ವಿಶ್ವದಾದ್ಯಂತ ಹರಡಿರುವ ಹೆಚ್.ಐ.ವಿ/ಏಡ್ಸ್ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಡಿಸೆಂಬರ್ 01 ರಂದು ವಿಶ್ವ ಏಡ್ಸ್ ದಿನವನ್ನು ವಿಶ್ವದಾದ್ಯಂತ ಆಚರಿಸಲಾಗುತ್ತಿದೆ. ಅದರಂತೆಯೇ ಜಿಲ್ಲೆಯಲ್ಲಿ ಡಿಸೆಂಬರ್ 01 ರಂದು ಹೊಸಕೋಟೆ ತಾಲ್ಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಲ್ಲಿ ವಿಶ್ವ ಏಡ್ಸ್ ದಿನವನ್ನು ಆಚರಿಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುನಿಲ್ ಕುಮಾರ್ ಅವರು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದ ಜಿಲ್ಲಾ ಆರೋಗ್ಯ ಅಧಿಕಾರಿಗಳ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.
2023ರ ವಿಶ್ವ ಏಡ್ಸ್ ದಿನವನ್ನು “ಸಮುದಾಯಗಳು ಮುನ್ನಡೆಸಲಿ ” (let communities lead) ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುವುದು. ಕಾರ್ಯಕ್ರಮ ದಿನದಂದು ಹೊಸಕೋಟೆ ಟೌನ್ ನಲ್ಲಿ ಜಾಥಾ ಹಮ್ಮಿಕೊಂಡಿದ್ದು ಜನರಿಗೆ ಏಡ್ಸ್ ಕುರಿತು ಜಾಗೃತಿ ಮೂಡಿಸಲಾಗುವುದು. ಕಾಲೇಜುಗಳು, ಜನಸಂದಣಿ ಸ್ಥಳಗಳು, ಹೆಚ್ಚು ಸೋಂಕಿತರಿರುವ ಪ್ರದೇಶಗಳಲ್ಲಿ ಬೀದಿ ನಾಟಕಗಳ ಮೂಲಕ, ವಿವಿಧ ಜಾಗೃತಿ ಕಾರ್ಯಕ್ರಮ ಗಳನ್ನು ಏರ್ಪಡಿಸುವ ಮೂಲಕ ಏಡ್ಸ್ ಕುರಿತು ಪ್ರತಿ ವರ್ಷ ಜನಜಾಗೃತಿ ಮೂಡಿಸುತ್ತಿದ್ದೇವೆ ಎಂದು ಹೇಳಿದರು.
ಜಿಲ್ಲೆಯಲ್ಲಿ 2007 ರಿಂದ 2023 ರ ಅಕ್ಟೋಬರ್ ಮಾಹೆಯವರೆಗೆ 2336 ಪುರುಷರು, 1876 ಮಹಿಳೆಯರು ಹಾಗೂ 39 ಲಿಂಗತ್ವ ಅಲ್ಪಸಂಖ್ಯಾತರು ಸೇರಿ ಒಟ್ಟು 4251 ಹೆಚ್.ಐ.ವಿ ಸೋಂಕಿತರಿದ್ದಾರೆ.
ತಾಲ್ಲೂಕುವಾರು ಸೋಂಕಿತರ ಸಂಖ್ಯೆ
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 581 ಪುರುಷರು, 444 ಸ್ತ್ರೀಯರು, 02 ಲಿಂಗತ್ವ ಅಲ್ಪಸಂಖ್ಯಾತರು ಸೇರಿ ಒಟ್ಟು 1027 ಸೋಂಕಿತರಿದ್ದಾರೆ.
ದೇವನಹಳ್ಳಿ ತಾಲ್ಲೂಕಿನಲ್ಲಿ 497 ಪುರುಷರು, 385 ಸ್ತ್ರೀಯರು, 02 ಲಿಂಗತ್ವ ಅಲ್ಪಸಂಖ್ಯಾತರು ಸೇರಿ ಒಟ್ಟು 884 ಸೋಂಕಿತರಿದ್ದಾರೆ.
ಹೋಸಕೋಟೆ ತಾಲ್ಲೂಕಿನಲ್ಲಿ 733 ಪುರುಷರು, 600 ಸ್ತ್ರೀಯರು, 04 ಲಿಂಗತ್ವ ಅಲ್ಪಸಂಖ್ಯಾತರು ಸೇರಿ ಒಟ್ಟು 1337 ಸೋಂಕಿತರಿದ್ದಾರೆ.
ನೆಲಮಂಗಲ ತಾಲ್ಲೂಕಿನಲ್ಲಿ 525 ಪುರುಷರು , 447 ಸ್ತ್ರೀಯರು, 31 ಲಿಂಗತ್ವ ಅಲ್ಪಸಂಖ್ಯಾತರು ಸೇರಿ ಒಟ್ಟು 1003 ಸೋಂಕಿತರಿದ್ದಾರೆ ಎಂದು ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕದ ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ.ನಾಗೇಶ್ ಉಪಸ್ಥಿತರಿದ್ದರು.
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…
ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…