ಹೊಸಕೋಟೆಯಲ್ಲಿ ಡಿಸೆಂಬರ್ 1ರಂದು ವಿಶ್ವ ಏಡ್ಸ್ ದಿನಾಚರಣೆ: ತಾಲ್ಲೂಕುವಾರು ಸೋಂಕಿತರ ಅಂಕಿಅಂಶ ಇಲ್ಲಿದೆ

ವಿಶ್ವದಾದ್ಯಂತ ಹರಡಿರುವ ಹೆಚ್.ಐ.ವಿ/ಏಡ್ಸ್ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಡಿಸೆಂಬರ್ 01  ರಂದು ವಿಶ್ವ ಏಡ್ಸ್ ದಿನವನ್ನು ವಿಶ್ವದಾದ್ಯಂತ ಆಚರಿಸಲಾಗುತ್ತಿದೆ. ಅದರಂತೆಯೇ ಜಿಲ್ಲೆಯಲ್ಲಿ ಡಿಸೆಂಬರ್ 01 ರಂದು ಹೊಸಕೋಟೆ ತಾಲ್ಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಲ್ಲಿ ವಿಶ್ವ ಏಡ್ಸ್ ದಿನವನ್ನು ಆಚರಿಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುನಿಲ್ ಕುಮಾರ್ ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದ ಜಿಲ್ಲಾ ಆರೋಗ್ಯ ಅಧಿಕಾರಿಗಳ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.

2023ರ ವಿಶ್ವ ಏಡ್ಸ್ ದಿನವನ್ನು “ಸಮುದಾಯಗಳು ಮುನ್ನಡೆಸಲಿ ” (let communities lead) ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುವುದು. ಕಾರ್ಯಕ್ರಮ ದಿನದಂದು ಹೊಸಕೋಟೆ ಟೌನ್ ನಲ್ಲಿ ಜಾಥಾ ಹಮ್ಮಿಕೊಂಡಿದ್ದು ಜನರಿಗೆ ಏಡ್ಸ್ ಕುರಿತು ಜಾಗೃತಿ ಮೂಡಿಸಲಾಗುವುದು. ಕಾಲೇಜುಗಳು, ಜನಸಂದಣಿ ಸ್ಥಳಗಳು, ಹೆಚ್ಚು ಸೋಂಕಿತರಿರುವ ಪ್ರದೇಶಗಳಲ್ಲಿ  ಬೀದಿ ನಾಟಕಗಳ ಮೂಲಕ, ವಿವಿಧ  ಜಾಗೃತಿ  ಕಾರ್ಯಕ್ರಮ ಗಳನ್ನು ಏರ್ಪಡಿಸುವ ಮೂಲಕ ಏಡ್ಸ್  ಕುರಿತು ಪ್ರತಿ ವರ್ಷ ಜನಜಾಗೃತಿ ಮೂಡಿಸುತ್ತಿದ್ದೇವೆ ಎಂದು ಹೇಳಿದರು.

ಜಿಲ್ಲೆಯಲ್ಲಿ 2007 ರಿಂದ 2023 ರ ಅಕ್ಟೋಬರ್ ಮಾಹೆಯವರೆಗೆ 2336 ಪುರುಷರು, 1876 ಮಹಿಳೆಯರು ಹಾಗೂ 39 ಲಿಂಗತ್ವ ಅಲ್ಪಸಂಖ್ಯಾತರು ಸೇರಿ ಒಟ್ಟು 4251 ಹೆಚ್.ಐ.ವಿ ಸೋಂಕಿತರಿದ್ದಾರೆ.

ತಾಲ್ಲೂಕುವಾರು ಸೋಂಕಿತರ ಸಂಖ್ಯೆ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 581 ಪುರುಷರು, 444 ಸ್ತ್ರೀಯರು, 02 ಲಿಂಗತ್ವ ಅಲ್ಪಸಂಖ್ಯಾತರು ಸೇರಿ ಒಟ್ಟು 1027 ಸೋಂಕಿತರಿದ್ದಾರೆ.

ದೇವನಹಳ್ಳಿ ತಾಲ್ಲೂಕಿನಲ್ಲಿ 497 ಪುರುಷರು, 385 ಸ್ತ್ರೀಯರು, 02 ಲಿಂಗತ್ವ ಅಲ್ಪಸಂಖ್ಯಾತರು ಸೇರಿ ಒಟ್ಟು 884 ಸೋಂಕಿತರಿದ್ದಾರೆ.

ಹೋಸಕೋಟೆ ತಾಲ್ಲೂಕಿನಲ್ಲಿ 733 ಪುರುಷರು, 600 ಸ್ತ್ರೀಯರು, 04 ಲಿಂಗತ್ವ ಅಲ್ಪಸಂಖ್ಯಾತರು ಸೇರಿ ಒಟ್ಟು 1337 ಸೋಂಕಿತರಿದ್ದಾರೆ‌.

ನೆಲಮಂಗಲ ತಾಲ್ಲೂಕಿನಲ್ಲಿ 525 ಪುರುಷರು , 447 ಸ್ತ್ರೀಯರು, 31 ಲಿಂಗತ್ವ ಅಲ್ಪಸಂಖ್ಯಾತರು ಸೇರಿ ಒಟ್ಟು 1003 ಸೋಂಕಿತರಿದ್ದಾರೆ ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕದ ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ.ನಾಗೇಶ್ ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

7 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

11 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

11 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

14 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago