ಹೊಸಕೋಟೆಯಲ್ಲಿ ಡಿಸೆಂಬರ್ 1ರಂದು ವಿಶ್ವ ಏಡ್ಸ್ ದಿನಾಚರಣೆ: ತಾಲ್ಲೂಕುವಾರು ಸೋಂಕಿತರ ಅಂಕಿಅಂಶ ಇಲ್ಲಿದೆ

ವಿಶ್ವದಾದ್ಯಂತ ಹರಡಿರುವ ಹೆಚ್.ಐ.ವಿ/ಏಡ್ಸ್ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಡಿಸೆಂಬರ್ 01  ರಂದು ವಿಶ್ವ ಏಡ್ಸ್ ದಿನವನ್ನು ವಿಶ್ವದಾದ್ಯಂತ ಆಚರಿಸಲಾಗುತ್ತಿದೆ. ಅದರಂತೆಯೇ ಜಿಲ್ಲೆಯಲ್ಲಿ ಡಿಸೆಂಬರ್ 01 ರಂದು ಹೊಸಕೋಟೆ ತಾಲ್ಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಲ್ಲಿ ವಿಶ್ವ ಏಡ್ಸ್ ದಿನವನ್ನು ಆಚರಿಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುನಿಲ್ ಕುಮಾರ್ ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದ ಜಿಲ್ಲಾ ಆರೋಗ್ಯ ಅಧಿಕಾರಿಗಳ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.

2023ರ ವಿಶ್ವ ಏಡ್ಸ್ ದಿನವನ್ನು “ಸಮುದಾಯಗಳು ಮುನ್ನಡೆಸಲಿ ” (let communities lead) ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುವುದು. ಕಾರ್ಯಕ್ರಮ ದಿನದಂದು ಹೊಸಕೋಟೆ ಟೌನ್ ನಲ್ಲಿ ಜಾಥಾ ಹಮ್ಮಿಕೊಂಡಿದ್ದು ಜನರಿಗೆ ಏಡ್ಸ್ ಕುರಿತು ಜಾಗೃತಿ ಮೂಡಿಸಲಾಗುವುದು. ಕಾಲೇಜುಗಳು, ಜನಸಂದಣಿ ಸ್ಥಳಗಳು, ಹೆಚ್ಚು ಸೋಂಕಿತರಿರುವ ಪ್ರದೇಶಗಳಲ್ಲಿ  ಬೀದಿ ನಾಟಕಗಳ ಮೂಲಕ, ವಿವಿಧ  ಜಾಗೃತಿ  ಕಾರ್ಯಕ್ರಮ ಗಳನ್ನು ಏರ್ಪಡಿಸುವ ಮೂಲಕ ಏಡ್ಸ್  ಕುರಿತು ಪ್ರತಿ ವರ್ಷ ಜನಜಾಗೃತಿ ಮೂಡಿಸುತ್ತಿದ್ದೇವೆ ಎಂದು ಹೇಳಿದರು.

ಜಿಲ್ಲೆಯಲ್ಲಿ 2007 ರಿಂದ 2023 ರ ಅಕ್ಟೋಬರ್ ಮಾಹೆಯವರೆಗೆ 2336 ಪುರುಷರು, 1876 ಮಹಿಳೆಯರು ಹಾಗೂ 39 ಲಿಂಗತ್ವ ಅಲ್ಪಸಂಖ್ಯಾತರು ಸೇರಿ ಒಟ್ಟು 4251 ಹೆಚ್.ಐ.ವಿ ಸೋಂಕಿತರಿದ್ದಾರೆ.

ತಾಲ್ಲೂಕುವಾರು ಸೋಂಕಿತರ ಸಂಖ್ಯೆ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 581 ಪುರುಷರು, 444 ಸ್ತ್ರೀಯರು, 02 ಲಿಂಗತ್ವ ಅಲ್ಪಸಂಖ್ಯಾತರು ಸೇರಿ ಒಟ್ಟು 1027 ಸೋಂಕಿತರಿದ್ದಾರೆ.

ದೇವನಹಳ್ಳಿ ತಾಲ್ಲೂಕಿನಲ್ಲಿ 497 ಪುರುಷರು, 385 ಸ್ತ್ರೀಯರು, 02 ಲಿಂಗತ್ವ ಅಲ್ಪಸಂಖ್ಯಾತರು ಸೇರಿ ಒಟ್ಟು 884 ಸೋಂಕಿತರಿದ್ದಾರೆ.

ಹೋಸಕೋಟೆ ತಾಲ್ಲೂಕಿನಲ್ಲಿ 733 ಪುರುಷರು, 600 ಸ್ತ್ರೀಯರು, 04 ಲಿಂಗತ್ವ ಅಲ್ಪಸಂಖ್ಯಾತರು ಸೇರಿ ಒಟ್ಟು 1337 ಸೋಂಕಿತರಿದ್ದಾರೆ‌.

ನೆಲಮಂಗಲ ತಾಲ್ಲೂಕಿನಲ್ಲಿ 525 ಪುರುಷರು , 447 ಸ್ತ್ರೀಯರು, 31 ಲಿಂಗತ್ವ ಅಲ್ಪಸಂಖ್ಯಾತರು ಸೇರಿ ಒಟ್ಟು 1003 ಸೋಂಕಿತರಿದ್ದಾರೆ ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕದ ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ.ನಾಗೇಶ್ ಉಪಸ್ಥಿತರಿದ್ದರು.

Ramesh Babu

Journalist

Recent Posts

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

1 hour ago

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

2 hours ago

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

8 hours ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

9 hours ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

12 hours ago

ರಾಹುಲ್ ಗಾಂಧಿ ಸೈದ್ಧಾಂತಿಕ ಬದ್ಧತೆಯಿರುವ ವ್ಯಕ್ತಿ….

ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…

14 hours ago