ಹೊಲದಲ್ಲಿದ್ದ ರಾಗಿ ಹುಲ್ಲಿಗೆ ಬೆಂಕಿ: ರೈತ ಕಂಗಾಲು.!

ಅ ಭಾಗದ ಜನ್ರು ವರ್ಷಕ್ಕೊಮ್ಮೆ ರಾಗಿ ಬೆಳೆ ಬೆಳೆದು ವರ್ಷಪೂರ್ತಿ ಹೊಟ್ಟೆ ತುಂಬಿಸಿಕೊಳ್ಳುವ ರೈತರು.. ರಾಗಿಯಿಂದ ಬೇರ್ಪಡಿಸಿದ ಹುಲ್ಲುನ್ನು ರೈತರು ಬೇಸಿಗೆ ಕಾಲದಲ್ಲಿ ಹಸು – ದನಗಳಿಗೆ ಹಾಕಿ ಹೈನುಗಾರಿಕೆ ಮಾಡಿಕೊಳ್ಳುತ್ತಾರೆ… ಅದ್ರೆ ರೈತನ ಜಮೀನಿನಲ್ಲಿ ಕಾಟಾವ್ ಮಾಡಿ ಬಿಟ್ಟಿದ್ದ ರಾಗಿ ಹುಲ್ಲಿಗೆ ಬೆಂಕಿ ಬಿದ್ದು ರೈತನ ಹಸುಗಳ ವರ್ಷದ ಕೂಳು ಅರ್ಧ ಗಂಟೆಯಲ್ಲಿ ಸುಟ್ಟು ಭಸ್ಮವಾಗಿದೆ ಅದೇಲ್ಲಿ ಅಂತೀರಾ ಈ ವರದಿ ‌ನೋಡಿ…

ಹೀಗೆ ರಾಗಿ ಹುಲ್ಲಿಗೆ ಬೆಂಕಿ ಕಿಡಿ ಬಿದ್ದು ಧಗ ಧಗನೆ ಉರಿಯುತ್ತಿರುವ ಬೆಂಕಿ.. ಇನ್ನೊಂದು ಕಡೆ ಅಯ್ಯೋ ಹಸುಗಳ ವರ್ಷದ ಕೂಳು ಹಾಳಾಯಿತು.. ಏನ್ ಮಾಡ್ಲಿ ಅಂತ ಅಸಹಾಯಕತೆಯಿಂದಿರುವ ರೈತ. ಈ ಎಲ್ಲಾ ದೃಶ್ಯಗಳು ಕಂಡು ಬಂದಿದ್ದು ಚಿಕ್ಕಬಳ್ಳಾಪುರ ತಾಲ್ಲೂಕಿನ ಅರಸನಹಳ್ಳಿ ಗ್ರಾಮದಲ್ಲಿ…

ಅರಸನಹಳ್ಳಿ ಗ್ರಾಮದ ರೈತ ಮಂಜುನಾಥ್ ಅವರಿಗೆ ಸೇರಿದ ಎರಡು ಎಕರೆ ಜಮೀನಿನಲ್ಲಿ ಸಾವಿರಾರು ರೂಪಾಯಿ ಖರ್ಚು ಮಾಡಿ ರಾಗಿ ಬೆಳೆಯನ್ನಿಟ್ಟಿದ್ದರು.. ಒಳ್ಳೆಯ ಮಳೆ ಬೆಳೆಯಾಗಿ ಇತ್ತೀಚೆಗಷ್ಟೇ ರಾಗಿ ಯಂತ್ರದಿಂದ ಕಟಾವು ಮಾಡಿದ ರಾಗಿಯ ಹುಲ್ಲು‌ ಚೆನ್ನಾಗಿ ಒಣಗಲೆಂದು ಜಮೀನಿನಲ್ಲೆ ಬಿಟ್ಟಿದ್ದರು.. ಈಗಿರುವಾಗ ಹಸುಗಳ ಮೇವಿಗೆ ಹೊಲದಲ್ಲಿ ಸಂಗ್ರಹಿಸಿಟ್ಟಿದ್ದ ರಾಗಿ ಹುಲ್ಲಿಗೆ ಇದ್ದಕ್ಕಿದ್ದಂತೆ ಬೆಂಕಿ ತಗುಲಿ ಭಾರೀ ನಷ್ಟ ಸಂಭವಿಸಿದೆ. ಸುಮಾರು ಎರಡು ಎಕರೆ ಪ್ರದೇಶದಲ್ಲಿ ಬೆಳೆದು ಕಟಾವು ಮಾಡಿದ್ದ ರಾಗಿ ಹುಲ್ಲು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಜಾನುವಾರುಗಳ ಮೇವುಗಾಗಿ ವರ್ಷಪೂರ್ತಿ ಬಳಸುವ ಉದ್ದೇಶದಿಂದ ಸಂಗ್ರಹಿಸಿದ್ದ ಹುಲ್ಲು ಬೆಂಕಿಗಾಹುತಿಯಾಗಿದೆ.

ಇನ್ನೂ ರೈತ ಮಂಜುನಾಥ್ ಜಮೀನಿನಲ್ಲಿರುವ ರಾಗಿ‌ ಹುಲ್ಲಿಗೆ ಬೆಂಕಿ ಬಿದ್ದಿರುವ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ್ದಾರೆ ಅಷ್ಟೊತ್ತಿಗೆ ರಾಗಿ ಹುಲ್ಲು ಸಂಪೂರ್ಣವಾಗಿ ಸುಟ್ಟು ಕರಕಲಾಗಿತ್ತು ಅದ್ರೆ ಬೆಂಕಿ ಹೇಗೆ ಉಂಟಾಯಿತು ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ಈ ಘಟನೆಯಿಂದ ರೈತ ಮಂಜುನಾಥ್ ಆರ್ಥಿಕವಾಗಿ ಕಂಗಾಲಾಗಿದ್ದು, ಹಸು–ದನಗಳಿಗೆ ಮೇವು ಇಲ್ಲದಂತಾಗಿದೆ.

ಇನ್ನೂ ರಾಗಿ ಬೆಳೆಯೇ ಈ ಭಾಗದ ರೈತರಿಗೆ ಆಹಾರ, ಹೈನುಗಾರಿಕೆ ಮತ್ತು ಜೀವನಾಧಾರ.

ಆದ್ರೆ ಒಂದೇ ಘಟನೆಯಲ್ಲಿ ರೈತನ ವರ್ಷದ ಶ್ರಮ ನೀರಿನಲ್ಲಿ ಹೋಮವಾದಂತಾಗಿದೆ. ಕೃಷಿ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಮತ್ತು ರೈತನಿಗೆ ಸೂಕ್ತ ಪರಿಹಾರ ನೀಡಬೇಕು ಎನ್ನುವುದು ಗ್ರಾಮಸ್ಥರ ಒತ್ತಾಯವಾಗಿದೆ.

Ramesh Babu

Journalist

Recent Posts

ಆಸ್ತಿ ವಿವರ ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಕೆ ವಿಚಾರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ. ಚುನಾವಣಾ ಆಯೋಗ…

53 minutes ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

3 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

8 hours ago

ವೈಚಾರಿಕ ( ವೈಜ್ಞಾನಿಕ ) ಅಧ್ಯಾತ್ಮ………

ಅಧ್ಯಾತ್ಮ ಮತ್ತು ಸದ್ಗುರು ಜಗ್ಗಿ ವಾಸುದೇವ್........ ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಜನಪ್ರಿಯರಾದ ಅಧ್ಯಾತ್ಮ ಗುರು. ಅಧ್ಯಾತ್ಮಿಕ ಚಿಂತಕರಲ್ಲಿ ವಿವಿಧ ರೀತಿಯ…

9 hours ago

ಐಸಿಸಿ ಟಿ-20 ವಿಶ್ವಕಪ್ ಟೂರ್ನಿ: ಪಾಕಿಸ್ತಾನ ತಂಡವನ್ನು 61 ರನ್ ಗಳಿಂದ ಬಗ್ಗುಬಡಿದ ಭಾರತ: ದೇಶದ ಜನತೆಗೆ ಮಹಾಶಿವರಾತ್ರಿ ಗಿಫ್ಟ್

ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಭಾರತ…

10 hours ago

ಫೆ.26ರಂದು ಪ್ರಸಿದ್ದ ಮಧುರೆ ಶನಿಮಹಾತ್ಮಸ್ವಾಮಿ 71ನೇ ಬ್ರಹ್ಮರಥೋತ್ಸವ

ಫೆ.26ರಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ ಎಂದು ದೇವಾಲಯದ ಪ್ರಧಾನ ಅರ್ಚಕ…

20 hours ago