾಲಿಗೆ ನೇಕಾರ ಸಮ್ಮಾನ್ ಯೋಜನೆಯಡಿ ಜಿಲ್ಲೆಯಲ್ಲಿರುವ ಪ್ರತಿ ಕೈಮಗ್ಗ, ವಿದ್ಯುತ್…

4 hours ago

ಗಂಧದ ಮರ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ: ₹30 ಲಕ್ಷಕ್ಕೂ ಅಧಿಕ ಮೌಲ್ಯದ 254 ಕೆಜಿ ತೂಕದ ಗಂಧದ ತುಂಡುಗಳ ವಶ

ದೊಡ್ಡಬಳ್ಳಾಪುರ: ನಗರ ವ್ಯಾಪ್ತಿಯಲ್ಲಿ ನಡೆದಿದ್ದ ಗಂಧದ ಮರ ಕಳ್ಳತನ ಪ್ರಕರಣವನ್ನು ದೊಡ್ಡಬಳ್ಳಾಪುರ ನಗರ ಪೊಲೀಸರು ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

6 hours ago

ಅಂತಾರಾಜ್ಯ ಮನೆಗಳ್ಳರ ಬಂಧನ: ₹11.42 ಲಕ್ಷ ಮೌಲ್ಯದ ಕಳವು ಮಾಲು ವಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿ, ಬಿಹಾರ ಮೂಲದ…

13 hours ago

ವಿಧಾನ ಪರಿಷತ್ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಲಕ್ಷ್ಮಿಪತಿ ಜಿ ಅಭಿನಂದನೆ

ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಬಿ.ಕೆ. ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರ್, ಪಿ.ವಿ. ಮೋಹನ್, ಶಿವಣ್ಣ…

1 day ago