ಹೊಲದಲ್ಲಿದ್ದ ರಾಗಿ ಹುಲ್ಲಿಗೆ ಬೆಂಕಿ: ರೈತ ಕಂಗಾಲು.!

ಅ ಭಾಗದ ಜನ್ರು ವರ್ಷಕ್ಕೊಮ್ಮೆ ರಾಗಿ ಬೆಳೆ ಬೆಳೆದು ವರ್ಷಪೂರ್ತಿ ಹೊಟ್ಟೆ ತುಂಬಿಸಿಕೊಳ್ಳುವ ರೈತರು.. ರಾಗಿಯಿಂದ ಬೇರ್ಪಡಿಸಿದ ಹುಲ್ಲುನ್ನು ರೈತರು ಬೇಸಿಗೆ ಕಾಲದಲ್ಲಿ ಹಸು – ದನಗಳಿಗೆ ಹಾಕಿ ಹೈನುಗಾರಿಕೆ ಮಾಡಿಕೊಳ್ಳುತ್ತಾರೆ… ಅದ್ರೆ ರೈತನ ಜಮೀನಿನಲ್ಲಿ ಕಾಟಾವ್ ಮಾಡಿ ಬಿಟ್ಟಿದ್ದ ರಾಗಿ ಹುಲ್ಲಿಗೆ ಬೆಂಕಿ ಬಿದ್ದು ರೈತನ ಹಸುಗಳ ವರ್ಷದ ಕೂಳು ಅರ್ಧ ಗಂಟೆಯಲ್ಲಿ ಸುಟ್ಟು ಭಸ್ಮವಾಗಿದೆ ಅದೇಲ್ಲಿ ಅಂತೀರಾ ಈ ವರದಿ ‌ನೋಡಿ…

ಹೀಗೆ ರಾಗಿ ಹುಲ್ಲಿಗೆ ಬೆಂಕಿ ಕಿಡಿ ಬಿದ್ದು ಧಗ ಧಗನೆ ಉರಿಯುತ್ತಿರುವ ಬೆಂಕಿ.. ಇನ್ನೊಂದು ಕಡೆ ಅಯ್ಯೋ ಹಸುಗಳ ವರ್ಷದ ಕೂಳು ಹಾಳಾಯಿತು.. ಏನ್ ಮಾಡ್ಲಿ ಅಂತ ಅಸಹಾಯಕತೆಯಿಂದಿರುವ ರೈತ. ಈ ಎಲ್ಲಾ ದೃಶ್ಯಗಳು ಕಂಡು ಬಂದಿದ್ದು ಚಿಕ್ಕಬಳ್ಳಾಪುರ ತಾಲ್ಲೂಕಿನ ಅರಸನಹಳ್ಳಿ ಗ್ರಾಮದಲ್ಲಿ…

ಅರಸನಹಳ್ಳಿ ಗ್ರಾಮದ ರೈತ ಮಂಜುನಾಥ್ ಅವರಿಗೆ ಸೇರಿದ ಎರಡು ಎಕರೆ ಜಮೀನಿನಲ್ಲಿ ಸಾವಿರಾರು ರೂಪಾಯಿ ಖರ್ಚು ಮಾಡಿ ರಾಗಿ ಬೆಳೆಯನ್ನಿಟ್ಟಿದ್ದರು.. ಒಳ್ಳೆಯ ಮಳೆ ಬೆಳೆಯಾಗಿ ಇತ್ತೀಚೆಗಷ್ಟೇ ರಾಗಿ ಯಂತ್ರದಿಂದ ಕಟಾವು ಮಾಡಿದ ರಾಗಿಯ ಹುಲ್ಲು‌ ಚೆನ್ನಾಗಿ ಒಣಗಲೆಂದು ಜಮೀನಿನಲ್ಲೆ ಬಿಟ್ಟಿದ್ದರು.. ಈಗಿರುವಾಗ ಹಸುಗಳ ಮೇವಿಗೆ ಹೊಲದಲ್ಲಿ ಸಂಗ್ರಹಿಸಿಟ್ಟಿದ್ದ ರಾಗಿ ಹುಲ್ಲಿಗೆ ಇದ್ದಕ್ಕಿದ್ದಂತೆ ಬೆಂಕಿ ತಗುಲಿ ಭಾರೀ ನಷ್ಟ ಸಂಭವಿಸಿದೆ. ಸುಮಾರು ಎರಡು ಎಕರೆ ಪ್ರದೇಶದಲ್ಲಿ ಬೆಳೆದು ಕಟಾವು ಮಾಡಿದ್ದ ರಾಗಿ ಹುಲ್ಲು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಜಾನುವಾರುಗಳ ಮೇವುಗಾಗಿ ವರ್ಷಪೂರ್ತಿ ಬಳಸುವ ಉದ್ದೇಶದಿಂದ ಸಂಗ್ರಹಿಸಿದ್ದ ಹುಲ್ಲು ಬೆಂಕಿಗಾಹುತಿಯಾಗಿದೆ.

ಇನ್ನೂ ರೈತ ಮಂಜುನಾಥ್ ಜಮೀನಿನಲ್ಲಿರುವ ರಾಗಿ‌ ಹುಲ್ಲಿಗೆ ಬೆಂಕಿ ಬಿದ್ದಿರುವ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ್ದಾರೆ ಅಷ್ಟೊತ್ತಿಗೆ ರಾಗಿ ಹುಲ್ಲು ಸಂಪೂರ್ಣವಾಗಿ ಸುಟ್ಟು ಕರಕಲಾಗಿತ್ತು ಅದ್ರೆ ಬೆಂಕಿ ಹೇಗೆ ಉಂಟಾಯಿತು ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ಈ ಘಟನೆಯಿಂದ ರೈತ ಮಂಜುನಾಥ್ ಆರ್ಥಿಕವಾಗಿ ಕಂಗಾಲಾಗಿದ್ದು, ಹಸು–ದನಗಳಿಗೆ ಮೇವು ಇಲ್ಲದಂತಾಗಿದೆ.

ಇನ್ನೂ ರಾಗಿ ಬೆಳೆಯೇ ಈ ಭಾಗದ ರೈತರಿಗೆ ಆಹಾರ, ಹೈನುಗಾರಿಕೆ ಮತ್ತು ಜೀವನಾಧಾರ.

ಆದ್ರೆ ಒಂದೇ ಘಟನೆಯಲ್ಲಿ ರೈತನ ವರ್ಷದ ಶ್ರಮ ನೀರಿನಲ್ಲಿ ಹೋಮವಾದಂತಾಗಿದೆ. ಕೃಷಿ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಮತ್ತು ರೈತನಿಗೆ ಸೂಕ್ತ ಪರಿಹಾರ ನೀಡಬೇಕು ಎನ್ನುವುದು ಗ್ರಾಮಸ್ಥರ ಒತ್ತಾಯವಾಗಿದೆ.

Ramesh Babu

Journalist

Recent Posts

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

3 hours ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

3 hours ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

22 hours ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

22 hours ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

22 hours ago

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

1 day ago