ಸಿಲಿಕಾನ್ ಸಿಟಿ ಬೆಂಗಳೂರು ಹೊರಭಾಗದಲ್ಲಿರುವ ಹೊಸಕೋಟೆ ತಾಲೂಕಿನಲ್ಲಿ ಸರಗಳ್ಳರ ಹಾವಳಿ ಹೆಚ್ಚಾಗಿದ್ದು, ಒಂದೇ ದಿನ 5 ಕಡೆ ಸರಗಳ್ಳತನ ನಡೆದಿದೆ.
ಹೊಸಕೋಟೆಯ 28ನೇ ವಾರ್ಡ್ ಕುವೆಂಪುನಗರದಲ್ಲಿ ಘಟನೆ ನಡೆದಿದೆ.
ದ್ವಿಚಕ್ರದಲ್ಲಿ ಬಂದು ಕಳ್ಳತನ, ಸರಗಳ್ಳತನ ಮಾಡಿ ಎಸ್ಕೇಪ್ ಆಗುತ್ತಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಅಂಗಡಿಯಲ್ಲಿ ವ್ಯಾಪಾರದ ನೆಪದಲ್ಲಿ ಬಂದು ಕಳ್ಳತನ ಮಾಡಲಾಗುತ್ತಿದೆ. ಕಳ್ಳರ ಹಾವಳಿಯಿಂದ ಜೀವ ಭಯದಲ್ಲಿ ಅಂಗಡಿ ಮಾಲೀಕರು ಜೀವನ ನಡೆಸುತ್ತಿದ್ದಾರೆ.
ಅಂಗಡಿಯಲ್ಲಿದ್ದ ಮಹಿಳೆಯ ಕೊರಳಲ್ಲಿ 40 ಗ್ರಾಂ ತೂಕದ ಚಿನ್ನದ ಸರ ಕಳ್ಳತನ ಮಾಡಿ ಕಳ್ಳರು ಎಸ್ಕೇಪ್ ಆಗಿದ್ದಾರೆ.
ಮಹಿಳೆ ಚಿನ್ನದ ಸರ ಹಿಡಿದುಕೊಂಡ ಹಿನ್ನೆಲೆ ಅರ್ಧಕ್ಕೆ ಕಟ್ ಆಗಿದೆ. ಕೂಡಲೇ ಕಳ್ಳರನ್ನು ಬಂಧಿಸುವಂತೆ ಸಾರ್ವಜನಿಕರ ಒತ್ತಾಯ ಮಾಡುತ್ತಿದ್ದಾರೆ.
ಹೊಸಕೋಟೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…